AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬುಲ್​ಶಿಟ್​ ಕಾರಣ ಕೊಡಬೇಡಿ’; ಸ್ನೇಹಿತ್ ನಿರ್ಧಾರದಿಂದ ತೀವ್ರವಾಗಿ ನೊಂದುಕೊಂಡ ನಮ್ರತಾ

ಕ್ಯಾಪ್ಟನ್ಸಿ ಓಟದಿಂದ ಹೊರಗೆ ಇಡಬೇಕಾದ ಆದೇಶ ಬಂದಾಗ ವಿನಯ್ ಹಾಗೂ ನಮ್ರತಾ ಅವರನ್ನು ಸ್ನೇಹಿತ್ ಹೊರಗೆ ಇಟ್ಟರು. ವಿನಯ್​ಗೆ ಈ ವಿಚಾರ ಹೆಚ್ಚು ಶಾಕಿಂಗ್ ಎನಿಸಲಿಲ್ಲ. ಆದರೆ, ನಮ್ರತಾ ಈ ವಿಚಾರದಲ್ಲಿ ಸಾಕಷ್ಟು ಬೇಸರ ಮಾಡಿಕೊಂಡರು.

‘ಬುಲ್​ಶಿಟ್​ ಕಾರಣ ಕೊಡಬೇಡಿ’; ಸ್ನೇಹಿತ್ ನಿರ್ಧಾರದಿಂದ ತೀವ್ರವಾಗಿ ನೊಂದುಕೊಂಡ ನಮ್ರತಾ
ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Dec 09, 2023 | 7:46 AM

Share

ನಮ್ರತಾ ಗೌಡ ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಕ್ಯಾಪ್ಟನ್ ಆಗಬೇಕು ಎಂಬ ಕನಸು ಕಂಡಿದ್ದರು. ಆದರೆ, ಇದು ಸದ್ಯಕ್ಕಂತೂ ನೆರವೇರುವ ಸೂಚನೆ ಕಾಣುತ್ತಿಲ್ಲ. ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಕೆಲವರನ್ನು ಹೊರಗೆ ಇಡಬೇಕು ಎನ್ನುವ ಆದೇಶ ಬಂತು. ಕ್ಯಾಪ್ಟನ್ ಆಗಿದ್ದ ಸ್ನೇಹಿತ್ ಅವರು ನಮ್ರತಾ ಅವರನ್ನು ಹೊರಗೆ ಇಟ್ಟರು. ಇದು ಅವರನ್ನು ಸಾಕಷ್ಟು ದುಃಖಕ್ಕೆ ತಳ್ಳಿದೆ. ನಮ್ರತಾ ಅವರು ಸ್ನೇಹಿತ್ ಜೊತೆ ಮಾತುಕತೆಯನ್ನೇ ನಿಲ್ಲಿಸಿದ್ದಾರೆ.

ಸ್ನೇಹಿತ್ ಹಾಗೂ ನಮ್ರತಾ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ನಮ್ರತಾಗೆ ಎಲ್ಲಾ ವಿಚಾರಗಳಲ್ಲಿ ಸ್ನೇಹಿತ್ ಫೇವರ್ ಮಾಡುತ್ತಾರೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಈ ಬಾರಿಯ ನಾಮಿನೇಷನ್​ನಿಂದ ಸ್ಪರ್ಧಿಗಳನ್ನು ಸೇವ್ ಮಾಡೋ ಅಧಿಕಾರ ಕ್ಯಾಪ್ಟನ್ ಸ್ನೇಹಿತ್​ಗೆ ಇತ್ತು. ಈ ವೇಳೆ ನಮ್ರತಾ ಹಾಗೂ ವಿನಯ್​ನ ಸ್ನೇಹಿತ್ ಮೊದಲು ಸೇವ್ ಮಾಡಿದರು. ಕ್ಯಾಪ್ಟನ್ ಆದ ಬಳಿಕ ಅವರು ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳು ವಿನಯ್ ತಂಡದ ಪರವಾಗಿಯೇ ಇರುತ್ತದೆ ಎಂದು ಅನೇಕರು ಹೇಳಿದ್ದರು. ಇದನ್ನು ಸುಳ್ಳು ಮಾಡಲು ಸ್ನೇಹಿತ್ ಮುಂದಾದರು.

ಕ್ಯಾಪ್ಟನ್ಸಿ ಓಟದಿಂದ ಹೊರಗೆ ಇಡಬೇಕಾದ ಆದೇಶ ಬಂದಾಗ ವಿನಯ್ ಹಾಗೂ ನಮ್ರತಾ ಅವರನ್ನು ಸ್ನೇಹಿತ್ ಹೊರಗೆ ಇಟ್ಟರು. ವಿನಯ್​ಗೆ ಈ ವಿಚಾರ ಹೆಚ್ಚು ಶಾಕಿಂಗ್ ಎನಿಸಲಿಲ್ಲ. ಆದರೆ, ನಮ್ರತಾ ಈ ವಿಚಾರದಲ್ಲಿ ಸಾಕಷ್ಟು ಬೇಸರ ಮಾಡಿಕೊಂಡರು. ‘ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡೋಕೆ ನೀವು ಕೊಟ್ಟ ಕಾರಣ ಬುಲ್​ಶಿಟ್​ ಎನಿಸಿತು. ಎಲ್ಲರ ಎದುರು ಒಳ್ಳೆಯವರು ಎನಿಸಿಕೊಳ್ಳಲು ಈ ರೀತಿ ಮಾಡಿದ್ದೀರಿ’ ಎಂದಿದ್ದಾರೆ ನಮ್ರತಾ.

ಇದನ್ನೂ ಓದಿ: ‘ವಿನಯ್, ನಮ್ರತಾ ನಿಯಮ ಪಾಲಿಸಿಲ್ಲ’; ಇಬ್ಬರನ್ನೂ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್

ಆದರೆ, ಇದನ್ನು ಸ್ನೇಹಿತ್ ಒಪ್ಪಿಕೊಳ್ಳಲಿಲ್ಲ. ‘ನಿಮಗೆ ಹೋಲಿಸಿದರೆ ಉಳಿದವರ ಆಟ ಉತ್ತಮವಾಗಿತ್ತು. ಹಾಗಾಗಿ ನಿಮ್ಮನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಟ್ಟೆ’ ಎಂದರು ಸ್ನೇಹಿತ್. ಈ ಮಾತನ್ನು ಕೇಳಿ ನಮ್ರತಾ ಮತ್ತಷ್ಟು ಬೇಸರ ಮಾಡಿಕೊಂಡರು. ಅವರು ಸ್ನೇಹಿತ್ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ