AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಇಲ್ಲದೆ ಇರೋದು ಹೇಗೆ ಎಂದು ಚಿಂತಿಸಿದ ನಮ್ರತಾ; ಖಡಕ್ ಉತ್ತರ ಕೊಟ್ಟ ವಿನಯ್

ನಮ್ರತಾ ಹಾಗೂ ಕಾರ್ತಿಕ್​ ಆಪ್ತತೆ ಕಂಡು ಸ್ನೇಹಿತ್ ಅಭಿಮಾನಿಗಳಿಗೆ ಬೇಸರ ಆಗಿದೆ. ಈ ಕಾರಣಕ್ಕೆ ನಮ್ರತಾನ ಟ್ರೋಲ್ ಮಾಡುತ್ತಿದ್ದಾರೆ. ಈ ರೀತಿ ಮಾಡದಂತೆ ಸ್ನೇಹಿತ್ ಅವರು ಕೋರಿದ್ದಾರೆ.

ಪ್ರೀತಿ ಇಲ್ಲದೆ ಇರೋದು ಹೇಗೆ ಎಂದು ಚಿಂತಿಸಿದ ನಮ್ರತಾ; ಖಡಕ್ ಉತ್ತರ ಕೊಟ್ಟ ವಿನಯ್
ನಮ್ರತಾ
ರಾಜೇಶ್ ದುಗ್ಗುಮನೆ
|

Updated on:Jan 12, 2024 | 8:10 AM

Share

ನಮ್ರತಾ ಗೌಡ (Namratha Gowda) ಅವರು ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ಹೈಲೈಟ್ ಆಗುತ್ತಿದ್ದಾರೆ. ಅವರು ಎಲ್ಲರ ಜೊತೆ ಬರೆಯುತ್ತಿದ್ದಾರೆ. ಇದು ಅನೇಕರಿಗೆ ಇಷ್ಟ ಆಗುತ್ತಿದೆ. ಈ ಕಾರಣಕ್ಕೆ ಅವರ ಮೈಲೇಜ್ ಹೆಚ್ಚಿದೆ. ಅನೇಕ ವಾರಗಳಿಂದ ಅವರು ನಾಮಿನೇಟ್ ಆಗಿರಲಿಲ್ಲ. ಈ ವಾರ ಅವರು ಡೇಂಜರ್​ ಜೋನ್​ನಲ್ಲಿ ಇದ್ದಾರೆ. ಅವರಿಗೆ ಹೆಚ್ಚು ವೋಟ್ ಪಡೆಯೋ ಅಗತ್ಯವಿದೆ. ಹೀಗಾಗಿ ಹೆಚ್ಚು ಹೈಲೈಟ್ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ನಮ್ರತಾ ಅವರ ಕಾಲೆಳೆದಿದ್ದಾರೆ ವಿನಯ್. ಈ ಎಪಿಸೋಡ್ ಗಮನ ಸೆಳೆದಿದೆ.

ನಮ್ರತಾ ಗೌಡ ಹಾಗೂ ವಿನಯ್ ಗೌಡ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಒಬ್ಬರ ಮೇಲೊಬ್ಬರು ಹಾಸ್ಯ ಮಾಡುತ್ತಾ ಇರುತ್ತಾರೆ. ಜನವರಿ 11ರ ಎಪಿಸೋಡ್​ನಲ್ಲಿ ನಮ್ರತಾ ಗೌಡ ಅವರು ಅಡುಗೆ ಮನೆಯಲ್ಲಿದ್ದರು. ವಿನಯ್ ಹಾಗೂ ಪ್ರತಾಪ್ ಕೂಡ ಅಲ್ಲಿಯೇ ಇದ್ದರು. ಈ ವೇಳೆ ನಮ್ರತಾ ಬಾಯಿಂದ ಒಂದು ಹಾಡು ಬಂತು. ‘ಪ್ರೀತಿ ನೀನಿನ್ನಲದೆ ನಾನು ಹೇಗಿರಲಿ’ ಎಂದು ಹಾಡಿದರು. ಇದಕ್ಕೆ ವಿನಯ್ ಕೌಂಟರ್ ಕೊಟ್ಟರು. ‘ಇಷ್ಟು ವರ್ಷ ಹೇಗಿದ್ದೆಯೋ ಹಾಗೆಯೇ ಇದ್ದುಬಿಡು’ ಎಂದರು. ವಿನಯ್ ಮಾತಿಗೆ ನಮ್ರತಾ ಸೈಲೆಂಟ್ ಆದರು.

ನಮ್ರತಾ ಗೌಡ ಇತ್ತೀಚೆಗೆ ಸಾಕಷ್ಟು ಹೈಲೈಟ್ ಆಗುತ್ತಿದ್ದಾರೆ. ಮೊದಲು ಸ್ನೇಹಿತ್ ಜೊತೆ ಆಪ್ತತೆ ಬೆಳೆಸಿಕೊಂಡಿದ್ದ ಅವರು ಈಗ ಕಾರ್ತಿಕ್ ಜೊತೆ ಕ್ಲೋಸ್ ಆಗಿದ್ದಾರೆ. ಈ ಕಾರಣದಿಂದಲೂ ಸುದ್ದಿ ಆಗುತ್ತಿದ್ದಾರೆ. ನಮ್ರತಾ ಹಾಗೂ ಕಾರ್ತಿಕ್​ ಆಪ್ತತೆ ಕಂಡು ಸ್ನೇಹಿತ್ ಅಭಿಮಾನಿಗಳಿಗೆ ಬೇಸರ ಆಗಿದೆ. ಈ ಕಾರಣಕ್ಕೆ ನಮ್ರತಾನ ಟ್ರೋಲ್ ಮಾಡುತ್ತಿದ್ದಾರೆ. ಈ ರೀತಿ ಮಾಡದಂತೆ ಸ್ನೇಹಿತ್ ಅವರು ಕೋರಿದ್ದಾರೆ.

ಇದನ್ನೂ ಓದಿ: ಈಗ ಮನೆಯ ಮೆಚ್ಚಿನ ಸ್ಪರ್ಧಿ: ಬದಲಾದರೇ ನಮ್ರತಾ ಗೌಡ?

ಸದ್ಯ ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಗೌಡ, ವಿನಯ್ ಗೌಡ, ಸಂಗೀತಾ, ತನಿಷಾ, ಕಾರ್ತಿಕ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹಾಗೂ ಪ್ರತಾಪ್ ಮಧ್ಯೆ ಸ್ಪರ್ಧೆ ಮುಂದುವರಿದಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್​ಗಳು ಪ್ರಸಾರ ಕಾಣುತ್ತಿವೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Fri, 12 January 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ