ಬಿಗ್ ಬಾಸ್ ಮನೆಗೆ 6ನೇ ಸ್ಪರ್ಧಿಯಾಗಿ ಎಂಟ್ರಿ ನೀಡಿದ ‘ನವಗ್ರಹ’ ನಟ ಧರ್ಮ ಕೀರ್ತಿರಾಜ್

‘ನವಗ್ರಹ’ ಸಿನಿಮಾದಲ್ಲಿ ಕ್ಯಾಡ್ಬರೀಸ್​ ಎಂಬ ಪಾತ್ರ ಮಾಡಿ ಫೇಮಸ್​ ಆದವರು ಧರ್ಮ ಕೀರ್ತಿರಾಜ್​. ಚಂದನವನದ ಖ್ಯಾತ ವಿಲನ್​ ಕೀರ್ತಿರಾಜ್​ ಅವರ ಪುತ್ರನಾದ್ರೂ ತಮ್ಮದೇ ರೀತಿಯಲ್ಲಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋಗೆ ಬರುವ ಮೂಲಕ ಅವರೀಗ ಹೊಸ ಇನ್ನಿಂಗ್ಸ್​ ಆರಂಭಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ..

ಬಿಗ್ ಬಾಸ್ ಮನೆಗೆ 6ನೇ ಸ್ಪರ್ಧಿಯಾಗಿ ಎಂಟ್ರಿ ನೀಡಿದ ‘ನವಗ್ರಹ’ ನಟ ಧರ್ಮ ಕೀರ್ತಿರಾಜ್
ದರ್ಶನ್, ಧರ್ಮ ಕೀರ್ತಿರಾಜ್
Follow us
|

Updated on: Sep 29, 2024 | 7:42 PM

ವಿವಿಧ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ವ್ಯಕ್ತಿಗಳು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಮನೆಗೆ ಆಗಮಿಸಿದ್ದಾರೆ. ಅದ್ದೂರಿಯಾಗಿ ಈ ಸೀಸನ್​ನ ಓಪನಿಂಗ್​ ಆಗಿದೆ. ಕಿಚ್ಚ ಸುದೀಪ್​ ಅವರು ಹೊಸ ಸೀಸನ್​ನ ಸ್ಪರ್ಧಿಗಳಿಗೆ ಸ್ವಾಗತ ಕೋರಿದ್ದಾರೆ. ಶನಿವಾರವೇ (ಸೆ.28) ಗೋಲ್ಡ್​ ಸುರೇಶ್​, ಲಾಯರ್​ ಜಗದೀಶ್, ಗೌತಮಿ ಜಾಧವ್​, ಚೈತ್ರಾ ಕುಂದಾಪುರ ಅವರ ಹೆಸರುಗಳು ಬಹಿರಂಗ ಆಗಿದ್ದವು. ಇಂದು (ಸೆ.29) ಇನ್ನುಳಿದ ಸ್ಪರ್ಧಿಗಳ ಎಂಟ್ರಿ ಆಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಧರ್ಮ ಕೀರ್ತಿರಾಜ್​ ಅವರು ಕೂಡ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ರ ಸ್ಪರ್ಧಿ ಆಗಿದ್ದಾರೆ.

ಹಲವು ವರ್ಷಗಳಿಂದ ಧರ್ಮ ಕೀರ್ತಿ ರಾಜ್​ ಅವರು ಚಿತ್ರರಂಗದಲ್ಲಿ ಆಕ್ಟೀವ್​ ಆಗಿದ್ದಾರೆ. ಅವರ ತಂದೆ ಕೀರ್ತಿರಾಜ್​ ಸ್ಯಾಂಡಲ್​ವುಡ್​ನಲ್ಲಿ ಫೇಮಸ್​ ವಿಲನ್. ಆದರೆ ಧರ್ಮ ಅವರು ಲವರ್​ಬಾಯ್​ ರೀತಿಯ ಪಾತ್ರಗಳಿಂದ ಜನಪ್ರಿಯತೆ ಪಡೆದರು. ‘ನವಗ್ರಹ’ ಸಿನಿಮಾದಲ್ಲಿ ಅವರು ಒಂದು ಮುಖ್ಯ ಪಾತ್ರ ಮಾಡಿದರು. ಅದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ದರ್ಶನ್ ಆಪ್ತ ಬಳಗದಲ್ಲಿ ಧರ್ಮ ಕೀರ್ತಿರಾಜ್​ ಗುರುತಿಸಿಕೊಂಡರು.

ಇದನ್ನೂ ಓದಿ: ಬಿಗ್​ ಬಾಸ್​ 2ನೇ ಸ್ಪರ್ಧಿಯಾಗಿ ದೊಡ್ಮನೆಗೆ ಬಂದ ಯಮುನಾ ಶ್ರೀನಿಧಿ; ಸಿಕ್ತು ನೇರ ಸ್ವರ್ಗ

‘ನವಗ್ರಹ’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್​ ಅವರು ಶರ್ಮಿಳಾ ಮಾಂಡ್ರೆ ಜೊತೆ ಜೋಡಿಯಾಗಿ ನಟಿಸಿದರು. ‘ಕಣ್ ಕಣ್ಣ ಸಲಿಗೆ..’ ಹಾಡಿನಲ್ಲಿ ಅವರಿಬ್ಬರ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟ ಆಯಿತು. ಇಂದಿಗೂ ಆ ಹಾಡು ಟ್ರೆಂಡ್​ನಲ್ಲಿದೆ. ಪ್ರೇಮಿಗಳ ಫೇವರಿಟ್​ ಸಾಂಗ್ ಅದು. ‘ಮುಮ್ತಾಜ್’, ‘ಜಾಣಾಕ್ಷಾ’, ‘ಜಾಸ್ತಿ ಪ್ರೀತಿ’ ಮುಂತಾದ ಸಿನಿಮಾಗಳಲ್ಲಿ ಧರ್ಮ ಕೀರ್ತಿರಾಜ್​ ನಟಿಸಿದ್ದಾರೆ. ಈಗ ಬಿಗ್​ ಬಾಸ್​ ಕಾರ್ಯಕ್ರಮದಿಂದ ಅವರ ವೃತ್ತಿಬದುಕಿನ ಎರಡನೇ ಇನ್ನಿಂಗ್ಸ್​ ಶುರುವಾಗಿದೆ.

‘ಬಿಗ್​ ಬಾಸ್​ ನನಗೆ ಅದ್ಭುತವಾದ ವೇದಿಕೆ. ಚಿತ್ರರಂಗಕ್ಕೆ ಬಂದು ನಾನು ಹಲವು ಏಳು-ಬೀಳು ಕಂಡಿದ್ದೇನೆ. ಬಿಗ್​ ಬಾಸ್​ನಿಂದ ನನಗೆ ಇನ್ನೊಂದು ಇಮೇಜ್​ ಸಿಗಬಹುದು. ಈ ವೇದಿಕೆಯಿಂದ ನನ್ನ ಬಗ್ಗೆ ಜನರಿಗೆ ಹೆಚ್ಚು ಗೊತ್ತಾಗಲಿದೆ. ನನ್ನ ಬದುಕಿನಲ್ಲಿ ಈ ಶೋ ಹೊಸ ಅಧ್ಯಾಯ ಆಗಲಿ’ ಎನ್ನುತ್ತಾ ಧರ್ಮ ಕೀರ್ತಿರಾಜ್​ ಅವರು ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ