AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರೀತಿಯ ವ್ಯಕ್ತಿಗಳು ಗುಡ್ ಇನ್ ಬೆಡ್​​’; ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್

ಈ ಮೊದಲು ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್​ಗಳು ನಡೆದಿವೆ. ಮಾತು ಲಿಮಿಟ್​ನಲ್ಲಿದ್ದರೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಕೆಲವೊಮ್ಮೆ ಇದು ಮಿತಿ ಮೀರಿ ಹೋಗುತ್ತದೆ.

‘ಈ ರೀತಿಯ ವ್ಯಕ್ತಿಗಳು ಗುಡ್ ಇನ್ ಬೆಡ್​​’; ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್
ನಮ್ರತಾ ಆ್ಯಂಡ್ ಟೀಂ
ರಾಜೇಶ್ ದುಗ್ಗುಮನೆ
|

Updated on:Nov 30, 2023 | 8:09 AM

Share

ಬಿಗ್ ಬಾಸ್​ನಲ್ಲಿ (Bigg Boss) ನೂರಾರು ಕ್ಯಾಮೆರಾಗಳು ಸ್ಪರ್ಧಿಗಳನ್ನು ನೋಡುತ್ತಲೇ ಇರುತ್ತವೆ. ಎಷ್ಟೇ ಸಣ್ಣ ಧ್ವನಿಯಲ್ಲಿ ಮಾತನಾಡಿದರೂ ಮೈಕ್ ಮೂಲಕ ಕೇಳುತ್ತದೆ. ಹೀಗಾಗಿ, ಯಾವ ವಿಚಾರಗಳನ್ನೂ ಇಲ್ಲಿ ಮುಚ್ಚಿಡೋಕೆ ಸಾಧ್ಯವೇ ಇಲ್ಲ. ಹೀಗಾಗಿ, ಸ್ಪರ್ಧಿಗಳು ಮಾತಿನ ಬಗ್ಗೆ, ತಮ್ಮ ಆ್ಯಕ್ಷನ್ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲವಾದಲ್ಲಿ ಟ್ರೋಲ್ ಆಗಬೇಕಾಗುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್ ನಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ವಿನಯ್, ಕಾರ್ತಿಕ್, ನಮ್ರತಾ ಹಾಗೂ ಅವಿನಾಶ್  ಅಡುಗೆ ಮನೆಯ ಕಟ್ಟೆಯ​ ಮೇಲೆ ಕುಳಿತಿದ್ದರು. ಈ ವೇಳೆ ಊಟದ ಬಗ್ಗೆ ಚರ್ಚೆ ಬಂತು. ‘ಮಶ್ರೂಮ್ ಘೀ ರೋಸ್ಟ್ ಚೆನ್ನಾಗಿರುತ್ತದೆ’ ಎಂದರು ಕಾರ್ತಿಕ್. ಇದನ್ನು ಕೇಳಿ ನಮ್ರತಾ ಬಾಯಿ ಚಪ್ಪರಿಸಿದರು. ‘ಯಾವುದಾದರೂ ತಿಂಡಿಯ ಹೆಸರು ಹೇಳಿದರೆ ನಮ್ರತಾ ಎಕ್ಸ್​ಪ್ರೆಶನ್ ಬಹಳ ವಿಚಿತ್ರವಾಗಿ ಇರುತ್ತದೆ. ನಮ್ರತಾ ನೀವು ಹೋಗಿ ಬಿಡಿ’ ಎಂದರು ಕಾರ್ತಿಕ್. ಈ ಮಾತನ್ನು ಕೇಳಿ ನಮ್ರತಾ ಸಿಟ್ಟಾದರು.

ನಮ್ರತಾ ಅವರನ್ನು ಸಮಾಧಾನ ಮಾಡೋಕೆ ಬಂದರು ಕಾರ್ತಿಕ್. ಆಗ ನಮ್ರತಾ ಅವರು ಕಾರ್ತಿಕ್​ಗೆ ಕಚಗುಳಿ ಇಡೋಕೆ ಪ್ರಯತ್ನಿಸಿದರು. ಆದರೆ, ಅವರಿಗೆ ಕಚಗುಳಿ ಆಗಲೇ ಇಲ್ಲ. ‘ಕಚಗುಳಿ ಆಗುತ್ತದೆ ಎಂದರೆ ಅವರು ಗುಡ್ ಇನ್​_ _. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ’ ಎಂದರು ವಿನಯ್. ‘ಗುಡ್ ಇನ್ ವಾಟ್..’ ಎಂದರು ಪವಿ. ಇದಕ್ಕೆ ನಮ್ರತಾ, ‘ಗುಡ್ ಇನ್ ಬೆಡ್’ ಎಂದರು. ಆಗ ಕಾರ್ತಿಕ್ ಅವರು, ‘ನನಗೆ ತುಂಬಾನೇ ಕಚಗುಳಿ ಆಗುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಕಿಸ್ ಕೊಟ್ಟು ನಾಚಿಕೆ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ

ಈ ರೀತಿಯ ಅಡಲ್ಟ್ ಟಾಕ್​ಗಳು ಈ ಮೊದಲು ಕೂಡ ನಡೆದಿವೆ. ಈ ರೀತಿ ಲಿಮಿಟ್​ನಲ್ಲಿದ್ದು ಮಾತನಾಡಿದರೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಕೆಲವೊಮ್ಮೆ ಇದು ಮಿತಿ ಮೀರಿ ಹೋಗುತ್ತದೆ. ಆಗ ಪ್ರಶ್ನೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Thu, 30 November 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?