AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ

Nawaz | Bigg Boss Kannada: ದಿನ ಕಳೆದಂತೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಆಟ ರಂಗೇರುತ್ತಿದೆ. ಈ ವಾರ ನವಾಜ್​ ಎಲಿಮಿನೇಟ್​ ಆಗಿದ್ದರಿಂದ ದೊಡ್ಮನೆ ಸದಸ್ಯರ ಸಂಖ್ಯೆ 16ಕ್ಕೆ ಕುಸಿದಿದೆ.

BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
ನವಾಜ್
TV9 Web
| Updated By: ಮದನ್​ ಕುಮಾರ್​|

Updated on:Oct 09, 2022 | 10:15 PM

Share

ಕಿಚ್ಚ ಸುದೀಪ್​ ನಡೆಸಿಕೊಡುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಎರಡನೇ ವಾರದ ಎಲಿಮಿನೇಷನ್​ ನಡೆದಿದೆ. ಈ ವಾರ ವೀಕ್ಷಕರಿಂದ ಕಡಿಮೆ ವೋಟ್​ ಪಡೆದ ನವಾಜ್​ (Bigg Boss Nawaz) ಅವರು ಬಿಗ್​ ಬಾಸ್​ ಮನೆಯಿಂದ ಹೊರಬಂದಿದ್ದಾರೆ. ಮಯೂರಿ, ನವಾಜ್​, ದರ್ಶ್​, ಅಮೂಲ್ಯ ಗೌಡ, ನೇಹಾ ಗೌಡ, ರೂಪೇಶ್​ ರಾಜಣ್ಣ, ಆರ್ಯವರ್ಧನ್​ ಗುರೂಜಿ, ಪ್ರಶಾಂತ್​ ಸಂಬರ್ಗಿ, ದೀಪಿಕಾ ದಾಸ್​ ನಾಮಿನೇಟ್​ ಆಗಿದ್ದರು. ಶನಿವಾರದ ಸಂಚಿಕೆಯಲ್ಲಿ ಆರ್ಯವರ್ಧನ್​, ದೀಪಿಕಾ ದಾಸ್​ ಮತ್ತು ಅಮೂಲ್ಯ ಸೇಫ್​ ಆಗಿದ್ದರು. ಭಾನುವಾರದ (ಅ.9) ಎಪಿಸೋಡ್​ನಲ್ಲಿ ನವಾಜ್​ ಎಲಿಮಿನೇಟ್​ (Bigg Boss Elimination) ಆದರು ಎಂಬುದನ್ನು ಕಿಚ್ಚ ಸುದೀಪ್​ ಘೋಷಿಸಿದರು. ಪ್ರಾಸದ ಮೂಲಕ ಸಿನಿಮಾ ವಿಮರ್ಶೆ ಮಾಡಿ ನವಾಜ್​ ಫೇಮಸ್​ ಆಗಿದ್ದರು. ಆದರೆ ಬಿಗ್​ ಬಾಸ್​ನಲ್ಲಿ ಅವರ ಪ್ರಾಸದ ಆಟ ನಡೆಯಲಿಲ್ಲ.

ದಿನ ಕಳೆದಂತೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಆಟ ರಂಗೇರುತ್ತಿದೆ. ಮೊದಲ ವಾರ ಬೈಕ್​ ರೇಸರ್​ ಐಶ್ವರ್ಯಾ ಪಿಸ್ಸೆ ಔಟ್​ ಆಗಿದ್ದರು. ಈ ವಾರ ನವಾಜ್​ ಎಲಿಮಿನೇಟ್​ ಆಗಿದ್ದರಿಂದ ದೊಡ್ಮನೆ ಸದಸ್ಯರ ಸಂಖ್ಯೆ 16ಕ್ಕೆ ಕುಸಿದಿದೆ. 100 ದಿನಗಳ ಕಾಲ ಈ ಆಟದಲ್ಲಿ ಸ್ಥಾನ ಉಳಿಸಿಕೊಳ್ಳಬೇಕು ಎಂಬುದು ಎಲ್ಲ ಸ್ಪರ್ಧಿಗಳ ಆಸೆ ಆಗಿರುತ್ತದೆ. ಅಲ್ಲಿಯವರೆಗೂ ಪೈಪೋಟಿ ನೀಡುವವರಿಗೆ ಫಿನಾಲೆಯಲ್ಲಿ ಸ್ಥಾನ ಸಿಗುತ್ತದೆ. ಅದಕ್ಕಾಗಿ ಪ್ರತಿವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಬೇಕು.

ಈ ಬಾರಿ ಬಿಗ್​ ಬಾಸ್ ರಿಯಾಲಿಟಿ ಶೋನ ಆಟ ಭಿನ್ನವಾಗಿದೆ. 9 ಹಳೇ ಸ್ಪರ್ಧಿಗಳು ಹಾಗೂ 9 ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದರು. ಅನುಭವ ಇರುವವರೆ ಜೊತೆಗೆ ಹೊಸಬರು ಹಣಾಹಣಿ ನಡೆಸುತ್ತಿದ್ದಾರೆ. ಸ್ಪರ್ಧಿಗಳು ವೀಕ್ಷಕರ ಗಮನ ಸೆಳೆಯಬೇಕು ಎಂಬ ಕಾರಣಕ್ಕೆ ಈ ಆಟದಲ್ಲಿ ಹತ್ತಾರು ತಂತ್ರಗಳನ್ನು ಮಾಡುತ್ತಾರೆ. ಟಾಸ್ಕ್​ಗಳನ್ನು ಚೆನ್ನಾಗಿ ಆಡುವುದರ ಜೊತೆಗೆ ಮನರಂಜನೆ ನೀಡುವುದು ಕೂಡ ತುಂಬ ಮುಖ್ಯ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರೂ ಆಟ ಮುಂದುವರಿಸಬೇಕಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಕಿಚ್ಚನ ಚಪ್ಪಾಳೆ ಪಡೆದ ಅನುಪಮಾ ಗೌಡ:

ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರಿಗೆ ಈ ವಾರದ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಅವರ ಆಟದ ಪರಿಯನ್ನು ಸುದೀಪ್​ ಪ್ರಶಂಸಿಸಿದ್ದಾರೆ. ಈ ಮೆಚ್ಚುಗೆ ಸಿಕ್ಕಿದ್ದಕ್ಕೆ ಅನುಪಮಾ ಕೊಂಚ ಎಮೋಷನಲ್​ ಆದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:15 pm, Sun, 9 October 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು