AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Gowda: ಬಿಗ್​ ಬಾಸ್​ ಶೋನಿಂದ ಹೊರಬಿದ್ದ ನೇಹಾ ಗೌಡ; 5ನೇ ವಾರಕ್ಕೆ ಜರ್ನಿ ಮುಕ್ತಾಯ

Bigg Boss Elimination: ಒಟ್ಟು 9 ಸ್ಪರ್ಧಿಗಳು ನಾಮಿನೇಟ್​ ಆಗಿದ್ದರು. ಆ ಪೈಕಿ 5ನೇ ವಾರದಲ್ಲಿ ನೇಹಾ ಗೌಡ ಅವರು ಎಲಿಮಿನೇಟ್​ ಆಗಿದ್ದಾರೆ. ಟ್ರೋಫಿ ಗೆಲ್ಲುಬೇಕು ಎಂಬ ಅವರ ಕನಸು ಅಂತ್ಯವಾಗಿದೆ.

Neha Gowda: ಬಿಗ್​ ಬಾಸ್​ ಶೋನಿಂದ ಹೊರಬಿದ್ದ ನೇಹಾ ಗೌಡ; 5ನೇ ವಾರಕ್ಕೆ ಜರ್ನಿ ಮುಕ್ತಾಯ
ನೇಹಾ ಗೌಡ
TV9 Web
| Edited By: |

Updated on:Oct 30, 2022 | 9:34 PM

Share

ಕನ್ನಡದಲ್ಲಿ ಬಿಗ್​ ಬಾಸ್​ (Bigg Boss Kannada) ಕಾರ್ಯಕ್ರಮಕ್ಕೆ ದೊಡ್ಡ ಪ್ರೇಕ್ಷಕರ ವರ್ಗ ಇದೆ. ಕಿಚ್ಚ ಸುದೀಪ್​ ಅವರ ಆಕರ್ಷಕ ನಿರೂಪಣೆಯಲ್ಲಿ ಈ ಶೋ ಉತ್ತಮವಾಗಿ ಮೂಡಿಬರುತ್ತಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಕಾರ್ಯಕ್ರಮದಲ್ಲಿ ಐದನೇ ವಾರದ ಎಲಿಮಿನೇಷನ್ (Bigg Boss Elimination)​ ಪ್ರಕ್ರಿಯೆ ಮುಗಿದಿದೆ. ಈ ವಾರ ನೇಹಾ ಗೌಡ (Neha Gowda) ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ. ಉತ್ತಮ ಫ್ಯಾನ್​ ಫಾಲೋಯಿಂ​ಗ್​ ಇದ್ದರೂ ಕೂಡ ಅವರು 6ನೇ ವಾರಕ್ಕೆ ಎಂಟ್ರಿ ಪಡೆಯುವಲ್ಲಿ ವಿಫಲರಾಗಿದ್ದಾರೆ. ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಬಂದಿದ್ದ ಅವರ ಆಟ 5ನೇ ವಾರಕ್ಕೆ ಅಂತ್ಯವಾಗಿದೆ.

ಈ ವಾರ ರೂಪೇಶ್ ರಾಜಣ್ಣ, ದೀಪಿಕಾ ದಾಸ್​, ರೂಪೇಶ್​ ಶೆಟ್ಟಿ, ನೇಹಾ ಗೌಡ, ​ಪ್ರಶಾಂತ್​ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್​ ಅಡಿಗ, ಆರ್ಯವರ್ಧನ್​ ಹಾಗೂ ಕಾವ್ಯಶ್ರೀ ಗೌಡ ಅವರು ನಾಮಿನೇಟ್​ ಆಗಿದ್ದರು. ಶನಿವಾರದ (ಅ.29) ಸಂಚಿಕೆಯಲ್ಲಿ ಕಾವ್ಯಶ್ರೀ ಗೌಡ, ಆರ್ಯವರ್ಧನ್​ ಮತ್ತು ರಾಕೇಶ್​ ಅಡಿಗ ಸೇಫ್​ ಆದರು. ಇನ್ನುಳಿದ ಆರು ಸ್ಪರ್ಧಿಗಳ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿತ್ತು. ಅಂತಿಮವಾಗಿ ನೇಹಾ ಗೌಡ ಅವರ ಬಿಗ್​ ಬಾಸ್​ ಜರ್ನಿ ಮುಕ್ತಾಯ ಆಗಿದೆ.

ಪ್ರತಿ ಎಲಿಮಿನೇಷನ್​ ನಡೆದ ನಂತರವೂ ಬಿಗ್​ ಬಾಸ್​ ಮನೆಯಲ್ಲಿ ಪೈಪೋಟಿ ಹೆಚ್ಚುತ್ತದೆ. ಈಗ 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಕಡಿಮೆ ಸ್ಪರ್ಧಿಗಳು ಇರುವಾಗ ಹಣಾಹಣಿಯ ಕಾವು ಜೋರಾಗುತ್ತದೆ. ಬೇರೆ ಬೇರೆ ವ್ಯಕ್ತಿತ್ವದ ಜನರ ನಡುವೆ ಆಟ ಮುಂದುವರಿದಿದೆ. ಈ ಬಾರಿಯ ಬಿಗ್​ ಬಾಸ್​ ಸ್ವಲ್ಪ ಡಿಫರೆಂಟ್​ ಆಗಿದೆ. ಇದೇ ಮೊದಲ ಬಾರಿಗೆ ‘ನವೀನರು’ ಮತ್ತು ‘ಪ್ರವೀಣರು’ ದೊಡ್ಮನೆ ಸೇರಿದ್ದಾರೆ. ಹಳೇ ಸ್ಪರ್ಧಿಗಳು ಪ್ರವೀಣರು. ಹೊಸ ಸ್ಪರ್ಧಿಗಳು ನವೀನರು. ಈ ಸೀಸನ್​ನಲ್ಲಿ ಯಾರಿಗೆ ಟ್ರೋಫಿ ಸಿಗಬಹುದು ಎಂಬ ಬಗ್ಗೆ ವೀಕ್ಷಕರ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಯಾರಿಗೂ ಸಿಗಲಿಲ್ಲ ಕಿಚ್ಚನ ಚಪ್ಪಾಳೆ:

ಪ್ರತಿ ವಾರ ಚೆನ್ನಾಗಿ ಆಡಿದ ಓರ್ವ ಸ್ಪರ್ಧಿಗೆ ಕಿಚ್ಚ ಸುದೀಪ್​ ಅವರು ಮೆಚ್ಚುಗೆ ನೀಡುತ್ತಾರೆ. ‘ಕಿಚ್ಚನ ಚಪ್ಪಾಳೆ’ ಪಡೆಯುವುದು ಸ್ಪರ್ಧಿಗಳ ಪಾಲಿಗೆ ಹೆಮ್ಮೆಯ ವಿಚಾರ. ಆದರೆ 5ನೇ ವಾರ ಯಾರೂ ಕೂಡ ಚೆನ್ನಾಗಿ ಆಡಿಲ್ಲ ಎಂಬ ಕಾರಣಕ್ಕೆ ಸುದೀಪ್​ ಅವರು ಯಾರಿಗೂ ಮೆಚ್ಚುಗೆ ನೀಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:34 pm, Sun, 30 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?