AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನಮ್ಮ ಸೂಪರ್​ ಸ್ಟಾರ್​’ ವಿನ್ನರ್​ ವಂಶಿಕಾ-ಯಶಸ್ವಿನಿ; ಟ್ರೋಫಿ ಜೊತೆ ಸಿಕ್ಕಿರುವ ಬಹುಮಾನದ ಹಣ ಎಷ್ಟು?

Nannamma Super Star Winner: ‘ನನ್ನಮ್ಮ ಸೂಪರ್​ ಸ್ಟಾರ್​’ ಟೈಟಲ್​ ಗೆದ್ದ ಯಶಸ್ವಿನಿ ಹಾಗೂ ವಂಶಿಕಾ ವೇದಿಕೆ ಮೇಲೆ ಕುಣಿದಾಡಿದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ವಿನ್ನರ್​ ವಂಶಿಕಾ-ಯಶಸ್ವಿನಿ; ಟ್ರೋಫಿ ಜೊತೆ ಸಿಕ್ಕಿರುವ ಬಹುಮಾನದ ಹಣ ಎಷ್ಟು?
ನನ್ನಮ್ಮ ಸೂಪರ್ ಸ್ಟಾರ್ ಟ್ರೋಫಿ ಗೆದ್ದ ವಂಶಿಕಾ-ಯಶಸ್ವಿನಿ
TV9 Web
| Edited By: |

Updated on: Apr 04, 2022 | 8:16 AM

Share

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Super Star) ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ. ಸೆಲೆಬ್ರಿಟಿಗಳ ಮಕ್ಕಳು ಭರಪೂರ ಮನರಂಜನೆ ನೀಡುತ್ತಿದ್ದ ಈ ಶೋ ತನ್ನದೇ ಆದ ವೀಕ್ಷಕರ ಬಳಗವನ್ನು ಹೊಂದಿತ್ತು. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾದ ‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮದಲ್ಲಿ ಅನೇಕ ಮಕ್ಕಳು ಮಿಂಚಿದರು. ಅದರಲ್ಲೂ ಮಾಸ್ಟರ್​ ಆನಂದ್​ ಪುತ್ರಿ ವಂಶಿಕಾ ಅಂಜನಿ ಕಶ್ಯಪ್​ (Vanshika Anjani Kashyap) ಮೋಡಿ ಮಾಡಿದಳು. ಈ ಕಾರ್ಯಕ್ರಮಕ್ಕೆ ಈಗ ತೆರೆ ಬಿದ್ದಿದೆ. ಅಂದರೆ ಫಿನಾಲೆ ಆಗಿದೆ. ಝಗಮಗಿಸುವ ಅದ್ದೂರಿ ವೇದಿಕೆಯಲ್ಲಿ ಕೊನೆಯ ಎಪಿಸೋಡ್​ ಮೂಡಿಬಂದಿದೆ. ಈ ಶೋನಲ್ಲಿ ಯಾರು ವಿನ್ನರ್​ (Nannamma Super Star Winner) ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಎಲ್ಲ ಮಕ್ಕಳು ಕೂಡ ಸೂಪರ್​ ಪರ್ಫಾರ್ಮೆನ್ಸ್​ ನೀಡಿದ್ದರು. ವಂಶಿಕಾ ವಿನ್​ ಆಗಬಹುದು ಎಂದು ಬಹುತೇಕರು ಊಹಿಸಿದ್ದರು. ಅಂತಿಮವಾಗಿ ಆ ಊಹೆ ನಿಜವಾಗಿದೆ. ಭಾನುವಾರ (ಏ.3) ನಡೆದ ಫಿನಾಲೆ ಕಾರ್ಯಕ್ರಮದಲ್ಲಿ ‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮದ ವಿನ್ನರ್​ ಹೆಸರನ್ನು ಘೋಷಿಸಲಾಗಿದೆ. ತಾಯಿ-ಮಗಳಾದ ಯಶಸ್ವಿನಿ ಹಾಗೂ ವಂಶಿಕಾ ಜೋಡಿ ಈ ಟ್ರೋಫಿ ಗೆದ್ದಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಕಿರುತೆರೆ ಪ್ರೇಕ್ಷಕರಿಗೆ ‘ನನ್ನಮ್ಮ ಸೂಪರ್​ ಸೂಪರ್​ ಸ್ಟಾರ್​’ ಕಾರ್ಯಕ್ರಮದ ಸ್ಪರ್ಧಿಗಳು ಹಲವು ತಿಂಗಳ ಕಾಲ ಮನರಂಜನೆ ನೀಡಿದರು. ವಿದ್ಯಾ-ರೋಹಿತ್​, ಸುಪ್ರಿತಾ-ಇಬ್ಬನಿ, ಜಾನ್ವಿ-ಗ್ರಂಥ್​, ಪುನೀತಾ-ಆರ್ಯ, ಯಶಸ್ವಿನಿ-ವಂಶಿಕಾ, ನಂದಿನಿ-ಅದ್ವಿಕ್​ ಅವರು ಫಿನಾಲೆ ತಲುಪಿದ್ದರು. ಭಾನುವಾರ ಸಂಜೆ ನಡೆದ ಫಿನಾಲೆಯಲ್ಲಿ ವಿನ್ನರ್​ ಯಾರು ಎಂಬುದನ್ನು ನಟಿ ತಾರಾ ಅನುರಾಧ ಅವರು ಘೋಷಿಸಿದರು. ವಂಶಿಕಾ ಮತ್ತು ಯಶಸ್ವಿನಿ ಅವರು ಟ್ರೋಫಿ ಎತ್ತಿ ಹಿಡಿದಿದ್ದಾರೆ. ಈ ತಾಯಿ-ಮಗಳ ಜೋಡಿಗೆ ಟ್ರೋಫಿ ಜೊತೆ 5 ಲಕ್ಷ ರೂಪಾಯಿ ಬಹುಮಾನದ ಹಣ ಸಿಕ್ಕಿದೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಟೈಟಲ್​ ಗೆದ್ದ ಯಶಸ್ವಿನಿ ಹಾಗೂ ವಂಶಿಕಾ ವೇದಿಕೆ ಮೇಲೆ ಕುಣಿದಾಡಿದರು. ಮಗುವನ್ನು ತಾಯಿ ಎತ್ತಿಕೊಂಡಿರುವ ರೀತಿಯಲ್ಲಿ ಟ್ರೋಫಿ ವಿನ್ಯಾಸಗೊಂಡಿದೆ. ಅದೇ ಮಾದರಿಯಲ್ಲಿ ಯಶಸ್ವಿನಿ ಮತ್ತು ವಂಶಿಕಾ ಕೂಡ ಪೋಸ್​ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಂಶಿಕಾ ಖ್ಯಾತಿ ಹೆಚ್ಚಿತು. ಸೋಶಿಯಲ್​ ಮೀಡಿಯಾದಲ್ಲೂ ಆಕೆ ಸಖತ್​ ಫೇಮಸ್​ ಆಗಿದ್ದಾಳೆ. ಈಗ ವಿನ್ನರ್​ ಆಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ.

ಪುನೀತಾ ಹಾಗೂ ಆರ್ಯ ಅವರಿಗೆ ರನ್ನರ್​ ಅಪ್​ ಸ್ಥಾನ ಸಿಕ್ಕಿದೆ. ಈ ಶೋಗೆ ಸೃಜನ್​ ಲೋಕೇಶ್​, ಅನು ಪ್ರಭಾಕರ್​, ತಾರಾ ಅನುರಾಧ ಅವರು ನಿರ್ಣಾಯಕರಾಗಿದ್ದರು. ನಟಿ ಅನುಪಮಾ ಗೌಡ ಅವರ ನಿರೂಪಣೆಯಲ್ಲಿ ಕಾರ್ಯಕ್ರಮ ಮೂಡಿಬಂತು. ಫಿನಾಲೆ ಸಂಚಿಕೆಗೆ ರಿಯಲ್​ ಸ್ಟಾರ್​ ಉಪೇಂದ್ರ ಅವರು ಅತಿಥಿಯಾಗಿ ಆಗಮಿಸಿದ್ದರು. ಪುಟಾಣಿಗಳಿಗೆ ಡೈಲಾಗ್​ ಹೇಳಿಕೊಡುವ ಮೂಲಕ ಅವರು ಮನರಂಜನೆ ನೀಡಿದರು. ‘ಹೋಮ್​ ಮಿನಿಸ್ಟರ್​’ ಚಿತ್ರದ ನಾಯಕಿ ವೇದಿಕಾ ಕೂಡ ಈ ಕ್ಷಣಕ್ಕೆ ಸಾಕ್ಷಿ ಆದರು.

‘ನನ್ನಮ್ಮ ಸೂಪರ್​ ಸ್ಟಾರ್​’ ಮುಗಿಯಿತು, ಮುಂದೇನು?

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಹೊಸ ಶೋ ಆರಂಭ ಆಗುತ್ತಿದೆ. ‘ನನ್ನಮ್ಮ ಸೂಪರ್​ ಸ್ಟಾರ್​’ ಶೋ ಮುಗಿದ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮ ಪ್ರಸಾರ ಆಗಲಿದೆ. ಆ ಶೋನ ಶೀರ್ಷಿಕೆಯನ್ನು ಉಪೇಂದ್ರ ಅವರು ಲಾಂಚ್​ ಮಾಡಿದ್ದಾರೆ. ‘ಟೈಟಲ್​ ಇಷ್ಟು ಇಂಟರೆಸ್ಟಿಂಗ್​ ಆಗಿದೆ ಎಂದಮೇಲೆ ಈ ಶೋ ಕೂಡ ತುಂಬ ಸೂಪರ್​ ಆಗಿ ಇರುತ್ತದೆ’ ಎಂದರು ವೇದಿಕಾ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮ ಪ್ರಸಾರ ಆಗಲಿದೆ.

ಇದನ್ನೂ ಓದಿ:

‘ಮಗಳು ವಂಶಿಕಾಳಿಂದ ಜನರು ನನ್ನನ್ನು ಮತ್ತೆ ಪ್ರೀತಿಸುತ್ತಿದ್ದಾರೆ’; ಮಾಸ್ಟರ್​ ಆನಂದ್ ಭಾವುಕ ನುಡಿ

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ