AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ‘ಬಿಗ್ ಬಾಸ್’ ಬಳಿಕ ನಮ್ರತಾ ಗೌಡ ಜೀವನದಲ್ಲಿ ಆದ ಬದಲಾವಣೆ ಒಂದೆರಡಲ್ಲ; ವಿವರಿಸಿದ ನಟಿ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಪೂರ್ಣಗೊಂಡು ಮೂರು ತಿಂಗಳು ಪೂರ್ಣಗೊಂಡಿದೆ. ಇದರಲ್ಲಿ ಭಾಗಿ ಆದ ಸ್ಪರ್ಧಿಗಳು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಇದರಲ್ಲಿ ನಮ್ರತಾ ಗೌಡ ಕೂಡ ಹೊರತಾಗಿಲ್ಲ. ಅವರ ಬದುಕು ಸಾಕಷ್ಟು ಬದದಲಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

Namratha Gowda: ‘ಬಿಗ್ ಬಾಸ್’ ಬಳಿಕ ನಮ್ರತಾ ಗೌಡ ಜೀವನದಲ್ಲಿ ಆದ ಬದಲಾವಣೆ ಒಂದೆರಡಲ್ಲ; ವಿವರಿಸಿದ ನಟಿ
ರಾಜೇಶ್ ದುಗ್ಗುಮನೆ
|

Updated on: Apr 29, 2024 | 11:37 AM

Share

‘ಬಿಗ್ ಬಾಸ್’ ಹಲವು ಕಲಾವಿದರ ಬದುಕನ್ನು ಬದಲಿಸಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್ 10’ (BBK 10) ಕೂಡ ಇದಕ್ಕೆ ಹೊರತಾಗಿಲ್ಲ. ಈ ರಿಯಾಲಿಟಿ ಶೋ ಸಾಕಷ್ಟು ಸದ್ದು ಮಾಡಿತ್ತು. ಕಿರುತೆರೆ ಮೂಲಕ ಫೇಮಸ್ ಆದ ನಮ್ರತಾ ಗೌಡ ಕೂಡ ಇದರಲ್ಲಿ ಸ್ಪರ್ಧಿಸಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದರು. ಅವರ ಬದುಕು ಈಗ ಸಾಕಷ್ಟು ಬದಲಾಗಿದೆ. ಈ ಬಗ್ಗೆ ಅವರು ‘ಟಿವಿ9 ಕನ್ನಡ ಡಿಜಿಟಲ್’ ಜೊತೆ ಮಾತನಾಡಿದ್ದಾರೆ. ಮೊದಲು ಹೇಗಿದ್ದರು ಮತ್ತು ಈಗ ಹೇಗಿದ್ದಾರೆ ಎನ್ನುವ ಬಗ್ಗೆ ಅವರು ವಿವರಿಸಿದ್ದಾರೆ.

ನಮ್ರತಾ ಗೌಡ ಅವರು ನಟಿಯಾದ ಹೊರತಾಗಿಯೂ ಜನರ ಜೊತೆ ಹೆಚ್ಚು ಬೆರೆಯುತ್ತಿರಲಿಲ್ಲ. ಈಗ ಅವರು ಬದಲಾಗಿದ್ದಾರೆ. ‘ಈ ಮೊದಲು ನಾನು ಜನರಿಂದ ದೂರ ಓಡ್ತಾ ಇದ್ದೆ. ನಾನಾಯ್ತು ನನ್ನ ಕೆಲಸ ಆಯ್ತು ಅಂತ ಇರುತ್ತಿದೆ. ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಾ ಇರಲಿಲ್ಲ. ಈಗ ಹಾಗಲ್ಲ, ಬೇಕೋ ಬೇಡವೋ ಹೋಗಲೇ ಬೇಕಾಗುತ್ತದೆ. ಎಲ್ಲಿ ಹೋದರೂ ನಮ್ರತಾ, ನಮ್ರತಾ ಎಂದು ಫ್ಯಾನ್ಸ್ ಬರುತ್ತಾರೆ. ಎಲ್ಲಿ ಹೋದರೂ ಜನರು ನಿಲ್ಲಿಸಿ ಮಾತನಾಡುತ್ತಾರೆ. ನಿರೀಕ್ಷೆ ಜಾಸ್ತಿ ಆಗಿದೆ. ಏನಾದರೂ ದೊಡ್ಡದಾಗಿ ಮಾಡಬೇಕು’ ಎಂದಿದ್ದಾರೆ ನಮ್ರತಾ.

ಭೇಟಿ ಆಗುವ ಎಲ್ಲರೂ ನಮ್ರತಾ ಅವರನ್ನು ತುಂಬಾ ಪರಿಚಯಸ್ತರು, ಫ್ಯಾಮಿಲಿ ಅನ್ನೋ ರೀತಿಯಲ್ಲಿ ಟ್ರೀಟ್ ಮಾಡುತ್ತಿದ್ದಾರಂತೆ.  ‘ಜನರು ಪ್ರತಿಕ್ರಿಯಿಸುತ್ತಿರುವ ರೀತಿಗೆ ಖುಷಿ ಇದೆ. ನಟಿ ಆದರೂ ನಾನು ಸೋಶಿಯಲೈಜ್ ಆಗುತ್ತಾ ಇರಲಿಲ್ಲ. ಆದರೆ ಈಗ ಹಾಗಲ್ಲ, ನಾನು ಮಿಂಗಲ್ ಆಗ್ತಾ ಇದೀನಿ. ಫೋಟೋ ಕೊಡ್ತೀನಿ. ನಾವು ಹೇಗೆ ರಿಯಾಕ್ಟ್ ಮಾಡ್ತೀವಿ ಅನ್ನೋದು ಜನರಿಗೆ ಗೊತ್ತಾಗಿಬಿಟ್ಟಿದೆ. ತುಂಬಾ ಪರಿಚಯದವರು ಅನ್ನೋ ತರಹ ಮಾತಾಡಿಸಿದಾಗ ನಮಗೆ ಶಾಕ್ ಆಗುತ್ತದೆ. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಈ ಬಾರಿಯ ಬಿಗ್ ಬಾಸ್ ಫಾಲೋ ಮಾಡಿದ್ದಾರೆ. ಅವರಿಗೂ ನಾವು ಹತ್ತಿರ ಆಗಿದ್ದೇವೆ’ ಎಂದು ನಮ್ರತಾ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಬಳಿಕ ನಮ್ರತಾಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಆದರೆ, ಈ ವಿಚಾರದಲ್ಲಿ ಅವರು ತರಾತುರಿ ತೋರುತ್ತಿಲ್ಲ. ‘ಸಿನಿಮಾ, ಧಾರಾವಾಹಿ ಆಫರ್​ಗಳು ಬರುತ್ತಿವೆ. ನಾನು ಯಾವುದನ್ನೂ ಒಪ್ಪಿಕೊಂಡಿಲ್ಲ. ಈ ರಶ್​ನಲ್ಲಿ ಹಣಕ್ಕಾಗಿ ಬಂದ ಆಫರ್​ಗಳೆಲ್ಲ ಒಪ್ಪಿಕೊಂಡು ಸಿನಿಮಾ ಮಾಡಿಬಿಡಬಹುದು. ಆದರೆ, ಜನರು ಗುರುತಿಸಬೇಕು. ಆ ರೀತಿಯ ಪಾತ್ರಕ್ಕಾಗಿ ಕಾಯುತ್ತಿದ್ದೇನೆ. ಒಳ್ಳೆಯ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ. ಕಿರುತೆರೆ ಮನೆಯ ತರ. ಯಾವಾಗಲೂ ಓಪನಿಂಗ್ಸ್ ಇದ್ದೇ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಖತ್ ಕ್ಯೂಟ್ ಆಗಿರೋ ಇವಿ ಕಾರು ಖರೀದಿಸಿದ ನಟಿ ನಮ್ರತಾ ಗೌಡ

ನಮ್ರತಾ ಗೌಡ ಅವರು ಬಿಗ್ ಬಾಸ್ ಮುಗಿದ ಬಳಿಕ ನಟನೆಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ವರ್ಕ್​ಶಾಪ್​ಗಳನ್ನು ಕೂಡ ಅವರು ಅಟೆಂಡ್ ಮಾಡುತ್ತಾ ಇದ್ದಾರೆ. ಈ ಮೂಲಕ ಮುಂದೆ ಒಪ್ಪಿಕೊಳ್ಳೋ ಆಫರ್​ಗಳಿಗೆ ಮೊದಲೇ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ‘ಬಿಗ್ ಬಾಸ್​’ನಲ್ಲಿ ನಮ್ರತಾ ತಿಂಡಿಗಳ ಬಗ್ಗೆ ಮಾತನಾಡುತ್ತಿದ್ದರು. ಹೊರಗೆ ಬಂದ ಬಳಿಕ ಅವರು ತಮ್ಮಿಷ್ಟದ ಆಹಾರಗಳನ್ನು ಸವಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ