AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದ ನಮ್ರತಾ ಗೌಡ; ಏನಿದು ಅದೃಷ್ಟ?

ನಮ್ರತಾ ಗೌಡ ಆರಂಭದಿಂದಲೂ ವಿನಯ್ ಜೊತೆಯೇ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟು ನಮ್ರತಾ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ತಮ್ಮ ಆಟವನ್ನು ತೋರಿಸಲು ಮುಂದಾಗಿದ್ದಾರೆ ಅವರು.

ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದ ನಮ್ರತಾ ಗೌಡ; ಏನಿದು ಅದೃಷ್ಟ?
ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Dec 01, 2023 | 7:30 AM

Share

ನಮ್ರತಾ ಗೌಡ (Namratha Gowda) ಅವರು ಇಷ್ಟು ದಿನ ಡಲ್ ಆಗಿದ್ದರು. ಇದೇ ಮೊದಲ ಬಾರಿಗೆ ಅವರು ತಮ್ಮ ಆಟವನ್ನು ತೋರಿಸಿದ್ದಾರೆ. ಈ ವಾರ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈ ವಾರ ಉತ್ತಮ ಸಿಕ್ಕರೂ ಅಚ್ಚರಿ ಏನಿಲ್ಲ. ಅಷ್ಟು ಒಳ್ಳೆಯ ರೀತಿಯಲ್ಲಿ ಅವರು ಆಟ ಆಡಿದ್ದಾರೆ. ತಂಡ ಸೋತರೂ ಕ್ಯಾಪ್ಟನ್ಸಿ ಟಾಸ್ಕ್ ಆಡುವ ಅವಕಾಶವನ್ನು ಬಿಗ್ ಬಾಸ್ ನಮ್ರತಾಗೆ ನೀಡಿದ್ದಾರೆ. ಹೀಗೆಕೆ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ನಮ್ರತಾ ಗೌಡ ಆರಂಭದಿಂದಲೂ ವಿನಯ್ ಜೊತೆಯೇ ಕಾಣಿಸಿಕೊಳ್ಳುತ್ತಿದ್ದಾರೆ. ‘ವಿನಯ್ ಚಮಚ’ ಎಂಬ ಪಟ್ಟ ಅವರಿಗೆ ಸಿಕ್ಕಿತ್ತು. ಕಳೆದ ವಾರದವರೆಗೂ ಇದನ್ನೇ ಮುಂದುವರಿಸಿಕೊಂಡು ಬಂದಿದ್ದರು. ಈ ವಾರ ನಾಮಿನೇಟ್ ಆಗಿರುವುದರಿಂದ ಅವರು ಔಟ್ ಆಗುವ ಸೂಚನೆ ಸಿಕ್ಕಿದೆ. ಹೀಗಾಗಿ, ತಮ್ಮ ಆಟವನ್ನು ತೋರಿಸಲು ಮುಂದಾಗಿದ್ದಾರೆ.

ಈ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಿಂದ ನಮ್ರತಾ ಅವರನ್ನು ಮೊದಲಿಗೇ ಹೊರಗಿಟ್ಟರು ಪ್ರತಾಪ್. ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿತು. ಗೇಮ್ ಆಡುವಾಗ ತನಿಷಾ ಅವರು ಗಾಯಮಾಡಿಕೊಂಡರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ಈಗ ಅವರ ಬದಲಿಗೆ ಒಬ್ಬರು ಆಟ ಆಡಬೇಕಿತ್ತು. ಈ ಅವಕಾಶವನ್ನು ನಮ್ರತಾಗೆ ನೀಡಲಾಯಿತು. ಅವರು ಗೇಮ್​ನಲ್ಲಿ ನಮ್ರತಾ ಉತ್ತಮ ಪರ್ಫಾರ್ಮೆನ್ಸ್ ನೀಡಿದ್ದಾರೆ.

ನಮ್ರತಾ ಗೌಡ ಅವರು ಉತ್ತಮ ರೀತಿಯಲ್ಲಿ ಆಟ ಆಡಿ ಕೊನೆಯ ಸುತ್ತಿನವರೆಗೆ ಹೋಗಿದ್ದಾರೆ. ಈಗ ಸ್ನೇಹಿತ್ ಗೌಡ ಹಾಗೂ ನಮ್ರತಾ ಮಧ್ಯೆ ಫೈಟ್ ನಡೆಯಲಿದೆ. ಒಂದೊಮ್ಮೆ ನಮ್ರತಾ ಕ್ಯಾಪ್ಟನ್ಸಿ ಟಾಸ್ಕ್ ಗೆದ್ದರೆ ಅವರು ಕ್ಯಾಪ್ಟನ್ ಆಗೋಕೆ ಸಾಧ್ಯವಿಲ್ಲ. ತನಿಷಾ ಬಂದ ಬಳಿಕ ಕ್ಯಾಪ್ಟನ್ ಪಟ್ಟವನ್ನು ಅವರಿಗೆ ಮರಳಿಸಬೇಕು. ಆದಾಗ್ಯೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ನಮ್ರತಾಗೆ ಉತ್ತಮ ಅವಕಾಶ ದೊರೆತಂತೆ ಆಗಿದೆ.

ಇದನ್ನೂ ಓದಿ: ‘ವಿನಯ್​ಗೆ ಕ್ಯಾಪ್ಟನ್​ ಆಗುವ ಅರ್ಹತೆ ಇಲ್ಲ’; ನಮ್ರತಾ ಮಾತಿನಿಂದ ನೊಂದುಕೊಂಡ ವಿನಯ್​ ಗೌಡ

ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟು ನಮ್ರತಾ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ನವೆಂಬರ್ 30ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?