Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದ ನಮ್ರತಾ ಗೌಡ; ಏನಿದು ಅದೃಷ್ಟ?

ನಮ್ರತಾ ಗೌಡ ಆರಂಭದಿಂದಲೂ ವಿನಯ್ ಜೊತೆಯೇ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟು ನಮ್ರತಾ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ತಮ್ಮ ಆಟವನ್ನು ತೋರಿಸಲು ಮುಂದಾಗಿದ್ದಾರೆ ಅವರು.

ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದ ನಮ್ರತಾ ಗೌಡ; ಏನಿದು ಅದೃಷ್ಟ?
ನಮ್ರತಾ
Follow us
ರಾಜೇಶ್ ದುಗ್ಗುಮನೆ
|

Updated on: Dec 01, 2023 | 7:30 AM

ನಮ್ರತಾ ಗೌಡ (Namratha Gowda) ಅವರು ಇಷ್ಟು ದಿನ ಡಲ್ ಆಗಿದ್ದರು. ಇದೇ ಮೊದಲ ಬಾರಿಗೆ ಅವರು ತಮ್ಮ ಆಟವನ್ನು ತೋರಿಸಿದ್ದಾರೆ. ಈ ವಾರ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈ ವಾರ ಉತ್ತಮ ಸಿಕ್ಕರೂ ಅಚ್ಚರಿ ಏನಿಲ್ಲ. ಅಷ್ಟು ಒಳ್ಳೆಯ ರೀತಿಯಲ್ಲಿ ಅವರು ಆಟ ಆಡಿದ್ದಾರೆ. ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್ ಆಡುವ ಅವಕಾಶವನ್ನು ಬಿಗ್ ಬಾಸ್ ನಮ್ರತಾಗೆ ನೀಡಿದ್ದಾರೆ. ಹೀಗೆಕೆ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ನಮ್ರತಾ ಗೌಡ ಆರಂಭದಿಂದಲೂ ವಿನಯ್ ಜೊತೆಯೇ ಕಾಣಿಸಿಕೊಳ್ಳುತ್ತಿದ್ದಾರೆ. ‘ವಿನಯ್ ಚಮಚ’ ಎಂಬ ಪಟ್ಟ ಅವರಿಗೆ ಸಿಕ್ಕಿತ್ತು. ಕಳೆದ ವಾರದವರೆಗೂ ಇದನ್ನೇ ಮುಂದುವರಿಸಿಕೊಂಡು ಬಂದಿದ್ದರು. ಈ ವಾರ ನಾಮಿನೇಟ್ ಆಗಿರುವುದರಿಂದ ಅವರು ಔಟ್ ಆಗುವ ಸೂಚನೆ ಸಿಕ್ಕಿದೆ. ಹೀಗಾಗಿ, ತಮ್ಮ ಆಟವನ್ನು ತೋರಿಸಲು ಮುಂದಾಗಿದ್ದಾರೆ.

ಈ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಿಂದ ನಮ್ರತಾ ಅವರನ್ನು ಮೊದಲಿಗೇ ಹೊರಗಿಟ್ಟರು ಪ್ರತಾಪ್. ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿತು. ಗೇಮ್ ಆಡುವಾಗ ತನಿಷಾ ಅವರು ಗಾಯಮಾಡಿಕೊಂಡರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ಈಗ ಅವರ ಬದಲಿಗೆ ಒಬ್ಬರು ಆಟ ಆಡಬೇಕಿತ್ತು. ಈ ಅವಕಾಶವನ್ನು ನಮ್ರತಾಗೆ ನೀಡಲಾಯಿತು. ಅವರು ಗೇಮ್​ನಲ್ಲಿ ನಮ್ರತಾ ಉತ್ತಮ ಪರ್ಫಾರ್ಮೆನ್ಸ್ ನೀಡಿದ್ದಾರೆ.

ನಮ್ರತಾ ಗೌಡ ಅವರು ಉತ್ತಮ ರೀತಿಯಲ್ಲಿ ಆಟ ಆಡಿ ಕೊನೆಯ ಸುತ್ತಿನವರೆಗೆ ಹೋಗಿದ್ದಾರೆ. ಈಗ ಸ್ನೇಹಿತ್ ಗೌಡ ಹಾಗೂ ನಮ್ರತಾ ಮಧ್ಯೆ ಫೈಟ್ ನಡೆಯಲಿದೆ. ಒಂದೊಮ್ಮೆ ನಮ್ರತಾ ಕ್ಯಾಪ್ಟನ್ಸಿ ಟಾಸ್ಕ್ ಗೆದ್ದರೆ ಅವರು ಕ್ಯಾಪ್ಟನ್ ಆಗೋಕೆ ಸಾಧ್ಯವಿಲ್ಲ. ತನಿಷಾ ಬಂದ ಬಳಿಕ ಕ್ಯಾಪ್ಟನ್ ಪಟ್ಟವನ್ನು ಅವರಿಗೆ ಮರಳಿಸಬೇಕು. ಆದಾಗ್ಯೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ನಮ್ರತಾಗೆ ಉತ್ತಮ ಅವಕಾಶ ದೊರೆತಂತೆ ಆಗಿದೆ.

ಇದನ್ನೂ ಓದಿ: ‘ವಿನಯ್​ಗೆ ಕ್ಯಾಪ್ಟನ್​ ಆಗುವ ಅರ್ಹತೆ ಇಲ್ಲ’; ನಮ್ರತಾ ಮಾತಿನಿಂದ ನೊಂದುಕೊಂಡ ವಿನಯ್​ ಗೌಡ

ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟು ನಮ್ರತಾ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ನವೆಂಬರ್ 30ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು