‘ಬುಲ್​ಶಿಟ್​ ಕಾರಣ ಕೊಡಬೇಡಿ’; ಸ್ನೇಹಿತ್ ನಿರ್ಧಾರದಿಂದ ತೀವ್ರವಾಗಿ ನೊಂದುಕೊಂಡ ನಮ್ರತಾ

ಕ್ಯಾಪ್ಟನ್ಸಿ ಓಟದಿಂದ ಹೊರಗೆ ಇಡಬೇಕಾದ ಆದೇಶ ಬಂದಾಗ ವಿನಯ್ ಹಾಗೂ ನಮ್ರತಾ ಅವರನ್ನು ಸ್ನೇಹಿತ್ ಹೊರಗೆ ಇಟ್ಟರು. ವಿನಯ್​ಗೆ ಈ ವಿಚಾರ ಹೆಚ್ಚು ಶಾಕಿಂಗ್ ಎನಿಸಲಿಲ್ಲ. ಆದರೆ, ನಮ್ರತಾ ಈ ವಿಚಾರದಲ್ಲಿ ಸಾಕಷ್ಟು ಬೇಸರ ಮಾಡಿಕೊಂಡರು.

‘ಬುಲ್​ಶಿಟ್​ ಕಾರಣ ಕೊಡಬೇಡಿ’; ಸ್ನೇಹಿತ್ ನಿರ್ಧಾರದಿಂದ ತೀವ್ರವಾಗಿ ನೊಂದುಕೊಂಡ ನಮ್ರತಾ
ನಮ್ರತಾ

Updated on: Dec 09, 2023 | 7:46 AM

ನಮ್ರತಾ ಗೌಡ ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಕ್ಯಾಪ್ಟನ್ ಆಗಬೇಕು ಎಂಬ ಕನಸು ಕಂಡಿದ್ದರು. ಆದರೆ, ಇದು ಸದ್ಯಕ್ಕಂತೂ ನೆರವೇರುವ ಸೂಚನೆ ಕಾಣುತ್ತಿಲ್ಲ. ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಕೆಲವರನ್ನು ಹೊರಗೆ ಇಡಬೇಕು ಎನ್ನುವ ಆದೇಶ ಬಂತು. ಕ್ಯಾಪ್ಟನ್ ಆಗಿದ್ದ ಸ್ನೇಹಿತ್ ಅವರು ನಮ್ರತಾ ಅವರನ್ನು ಹೊರಗೆ ಇಟ್ಟರು. ಇದು ಅವರನ್ನು ಸಾಕಷ್ಟು ದುಃಖಕ್ಕೆ ತಳ್ಳಿದೆ. ನಮ್ರತಾ ಅವರು ಸ್ನೇಹಿತ್ ಜೊತೆ ಮಾತುಕತೆಯನ್ನೇ ನಿಲ್ಲಿಸಿದ್ದಾರೆ.

ಸ್ನೇಹಿತ್ ಹಾಗೂ ನಮ್ರತಾ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ನಮ್ರತಾಗೆ ಎಲ್ಲಾ ವಿಚಾರಗಳಲ್ಲಿ ಸ್ನೇಹಿತ್ ಫೇವರ್ ಮಾಡುತ್ತಾರೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಈ ಬಾರಿಯ ನಾಮಿನೇಷನ್​ನಿಂದ ಸ್ಪರ್ಧಿಗಳನ್ನು ಸೇವ್ ಮಾಡೋ ಅಧಿಕಾರ ಕ್ಯಾಪ್ಟನ್ ಸ್ನೇಹಿತ್​ಗೆ ಇತ್ತು. ಈ ವೇಳೆ ನಮ್ರತಾ ಹಾಗೂ ವಿನಯ್​ನ ಸ್ನೇಹಿತ್ ಮೊದಲು ಸೇವ್ ಮಾಡಿದರು. ಕ್ಯಾಪ್ಟನ್ ಆದ ಬಳಿಕ ಅವರು ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳು ವಿನಯ್ ತಂಡದ ಪರವಾಗಿಯೇ ಇರುತ್ತದೆ ಎಂದು ಅನೇಕರು ಹೇಳಿದ್ದರು. ಇದನ್ನು ಸುಳ್ಳು ಮಾಡಲು ಸ್ನೇಹಿತ್ ಮುಂದಾದರು.

ಕ್ಯಾಪ್ಟನ್ಸಿ ಓಟದಿಂದ ಹೊರಗೆ ಇಡಬೇಕಾದ ಆದೇಶ ಬಂದಾಗ ವಿನಯ್ ಹಾಗೂ ನಮ್ರತಾ ಅವರನ್ನು ಸ್ನೇಹಿತ್ ಹೊರಗೆ ಇಟ್ಟರು. ವಿನಯ್​ಗೆ ಈ ವಿಚಾರ ಹೆಚ್ಚು ಶಾಕಿಂಗ್ ಎನಿಸಲಿಲ್ಲ. ಆದರೆ, ನಮ್ರತಾ ಈ ವಿಚಾರದಲ್ಲಿ ಸಾಕಷ್ಟು ಬೇಸರ ಮಾಡಿಕೊಂಡರು. ‘ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡೋಕೆ ನೀವು ಕೊಟ್ಟ ಕಾರಣ ಬುಲ್​ಶಿಟ್​ ಎನಿಸಿತು. ಎಲ್ಲರ ಎದುರು ಒಳ್ಳೆಯವರು ಎನಿಸಿಕೊಳ್ಳಲು ಈ ರೀತಿ ಮಾಡಿದ್ದೀರಿ’ ಎಂದಿದ್ದಾರೆ ನಮ್ರತಾ.

ಇದನ್ನೂ ಓದಿ: ‘ವಿನಯ್, ನಮ್ರತಾ ನಿಯಮ ಪಾಲಿಸಿಲ್ಲ’; ಇಬ್ಬರನ್ನೂ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್

ಆದರೆ, ಇದನ್ನು ಸ್ನೇಹಿತ್ ಒಪ್ಪಿಕೊಳ್ಳಲಿಲ್ಲ. ‘ನಿಮಗೆ ಹೋಲಿಸಿದರೆ ಉಳಿದವರ ಆಟ ಉತ್ತಮವಾಗಿತ್ತು. ಹಾಗಾಗಿ ನಿಮ್ಮನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಟ್ಟೆ’ ಎಂದರು ಸ್ನೇಹಿತ್. ಈ ಮಾತನ್ನು ಕೇಳಿ ನಮ್ರತಾ ಮತ್ತಷ್ಟು ಬೇಸರ ಮಾಡಿಕೊಂಡರು. ಅವರು ಸ್ನೇಹಿತ್ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us