AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ

ನಮ್ರತಾ ಗೌಡ ಅವರು 'ಕರ್ಣ' ಧಾರಾವಾಹಿಯಲ್ಲಿ ನಿತ್ಯಾ ಪಾತ್ರದ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸೂರಜ್ ಜೊತೆಗಿನ ಮದುವೆ ಪ್ರೋಮೋ ಭವ್ಯಾ ಗೌಡ ಅಭಿಮಾನಿಗಳಲ್ಲಿ ದ್ವೇಷ ಮೂಡಿಸಿದೆ. ಈ ದ್ವೇಷ ಕಂಡು ಬೇಸರಗೊಂಡ ನಮ್ರತಾ, ತಮ್ಮ ನಿತ್ಯಾ ಪಾತ್ರವನ್ನು ಬಲಿಷ್ಠ ಮತ್ತು ಪ್ರೀತಿಯ ಪಾತ್ರವೆಂದು ಸಮರ್ಥಿಸಿಕೊಂಡಿದ್ದಾರೆ.

‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
ನಮ್ರತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 04, 2025 | 8:18 AM

Share

ನಮ್ರತಾ ಗೌಡ (Namrata Gowda) ಅವರು ‘ನಾಗಿಣಿ 2’ ಧಾರಾವಾಹಿ ಮೂಲಕ ಮನೆ ಮಾತಾದವರು. ಆ ಬಳಿಕ ಬಿಗ್ ಬಾಸ್​ನಲ್ಲಿ ಸ್ಪರ್ಧೆ ಮಾಡಿ ಕೊನೆಯವರೆಗೂ ಹೋರಾಡಿದರು. ಈಗ ಅವರು ಮತ್ತೆ ಜೀ ಕನ್ನಡಕ್ಕೆ ಮರಳಿದ್ದಾರೆ. ‘ಕರ್ಣ’ ಧಾರಾವಾಹಿಯಲ್ಲಿ ನಿತ್ಯಾ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಬಗ್ಗೆ ಕೆಲವರು ಏಕಾಏಕಿ ದ್ವೇಷ ಸಾಧಿಸೋಕೆ ಆರಂಭಿಸಿದ್ದಾರೆ ಮತ್ತು ಇದನ್ನು ನೋಡಿ ಅವರಿಗೆ ಬೇಸರ ಆಗಿದೆ. ಅಷ್ಟಕ್ಕೂ ನಮ್ರತಾ ಗೌಡ ಮೇಲೆ ಕೆಲವರಿಗೆ ದ್ವೇಷ ಏಕೆ? ಇದಕ್ಕೆ ನಮ್ರತಾ ಉತ್ತರ ಏನು ಎಂಬ ಬಗ್ಗೆ ತಿಳಿದುಕೊಳ್ಳೋಣ.

ಅಸಲಿಗೆ ನಮ್ರತಾ ಗೌಡ ಅವರ ಮೇಲೆ ದ್ವೇಷ ಬೆಳೆಯಲು ಕಾರಣವಾಗಿದ್ದು ಅವರು ನಟಿಸುತ್ತಿರುವ ‘ಕರ್ಣ’ ಧಾರಾವಾಹಿ ಎಂದೇ ಹೇಳಬಹುದು. ಅವರು ಈ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಗೆ ಸೂರಜ್ ಜೊತೆ ಮದುವೆ ಕೂಡ ನಿಶ್ಚಯವಾಗಿದೆ. ಮತ್ತೊಂದೆಡೆ ಅವಳ ಸಹೋದರಿ ನಿಧಿ (ಭವ್ಯಾ ಗೌಡ) ಹಾಗೂ ಕರ್ಣ ಮಧ್ಯೆ ಪ್ರೀತಿ ಮೂಡಿದೆ. ಇಷ್ಟೇ ಆಗಿದ್ದರೆ ದ್ವೇಷ ಉಕ್ಕುತಿರಲಿಲ್ಲವೇನೋ.

ಇದನ್ನೂ ಓದಿ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಈಗ ಜೀ ಕನ್ನಡ ವಾಹಿನಿ ಹೊಸ ಪ್ರೋಮೋ ಬಿಟ್ಟಿದೆ. ಇದರಲ್ಲಿ ಕರ್ಣ ಹಾಗೂ ನಿತ್ಯಾ ಮದುವೆ ನೆರವೇರುವಂತೆ ತೋರಿಸಿದ್ದಾರೆ. ಇದು ಭವ್ಯಾ ಗೌಡ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ಕಾರಣದಿಂದಲೇ ನಿತ್ಯಾ ಪಾತ್ರಕ್ಕೆ ಎಲ್ಲರೂ ಬಯ್ಯುತ್ತಿದ್ದಾರೆ. ಈ ಬಗ್ಗೆ ನಮ್ರತಾ ಗೌಡ ಅವರು ಬರೆದುಕೊಂಡಿದ್ದಾರೆ.

‘ಸುಮಾರು 23 ವರ್ಷಗಳ ಸುದೀರ್ಘ ನಟನೆಯ ಅನುಭವದಲ್ಲಿ ಸಾಕಷ್ಟು ವಿಭಿನ್ನ ಪಾತ್ರಗಳು. ಕೊಂಚ ಬ್ರೇಕ್​ನ ನಂತರ ಕೇಳಿದ ಪಾತ್ರವೇ ನಿತ್ಯ. ಕಥೆ ಮತ್ತು ಪಾತ್ರದ ಆಳ ಕೇಳಿದಾಗ ನನಗೆ ತುಂಬ ಹಿಡಿಸಿದವಳು. ಬಲಿಷ್ಠಳು, ಸ್ವತಂತ್ರಳು, ಸದಾ ತನಗಿಂತ ಇತರರ ಅಗತ್ಯಗಳನ್ನು ಮೊದಲು ಯೋಚಿಸುವವಳು. ಇಷ್ಟೆಲ್ಲಾ ಹಂತಗಳನ್ನು ಒಳಗೊಂಡಿರುವ ಪಾತ್ರವನ್ನು ಒಲ್ಲೆ ಎನ್ನಲು ಮಾನಸಾಗಲಿಲ್ಲ’ ಎಂದು ಪಾತ್ರ ಒಪ್ಪಿಕೊಂಡಿದ್ದರ ಹಿಂದಿನ ವಿಚಾರ ರಿವೀಲ್ ಮಾಡಿದರು.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿ ಒಪ್ಪಿಕೊಳ್ಳಲು ಕಾರಣ ಆಯ್ತು ಒಂದು ಅಂಶ; ವಿವರಿಸಿದ ನಮ್ರತಾ ಗೌಡ  

‘ಇತ್ತೀಚೆಗಿನ ಪ್ರೋಮೋ ಕಂಡು ನಿತ್ಯಾಳ ಮೇಲೆ ನೀವು ತೋರಿಸುತ್ತಿರುವ ದ್ವೇಷ ಕಂಡು ಬೇಸರವುಂಟಾಯಿತು. ತೊಂದರೆ ಇಲ್ಲ. ನಿತ್ಯ ನಾನು ಪೋಷಿಸಿದ ಪಾತ್ರ. ತುಂಬಾ ಪ್ರೀತಿಯಿಂದ ಒಪ್ಪಿದ ಪಾತ್ರ. ಅವಳೊಂದಿಗೆ ನಾನಿದ್ದೇನೆ. ಅವಳನ್ನು ನನ್ನನ್ನು ಪ್ರೀತಿಸುವ ಅಭಿಮಾನಿಗಳು ಸದಾ ನಮ್ಮೊಂದಿಗೆ ಇರುವರು ಎಂದು ಭಾವಿಸುವೆ’ ಎಂದಿದ್ದಾರೆ ಅವರು. ಈ ಪೋಸ್ಟ್​​ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!