AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?

ಗೊಂಬೆ ಎಂದೇ ಫೇಮಸ್ ಆದವರು ನೇಹಾ ಗೌಡ. ಈಗ ಅವರು ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಮೂಲಕ ಗಮನ ಸೆಳೆದಿದ್ದಾರೆ.

ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
ನೇಹಾ-ವಿನೋದ್
TV9 Web
| Edited By: |

Updated on: Sep 24, 2022 | 9:40 PM

Share

‘ಮಜಾ ಭಾರತ’ (Majaa Bharatha) ಖ್ಯಾತಿಯ ಮಂಜು ಪಾವಗಡ (Manju Pavagada) ಅವರು ಬಿಗ್ ಬಾಸ್ 8ನೇ ಸೀಸನ್​​ಗೆ ಎಂಟ್ರಿಕೊಟ್ಟಿದ್ದರು. ಅವರು ಮನೆ ಒಳಗೆ ಬಂದು ಎಲ್ಲರನ್ನೂ ನಗಿಸಿದ್ದರು. ಅವರು ವಿನ್ನರ್ ಕೂಡ ಆದರು. ಈ ಬಾರಿ ‘ಮಜಾ ಭಾರತ’ ಖ್ಯಾತಿಯ ವಿನೋದ್ ಗೊಬ್ಬರಗಾಲ ಅವರು ಬಿಗ್​ ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಕೂಡ ಮಂಜು ರೀತಿ ನಗಿಸಿ ಮೋಡಿ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಕಾರಣದಿಂದಲೂ ವಿನೋದ್ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ನೇಹಾ ಗೌಡ ಕೂಡ ಬಿಗ್ ಬಾಸ್ ಮನೆಯಲ್ಲಿದ್ದಾರೆ.

‘ಮಜಾ ಭಾರತ’ ಮೊದಲಾದ ಶೋಗಳ ಮೂಲಕ ಎಲ್ಲರ ಗಮನ ಸೆಳೆದ ವಿನೋದ್ ಅವರು ಬಿಗ್ ಬಾಸ್​ ಸೀಸನ್​ 9ಕ್ಕೆ ಬಂದಿದ್ದಾರೆ. ತಮ್ಮ ಬಗ್ಗೆ ವಿನೋದ್ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಮೊದಲು ನೋಡೋಕೆ ಚೆನ್ನಾಗಿರಲಿಲ್ಲ. ಹಳ್ಳಿ ಮೇಷ್ಟ್ರು ಸಿನಿಮಾದ ಕಪ್ಪೆರಾಯನ ತರ ಇದ್ದೆ. ಎಲ್ಲರೂ ನನಗೆ ಕಪ್ಪೆ ಎನ್ನುತ್ತಿದ್ದರು. ಆರಂಭದಲ್ಲಿ ಕೋಪ ಬರುತ್ತಿತ್ತು. ಆದರೆ, ಈಗ ಅಭ್ಯಾಸ ಆಗಿದೆ’ ಎಂದಿದ್ದಾರೆ ಅವರು.

ಬಿಗ್ ಬಾಸ್​ ಮನೆಗೆ ಹೋಗೋದೇ ಒಂದು ಚಾಲೆಂಜ್. ಅಲ್ಲಿ ಹೋದಮೇಲೆ ಒಂದಷ್ಟು ಚಾಲೆಂಜ್​, ಟಾಸ್ಕ್​ ಕೊಡಲಾಗುತ್ತದೆ. ಸುದೀಪ್ ಕೂಡ ವಿನೋದ್​ಗೆ ಒಂದು ಟಾಸ್ಕ್​ ನೀಡಿದ್ದಾರೆ. ‘ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದಾಗ ವಿಟಿ ಹಾಕುತ್ತಾರೆ. ಆದರೆ, ನಿಮಗೆ ವಿಟಿ ಹಾಕಲ್ಲ. ಮನೆ ಒಳಗೆ ಹೋಗಿ ಎಲ್ಲಾ ಸ್ಪರ್ಧಿಗಳಿಗೆ ಈ ಬಗ್ಗೆ ಕೇಳಿ. ರಾತ್ರಿ ಮಲಗುವ ಸಂದರ್ಭದಲ್ಲಿ ಒಂದು ಸ್ಪರ್ಧಿಯನ್ನು ಕಿಚನ್​ಗೆ ಕರೆದುಕೊಂಡು ಹೋಗಿ ಈ ಬಗ್ಗೆ ಅರ್ಧಗಂಟೆ ಕೇಳಬೇಕು ಎಂದು ಟಾಸ್ಕ್​ ನೀಡಿದ್ದಾರೆ ಸುದೀಪ್.

ಇದನ್ನೂ ಓದಿ
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ
Image
Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!
Image
‘ಬಿಗ್ ಬಾಸ್ ಕನ್ನಡ ಸೀಸನ್ 9’:​ ಮನೆ ಸೇರುವ 18 ಸ್ಪರ್ಧಿಗಳ ಹೆಸರು ಲೀಕ್? ಇಲ್ಲಿದೆ ಫುಲ್ ಲಿಸ್ಟ್
Image
‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್​ಗೆ ರೆಡಿ ಆಯ್ತು ದೊಡ್ಮನೆ; ಮನೆಯಲ್ಲಿ ಏನೇನು ಬದಲಾವಣೆ?

ನೇಹಾ ಗೌಡ

ಗೊಂಬೆ ಎಂದೇ ಫೇಮಸ್ ಆದವರು ನೇಹಾ ಗೌಡ. ಈಗ ಅವರು ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿರೋದು ವಿಶೇಷ. ಇದು ಫ್ಯಾನ್ಸ್​ಗೆ ಖುಷಿ ನೀಡಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು