AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಪಿಲ್ ಶರ್ಮಾ’ ಶೋನಿಂದ ಹೊರಹೋಗಿದ್ದಕ್ಕೆ ಕಾರಣ ವಿವರಿಸಿದ ಸಿಧು

Kapil Sharma: ಅರ್ಚನಾ ಪೂರನ್ ಸಿಂಗ್, ಕಪಿಲ್ ಶರ್ಮಾ ಶೋನ ಅವಿಭಾಜ್ಯ ಅಂಗವಾಗಿದ್ದಾರೆ. ಅದಕ್ಕೆ ಮುಂಚೆ ನವಜೋತ್ ಸಿಂಗ್ ಸಿಧು ಕಪಿಲ್ ಶರ್ಮಾ ಶೋನಲ್ಲಿದ್ದರು. ಅಚಾನಕ್ಕಾಗಿ ಅವರು ಶೋ ಬಿಟ್ಟಿದ್ದರು. ಇದೀಗ ಸಿಧು, ತಾವೇಕೆ ಆ ಶೋ ಬಿಟ್ಟಿದ್ದಾಗಿ ಹೇಳಿಕೊಂಡಿದ್ದಾರೆ.

‘ಕಪಿಲ್ ಶರ್ಮಾ’ ಶೋನಿಂದ ಹೊರಹೋಗಿದ್ದಕ್ಕೆ ಕಾರಣ ವಿವರಿಸಿದ ಸಿಧು
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Nov 19, 2024 | 4:39 PM

Share

ಐದು ವರ್ಷಗಳ ನಂತರ ಹಾಸ್ಯನಟ ಕಪಿಲ್ ಶರ್ಮಾ ಅವರ ಕಾರ್ಯಕ್ರಮದಲ್ಲಿ ನವಜೋತ್ ಸಿಂಗ್ ಸಿಧು ಕಾಣಿಸಿಕೊಂಡಿದ್ದಾರೆ. ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ಸಂಚಿಕೆಗೆ ಬಂದಿದ್ದರು. ಪುಲ್ವಾಮಾ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಅವರು 2019ರಲ್ಲಿ ಕಾರ್ಯಕ್ರಮವನ್ನು ತ್ಯಜಿಸಬೇಕಾಯಿತು. ಅದರ ನಂತರ, ಅವರ ಸ್ಥಾನವನ್ನು ನಟಿ ಅರ್ಚನಾ ಪುರನ್ ಸಿಂಗ್ ವಹಿಸಿಕೊಂಡರು. ಇದೀಗ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸಿಧು ತಮ್ಮ ಕಾರ್ಯಕ್ರಮವನ್ನು ತೊರೆಯಲು ಕಾರಣವನ್ನು ಹೇಳಿದ್ದಾರೆ.

ನಾನು ಕಾರ್ಯಕ್ರಮದಿಂದ ಹಿಂದೆ ಸರಿಯುವುದರ ಹಿಂದೆ ಕೆಲವು ರಾಜಕೀಯ ಕಾರಣಗಳಿವೆ ಎಂದು ಸಿಧು ಹೇಳಿದ್ದಾರೆ. ‘ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಆದರೆ ಅದರ ಹೊರತಾಗಿ ಬೇರೆ ಕಾರಣಗಳೂ ಇದ್ದವು. ಪುಷ್ಪಗುಚ್ಛದಿಂದ ಒಂದೊಂದೇ ಹೂವುಗಳು ಹೊರ ಹೋಗುತ್ತಿದ್ದವು. ಆ ಪುಷ್ಪಗುಚ್ಛವು ಮೊದಲಿನಂತೆಯೇ ಮತ್ತೆ ಒಟ್ಟಿಗೆ ಬರಬೇಕೆಂದು ನಾನು ಬಯಸುತ್ತೇನೆ. ಅವರ ಕಾರ್ಯಕ್ರಮ ಇನ್ನೂ ಚೆನ್ನಾಗಿ ನಡೆಯುತ್ತಿದೆ. ಕಪಿಲ್ ತುಂಬಾ ಬುದ್ಧಿವಂತ’ ಎಂದಿದ್ದಾರೆ ಸಿಧು.

ಇಲ್ಲಿ ಸಿದ್ದು ಬಳಸಿದ ಹೂಗುಚ್ಛ ಎಂದರೆ ಕಪಿಲ್ ಅವರ ಕಾರ್ಯಕ್ರಮದ ವಿವಿಧ ನಟರು. ಹಲವು ನಟರು ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಇದರಲ್ಲಿ ಉಪಾಸನಾ ಸಿಂಗ್, ಅಲಿ ಅಸ್ಗರ್ ಮತ್ತು ಸುಮೋನಾ ಚಕ್ರವರ್ತಿ ಸೇರಿದ್ದಾರೆ. ಕಾರ್ಯಕ್ರಮದ ಮೂಲ ತಂಡದೊಂದಿಗೆ ಇಲ್ಲದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಶನಗಳು ಸಿಧು ಕಪಿಲ್ ಅವರ ವೃತ್ತಿಜೀವನದ ಕಷ್ಟದ ಸಮಯವನ್ನು ಬಹಿರಂಗಪಡಿಸಿದವು. ‘ಕಪಿಲ್ ಕಠಿಣ ಸಮಯವನ್ನು ಎದುರಿಸುತ್ತಿದ್ದರು. ಅವರಷ್ಟು ಬುದ್ಧಿವಂತರು ಇಲ್ಲಿ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ:ಕಪಿಲ್ ಶರ್ಮಾ ಬಗ್ಗೆ ‘ಶಕ್ತಿಮಾನ್’ ಮಖೇಶ್​ಗೆ ಯಾಕಿಷ್ಟು ಕೋಪ? ಎರಡು ಘಟನೆ ಅವರ ಆಲೋಚನೆ ಬದಲಿಸಿತು

2019ರಲ್ಲಿ ಸಿಧು ಪುಲ್ವಾಮಾ ದಾಳಿಯ ಬಗ್ಗೆ ವಿವಾದಾತ್ಮಕ ಕಾಮೆಂಟ್‌ಗಳಿಂದಾಗಿ ಕಾರ್ಯಕ್ರಮವನ್ನು ತೊರೆಯಬೇಕಾಯಿತು. ‘ಇದೊಂದು ಹೇಡಿತನ ಮತ್ತು ಹೇಯ ಕೃತ್ಯವಾಗಿದ್ದು, ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ಹಿಂಸೆಯನ್ನು ಯಾವಾಗಲೂ ಖಂಡಿಸಲಾಗುತ್ತದೆ ಮತ್ತು ಅದನ್ನು ಮಾಡಿದವರಿಗೆ ಶಿಕ್ಷೆಯಾಗಬೇಕು. ಆದರೆ ಬೆರಳೆಣಿಕೆಯ ಜನರಿಗಾಗಿ ನೀವು ಇಡೀ ದೇಶವನ್ನು ದೂಷಿಸಬಹುದೇ? ನೀವು ಒಬ್ಬ ವ್ಯಕ್ತಿಯನ್ನು ದೂಷಿಸಬಹುದೇ?’ ಎಂದು ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದರು. ಅವರು ಪಾಕಿಸ್ತಾನವನ್ನು ಬೆಂಬಲಿಸಿದರು ಎಂದು ಅನೇಕರು ಅಭಿಪ್ರಾಯಪಟ್ಟರು.

ಆ ಸಮಯದಲ್ಲಿ ‘ದಿ ಕಪಿಲ್ ಶರ್ಮಾ ಶೋ’ ಅನ್ನು ನಿಷೇಧಿಸಬೇಕೆಂದು ಅನೇಕರು ಒತ್ತಾಯಿಸಿದರು. ‘ಬಾಯ್‌ಕಾಟ್ ಸಿದ್ದು’ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು. ಈ ವಿವಾದದ ನಂತರ, ಕಪಿಲ್ ಶರ್ಮಾ ಅವರ ಶೋನಲ್ಲಿ ಸಿಧು ಬದಲಿಗೆ ಅರ್ಚನಾ ಪುರನ್ ಸಿಂಗ್ ಬಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ