AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಮ ನಿಮ್ಮನ್ನು ಖಂಡಿತವಾಗಿಯೂ ಕಾಡುತ್ತೆ’; ಪ್ರೇರಣಾಗೆ ಅಭಿನವ್​ ಹೀಗೆ ಶಾಪ ಹಾಕಿದ್ದೇಕೆ?

ಅಭಿನವ್​ ಹಾಗೂ ಪ್ರೇರಣಾ ಇಬ್ಬರೂ ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಸ್ಪರ್ಧಿಗಳಾಗಿ ತೆರಳಿದ್ದಾರೆ. 17 ಸ್ಪರ್ಧಿಗಳು ಆರು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇರಲಿದ್ದು ಸ್ಪರ್ಧಿಗಳನ್ನು ರಂಜಿಸಲಿದ್ದಾರೆ

‘ಕರ್ಮ ನಿಮ್ಮನ್ನು ಖಂಡಿತವಾಗಿಯೂ ಕಾಡುತ್ತೆ’; ಪ್ರೇರಣಾಗೆ ಅಭಿನವ್​ ಹೀಗೆ ಶಾಪ ಹಾಕಿದ್ದೇಕೆ?
‘ಕರ್ಮ ನಿಮ್ಮನ್ನು ಖಂಡಿತವಾಗಿಯೂ ಕಾಡುತ್ತೆ’; ಪ್ರೇರಣಾಗೆ ಅಭಿನವ್​ ಹೀಗೆ ಶಾಪ ಹಾಕಿದ್ದೇಕೆ?
TV9 Web
| Edited By: |

Updated on: Aug 14, 2021 | 8:01 PM

Share

ಅಭಿನವ್​ ಅವರು ಅಗಸ್ತ್ಯ ಪಾತ್ರದ ಮೂಲಕ ಹೆಚ್ಚು ಗುರುತಿಸಿಕೊಂಡವರು. ನನ್ನರಸಿ ರಾಧೆ ಧಾರಾವಾಹಿ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಈ ಮಧ್ಯೆ ಅವರು ಕಿರುತೆರೆ ನಟಿ ಪ್ರೇರಣಾಗೆ ಕರ್ಮ ನಿಮ್ಮನ್ನು ಖಂಡಿತವಾಗಿಯೂ ಕಾಡುತ್ತೆ ಎಂದು ಶಾಪ ಹಾಕಿದ್ದಾರೆ. ಅಷ್ಟಕ್ಕೂ ಅಭಿನವ್​ ಹೀಗೆ ಹೇಳೋಕೆ ಕಾರಣವೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅಭಿನವ್​ ಹಾಗೂ ಪ್ರೇರಣಾ ಇಬ್ಬರೂ ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಸ್ಪರ್ಧಿಗಳಾಗಿ ತೆರಳಿದ್ದಾರೆ. 17 ಸ್ಪರ್ಧಿಗಳು ಆರು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇರಲಿದ್ದು ಸ್ಪರ್ಧಿಗಳನ್ನು ರಂಜಿಸಲಿದ್ದಾರೆ. ಇಂದು (ಆಗಸ್ಟ್​ 14) ಬಿಗ್​ ಬಾಸ್​ ಆರಂಭಗೊಂಡಿದೆ. ಎಲ್ಲಾ ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಅದರಲ್ಲಿ ಅಭಿನವ್ ಹಾಗೂ ಪ್ರೇರಣಾ ಕೂಡ ಇದ್ದಾರೆ.

ಸ್ಪರ್ಧಿಗಳಿಗೆ ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದರು. ಇದರನ್ವಯ ‘ಬಿಗುಮಾನ ಬಿಟ್ಟರೆ ಬಿದರಕ್ಕಿಯೂ ಚಿನ್ನವಾಗಬಹುದು​’ ಎನ್ನುವ ಮಾತನ್ನು ಅಕುಲ್ ಕೌಸ್ತುಭಗೆ ಹೇಳಿದರು. ಈ ಮಾತನ್ನು ಕೌಸ್ತುಭ ಅವರು ತಮ್ಮ ಮುಂದಿನ ಸ್ಪರ್ಧಿಗೆ ಹೇಳಬೇಕು. ಈ ಸರ್ಕಲ್​ ಸಾಗಿಯೇ ಇತ್ತು.

ಬಿಗ್​ ಬಾಸ್​ ಮನೆಗೆ ಕಿರುತೆರೆ ನಟಿ ಪ್ರೇರಣಾ ಅವರು ಆಗಮಿಸಿದರು. ಅವರ ಕಿವಿಗೆ ಈ ಸಾಲನ್ನು ಹೇಳಲಾಯಿತು. ಅವರು ಇದನ್ನು ‘ನನ್ನರಸಿ ರಾಧೆ’ ಧಾರಾವಾಹಿ ನಟ ಅಭಿನವ್​​ಗೆ ಹೇಳಬೇಕಿತ್ತು. ಪ್ರೇರಣಾಗೆ ಈ ಸಾಲುಗಳು ಮರೆತೇ ಹೋಗಿದ್ದವು. ಹೀಗಾಗಿ, ಈ ಸಾಲುಗಳನ್ನು ಬಾಯಿಗೆ ಬಂದಂತೆ ಹೇಳಿದ್ದರು. ಇದು ಅಭಿನವ್​ಗೆ ಕೇಳಿಲ್ಲ. ಈ ಕಾರಣಕ್ಕೆ, ‘ಕರ್ಮ ನಿಮ್ಮನ್ನು ಖಂಡಿತವಾಗಿಯೂ ಕಾಡುತ್ತೆ’ ಎಂದು ಶಾಪ ಹಾಕಿದ್ದಾರೆ.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ