AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅದ್ದೂರಿ ಪಾರ್ಟಿ; ಅವಕಾಶ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ನಮ್ರತಾ

ಹೊಸ ವರ್ಷದ ಸಂದರ್ಭದಲ್ಲಿ ಪಾರ್ಟಿ ಇದೆ ಎಂದು ಬಿಗ್ ಬಾಸ್ ಘೋಷಿಸಿದರು. ‘ಈ ಪಾರ್ಟಿಯಲ್ಲಿ ಕೇವಲ ಆರು ಸದಸ್ಯರು ಮಾತ್ರ ಭಾಗವಹಿಸಬೇಕು. ಮೂರು ಸದಸ್ಯರು ಹೊರಗೆ ಇರಬೇಕು’ ಎಂದು ಬಿಗ್ ಬಾಸ್ ಆದೇಶ ನೀಡಿದರು. ಇದರಿಂದ ನಮ್ರತಾ ಹೊರಗೆ ಉಳಿದರು.

ಬಿಗ್ ಬಾಸ್ ಮನೆಯಲ್ಲಿ ಅದ್ದೂರಿ ಪಾರ್ಟಿ; ಅವಕಾಶ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ನಮ್ರತಾ
ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Jan 03, 2024 | 6:55 AM

Share

ಬಿಗ್ ಬಾಸ್​ನ 10ನೇ ಸೀಸನ್ ಕೊನೆಯ ಹಂತಕ್ಕೆ ಬಂದಿದೆ. ಇನ್ನು ನಾಲ್ಕು ವಾರಗಳಲ್ಲಿ ಬಿಗ್ ಬಾಸ್ (Bigg Boss) ಪೂರ್ಣಗೊಳ್ಳಲಿದೆ. ಬಿಗ್ ಬಾಸ್ ಮನೆಯಲ್ಲಿ ಪಾರ್ಟಿ ಒಂದನ್ನು ಆಯೋಜನೆ ಮಾಡಲಾಗಿತ್ತು. ಜೊತೆಗೆ ಷರತ್ತು ಕೂಡ ಹಾಕಲಾಗಿತ್ತು. ಈ ಪಾರ್ಟಿಯಲ್ಲಿ ನಮ್ರತಾ ಗೌಡ ಅವರಿಗೆ ಭಾಗವಹಿಸೋಕೆ ಅವಕಾಶ ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ಕ್ಯಾಪ್ಟನ್ ತನಿಷಾ ಅವರನ್ನು ದೂಷಿಸಿ ಕಣ್ಣೀರು ಹಾಕಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ಪಾರ್ಟಿ ಇದೆ ಎಂದು ಬಿಗ್ ಬಾಸ್ ಘೋಷಿಸಿದರು. ‘ಈ ಪಾರ್ಟಿಯಲ್ಲಿ ಕೇವಲ ಆರು ಸದಸ್ಯರು ಮಾತ್ರ ಭಾಗವಹಿಸಬೇಕು. ಮೂರು ಸದಸ್ಯರು ಹೊರಗೆ ಇರಬೇಕು’ ಎಂದು ಬಿಗ್ ಬಾಸ್ ಆದೇಶ ನೀಡಿದರು. ಈ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶವನ್ನು ಕ್ಯಾಪ್ಟನ್ ತನಿಷಾಗೆ ನೀಡಲಾಯಿತು. ತನಿಷಾ ಅವರು ನಮ್ರತಾ, ಮೈಕಲ್ ಹಾಗೂ ವರ್ತೂರು ಸಂತೋಷ್ ಅವರನ್ನು ಹೊರಗಿಟ್ಟರು.

ಈ ನಿರ್ಧಾರದಿಂದ ನಮ್ರತಾ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ‘ಇದಕ್ಕೆಲ್ಲ ಯಾರು ಅಳುತ್ತಾರೆ’ ಎನ್ನುತ್ತಲೇ ವಾಶ್​ರೂಂಗೆ ಹೋಗಿ ಕಣ್ಣೀರು ಹಾಕಿದ್ದಾರೆ. ವಾಶ್​ರೂಂನಿಂದ ಮರಳಿದ ಬಳಿಕ ಅವರು ತನಿಷಾ ಜೊತೆ ಫನ್ ಆಗಿ ಜಗಳ ಮಾಡಿದ್ದಾರೆ. ‘ನಾನು ಖುಷಿಯಿಂದ ಇದೀನಿ ಎಂದು ಹೇಗೆ ಅಂದುಕೊಂಡೆ? ಹತ್ತಿರ ಬರಬೇಡ. ಬಂದರೆ ಹೊಡಯುತ್ತೇನೆ’ ಎಂದು ಹೇಳಿದರು ನಮ್ರತಾ. ‘ಇದಕ್ಕೆಲ್ಲ ಅಳಬಾರದು’ ಎಂದು ತನಿಷಾ ಧೈರ್ಯ ತುಂಬಿದರು.

ಇದನ್ನೂ ಓದಿ: ವಿನ್ನರ್​ಗೆ ಸಿಗೋದು 50 ಲಕ್ಷ ಅಲ್ಲ, 25 ಲಕ್ಷ ರೂಪಾಯಿ; ಶಿಕ್ಷೆ ಕೊಟ್ಟ ಬಿಗ್ ಬಾಸ್

ಈ ಪಾರ್ಟಿಯಲ್ಲಿ ತಿನ್ನಲು ಬಗೆಬಗೆಯ ತಿಂಡಿಗಳು ಇದ್ದವು. ಡ್ಯಾನ್ಸ್ ಮಾಡಲು ಸಾಂಗ್ ಹಾಕಲಾಯಿತು. ಸಂಗೀತಾ, ಪ್ರತಾಪ್, ತನಿಷಾ, ಕಾರ್ತಿಕ್, ತುಕಾಲಿ ಸಂತೋಷ್, ವಿನಯ್ ಅವರು ಇದನ್ನು ಎಂಜಾಯ್ ಮಾಡಿದರು. ‘ಎಣ್ಣೆ ಇಲ್ಲದ ಪಾರ್ಟಿಗೆ ಹೋದರೆಷ್ಟು, ಬಿಟ್ಟರೆಷ್ಟು’ ಎಂದರು ಮೈಕಲ್ ಅಜಯ್. ಜನವರಿ 2ರಂದು ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡೋ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​