Namratha Gowda: ಶಾಕಿಂಗ್ ನಿರ್ಧಾರ; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನೇ ಹೊರಗಿಟ್ಟ ನಮ್ರತಾ

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಗೌಡ ಅವರು ಶಾಕಿಂಗ್ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ದೂರ ಇಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಪ್ರೋಮೋ ವೈರಲ್ ಆಗಿದೆ.

Namratha Gowda: ಶಾಕಿಂಗ್ ನಿರ್ಧಾರ; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನೇ ಹೊರಗಿಟ್ಟ ನಮ್ರತಾ
ವಿನಯ್-ನಮ್ರತಾ

Updated on: Nov 30, 2023 | 2:31 PM

ಬಿಗ್ ಬಾಸ್​ನಲ್ಲಿರುವ ನಮ್ರತಾ ಗೌಡ (Namratha Gowda), ಸ್ನೇಹಿತ್ ಗೌಡ ಹಾಗೂ ವಿನಯ್ ಗೌಡ ಅವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಂದೇ ಗ್ಯಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ನಮ್ರತಾಗೆ ಪದೇ ಪದೇ ಈ ಬಗ್ಗೆ ಕಿವಿಮಾತು ಬರುತ್ತಲೇ ಇತ್ತು. ಆದರೆ, ಅವರು ಇದನ್ನು ನಿರ್ಲಕ್ಷ್ಯ ಮಾಡಿದ್ದರು. ಈಗ ಅವರು ಬದಲಾದಂತೆ ಇದೆ! ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡುವ ಮೂಲಕ ನಮ್ರತಾ ಅಚ್ಚರಿ ಮೂಡಿಸಿದ್ದಾರೆ. ಈಗ ರಿಲೀಸ್ ಆಗಿರುವ ಪ್ರೋಮೋ ಎಲ್ಲರ ಗಮನ ಸೆಳೆದಿದೆ.

ಇತ್ತೀಚೆಗೆ ಪವಿ ಪೂವಪ್ಪ ಹಾಗೂ ಅವಿನಾಶ್ ಶೆಟ್ಟಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಹೊರಗೆ ನಡೆದ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. ‘ನೀವು ಇನ್ನೂ ವಿನಯ್ ಅವರ ನೆರಳಲ್ಲೇ ಇದ್ದೀರಿ’ ಎಂದು ಪವಿ ಅವರು ನಮ್ರತಾಗೆ ಹೇಳಿದರು. ಇದನ್ನು ನಮ್ರತಾ ಗಂಭೀರವಾಗಿ ಸ್ವೀಕರಿಸಿದಂತೆ ಇದೆ.

ಈ ವಾರ ನಮ್ರತಾ ಅವರು ವಿನಯ್ ಗುಂಪನ್ನು ಬಿಟ್ಟು ಪ್ರತಾಪ್ ಗ್ಯಾಂಗ್ ಸೇರಿಕೊಂಡರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈಗ ಅವರು ಮತ್ತೊಂದು ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ‘ನಮ್ರತಾ ಈ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಒಬ್ಬರನ್ನು ಹೊರಗೆ ಇಡಿ’ ಎಂದು ಬಿಗ್ ಬಾಸ್ ಕಡೆಯಿಂದ ಆದೇಶ ಬಂತು. ‘ನಾನು ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡುತ್ತಿದ್ದೇನೆ. ಅವರಿಗೆ ಕೋಪ ಜಾಸ್ತಿ ಇದೆ. ಹೀಗಾಗಿ, ಈ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದರು ನಮ್ರತಾ.

ಇದನ್ನೂ ಓದಿ:  ಕಿಸ್ ಕೊಟ್ಟು ನಾಚಿಕೆ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ

ಈ ವಾರ ಕ್ಯಾಪ್ಟನ್ ಆದರೆ ಹೆಚ್ಚಿನ ಅಧಿಕಾರ ಸಿಗಲಿದೆ ಎಂದು ಬಿಗ್ ಬಾಸ್ ಹೇಳಿದ್ದರು. ಈ ಕಾರಣಕ್ಕೆ ವಿನಯ್ ಅವರು ಈ ವಾರ ಕ್ಯಾಪ್ಟನ್ ಆಗಲೇ ಬೇಕು ಎಂದು ಗಟ್ಟಿ ನಿರ್ಧಾರ ಮಾಡಿದ್ದರು. ಆದರೆ, ನಮ್ರತಾ ಕೊಟ್ಟ ಶಾಕ್​ನಿಂದ ಅವರಿಗೆ ಚೇತರಿಸಿಕೊಳ್ಳೋಕೆ ಆಗುತ್ತಿಲ್ಲ. ‘ಈ ಜರ್ನಿಯಲ್ಲಿ ಯಾರೂ ಬರಲ್ಲ ಅನ್ನೋ ಸತ್ಯ ಇವತ್ತು ಗೊತ್ತಾಯ್ತು’ ಎಂದಿದ್ದಾರೆ ವಿನಯ್​. ಎಪಿಸೋಡ್​ನಲ್ಲಿ ನಿಜಕ್ಕೂ ಆಗಿದ್ದೇನು ಎಂಬುದನ್ನು ತಿಳಿದುಕೊಳ್ಳಲು ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುವ ಎಪಿಸೋಡ್ ನೊಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us