AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ

Nawaz | Bigg Boss Kannada: ದಿನ ಕಳೆದಂತೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಆಟ ರಂಗೇರುತ್ತಿದೆ. ಈ ವಾರ ನವಾಜ್​ ಎಲಿಮಿನೇಟ್​ ಆಗಿದ್ದರಿಂದ ದೊಡ್ಮನೆ ಸದಸ್ಯರ ಸಂಖ್ಯೆ 16ಕ್ಕೆ ಕುಸಿದಿದೆ.

BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
ನವಾಜ್
TV9 Web
| Edited By: |

Updated on:Oct 09, 2022 | 10:15 PM

Share

ಕಿಚ್ಚ ಸುದೀಪ್​ ನಡೆಸಿಕೊಡುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಎರಡನೇ ವಾರದ ಎಲಿಮಿನೇಷನ್​ ನಡೆದಿದೆ. ಈ ವಾರ ವೀಕ್ಷಕರಿಂದ ಕಡಿಮೆ ವೋಟ್​ ಪಡೆದ ನವಾಜ್​ (Bigg Boss Nawaz) ಅವರು ಬಿಗ್​ ಬಾಸ್​ ಮನೆಯಿಂದ ಹೊರಬಂದಿದ್ದಾರೆ. ಮಯೂರಿ, ನವಾಜ್​, ದರ್ಶ್​, ಅಮೂಲ್ಯ ಗೌಡ, ನೇಹಾ ಗೌಡ, ರೂಪೇಶ್​ ರಾಜಣ್ಣ, ಆರ್ಯವರ್ಧನ್​ ಗುರೂಜಿ, ಪ್ರಶಾಂತ್​ ಸಂಬರ್ಗಿ, ದೀಪಿಕಾ ದಾಸ್​ ನಾಮಿನೇಟ್​ ಆಗಿದ್ದರು. ಶನಿವಾರದ ಸಂಚಿಕೆಯಲ್ಲಿ ಆರ್ಯವರ್ಧನ್​, ದೀಪಿಕಾ ದಾಸ್​ ಮತ್ತು ಅಮೂಲ್ಯ ಸೇಫ್​ ಆಗಿದ್ದರು. ಭಾನುವಾರದ (ಅ.9) ಎಪಿಸೋಡ್​ನಲ್ಲಿ ನವಾಜ್​ ಎಲಿಮಿನೇಟ್​ (Bigg Boss Elimination) ಆದರು ಎಂಬುದನ್ನು ಕಿಚ್ಚ ಸುದೀಪ್​ ಘೋಷಿಸಿದರು. ಪ್ರಾಸದ ಮೂಲಕ ಸಿನಿಮಾ ವಿಮರ್ಶೆ ಮಾಡಿ ನವಾಜ್​ ಫೇಮಸ್​ ಆಗಿದ್ದರು. ಆದರೆ ಬಿಗ್​ ಬಾಸ್​ನಲ್ಲಿ ಅವರ ಪ್ರಾಸದ ಆಟ ನಡೆಯಲಿಲ್ಲ.

ದಿನ ಕಳೆದಂತೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಆಟ ರಂಗೇರುತ್ತಿದೆ. ಮೊದಲ ವಾರ ಬೈಕ್​ ರೇಸರ್​ ಐಶ್ವರ್ಯಾ ಪಿಸ್ಸೆ ಔಟ್​ ಆಗಿದ್ದರು. ಈ ವಾರ ನವಾಜ್​ ಎಲಿಮಿನೇಟ್​ ಆಗಿದ್ದರಿಂದ ದೊಡ್ಮನೆ ಸದಸ್ಯರ ಸಂಖ್ಯೆ 16ಕ್ಕೆ ಕುಸಿದಿದೆ. 100 ದಿನಗಳ ಕಾಲ ಈ ಆಟದಲ್ಲಿ ಸ್ಥಾನ ಉಳಿಸಿಕೊಳ್ಳಬೇಕು ಎಂಬುದು ಎಲ್ಲ ಸ್ಪರ್ಧಿಗಳ ಆಸೆ ಆಗಿರುತ್ತದೆ. ಅಲ್ಲಿಯವರೆಗೂ ಪೈಪೋಟಿ ನೀಡುವವರಿಗೆ ಫಿನಾಲೆಯಲ್ಲಿ ಸ್ಥಾನ ಸಿಗುತ್ತದೆ. ಅದಕ್ಕಾಗಿ ಪ್ರತಿವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಬೇಕು.

ಈ ಬಾರಿ ಬಿಗ್​ ಬಾಸ್ ರಿಯಾಲಿಟಿ ಶೋನ ಆಟ ಭಿನ್ನವಾಗಿದೆ. 9 ಹಳೇ ಸ್ಪರ್ಧಿಗಳು ಹಾಗೂ 9 ಹೊಸ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದರು. ಅನುಭವ ಇರುವವರೆ ಜೊತೆಗೆ ಹೊಸಬರು ಹಣಾಹಣಿ ನಡೆಸುತ್ತಿದ್ದಾರೆ. ಸ್ಪರ್ಧಿಗಳು ವೀಕ್ಷಕರ ಗಮನ ಸೆಳೆಯಬೇಕು ಎಂಬ ಕಾರಣಕ್ಕೆ ಈ ಆಟದಲ್ಲಿ ಹತ್ತಾರು ತಂತ್ರಗಳನ್ನು ಮಾಡುತ್ತಾರೆ. ಟಾಸ್ಕ್​ಗಳನ್ನು ಚೆನ್ನಾಗಿ ಆಡುವುದರ ಜೊತೆಗೆ ಮನರಂಜನೆ ನೀಡುವುದು ಕೂಡ ತುಂಬ ಮುಖ್ಯ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರೂ ಆಟ ಮುಂದುವರಿಸಬೇಕಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಕಿಚ್ಚನ ಚಪ್ಪಾಳೆ ಪಡೆದ ಅನುಪಮಾ ಗೌಡ:

ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರಿಗೆ ಈ ವಾರದ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಅವರ ಆಟದ ಪರಿಯನ್ನು ಸುದೀಪ್​ ಪ್ರಶಂಸಿಸಿದ್ದಾರೆ. ಈ ಮೆಚ್ಚುಗೆ ಸಿಕ್ಕಿದ್ದಕ್ಕೆ ಅನುಪಮಾ ಕೊಂಚ ಎಮೋಷನಲ್​ ಆದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:15 pm, Sun, 9 October 22

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!