AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ.

ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ
ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ
TV9 Web
| Edited By: |

Updated on: Aug 31, 2021 | 7:27 AM

Share

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈ ಮಧ್ಯೆ, ಅವರು ಕಲರ್ಸ್​ ಕನ್ನಡದ ‘ರಾಜಾ-ರಾಣಿ’ ವೇದಿಕೆ ಮೇಲೆ ಗಂಡನ ಜತೆ ಮತ್ತೆ ಸಪ್ತಪದಿ ತುಳಿದಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಅವರು ಸಪ್ತಪದಿ ತುಳಿಯೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಚಂದನ್​ ಜತೆ ನೇಹಾ ಗೌಡ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಈ ವೇಳೆ ಶೋನ ನಿರೂಪಕಿ ಅನುಪಮಾ ಗೌಡ ಅವರು ನೇಹಾಗೆ ಪ್ರಶ್ನೆ ಒಂದನ್ನು ಕೇಳಿದರು. ‘ಮದುವೆ ಸಮಯದಲ್ಲಿ ಯಾವುದಾದರೂ ಶಾಸ್ತ್ರ ಮಿಸ್​ ಆಗಿತ್ತೇ? ಆ ಬಗ್ಗೆ ನಿಮಗೇನಾದರೂ ಬೇಸರವಿದೆಯೇ?’ ಎಂದು ಕೇಳಿದರು ಅನುಪಮಾ. ಇದಕ್ಕೆ ಉತ್ತರಿಸಿದ ನೇಹಾ ‘ಮದುವೆ ತುಂಬಾ ಚೆನ್ನಾಗಿ ನಡೆದಿತ್ತು. ಆದರೆ, ಸಪ್ತಪದಿ ತುಳಿಸುವುದನ್ನೇ ಮರೆತು ಬಿಟ್ಟಿದ್ದರು. ಏಕೆ ಹಾಗೆ ಎಂದು ನಾನು ಪ್ರಶ್ನೆ ಮಾಡಿದೆ. ನಮ್ಮ ಸಂಪ್ರದಾಯದಲ್ಲಿ ಆ ರೀತಿ ಇಲ್ಲ ಎನ್ನುವ ಉತ್ತರ ಅವರ ಕಡೆಯಿಂದ ಬಂತು. ಆದರೆ, ನಿಜಕ್ಕೂ ಅವರಿಗೆ ಸಪ್ತಪದಿ ತುಳಿಸೋದು ಮರೆತೇ ಹೋಗಿತ್ತು’ ಎಂದಿದ್ದಾರೆ.

‘ಗೊಂಬೆ ಅವರು ಮದುವೆಯಲ್ಲಿ ಮಿಸ್​ ಮಾಡಿಕೊಂಡ ಸಪ್ತಪದಿಯನ್ನು ಈ ವೇದಿಕೆ ಮೇಲೆ ಮಾಡಿಸುತ್ತಿದ್ದೇವೆ’ ಎಂದು ಅನುಪಮಾ ಗೌಡ ಘೋಷಿಸಿದರು. ಅಂತೆಯೇ, ವೇದಿಕೆ ಮೇಲೆ ಪತಿ ಚಂದನ್​ ಜತೆ ನೇಹಾ ಗೌಡ ಸಪ್ತಪದಿ ತುಳಿದರು. ಮದುವೆಯಲ್ಲಿ ಏಳು ಹೆಜ್ಜೆ ನಡೆಯುವ ಸಂಪ್ರದಾಯ ಹಿಂದುಗಳಲ್ಲಿದೆ. ಪ್ರತಿ ಹೆಜ್ಜೆಗೂ ಒಂದೊಂದು ಅರ್ಥವಿದೆ. ಈ ಶಾಸ್ತ್ರ ‘ರಾಜಾ ರಾಣಿ’ ವೇದಿಕೆ ಮೇಲೆ ನೆರವೇರಿದೆ. ಇದನ್ನು ನೋಡಿದ ಜಡ್ಜ್​ಗಳು ಹಾಗೂ ವೀಕ್ಷಕರು ಖುಷಿಪಟ್ಟಿದ್ದಾರೆ. ಸಪ್ತಪದಿ ತುಳಿಯುವಾಗ ಹಿನ್ನೆಲೆಯಲ್ಲಿ ‘ಸಪ್ತಪದಿ..’ ಹಾಡನ್ನು ಪ್ರಸಾರ ಮಾಡಲಾಗಿತ್ತು. ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಕೆಲವರು ಮದುವೆ ಆಯ್ತು ಊಟ ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು.

ಇದನ್ನೂ ಓದಿ: ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು

‘ಕನ್ನಡತಿ’ ರಮೋಲಾ ಕೊಟ್ಟ ಖಡಕ್​ ಕೌಂಟರ್​ಗೆ ಸೈಲೆಂಟ್​ ಆದ ನಿರಂಜನ್​

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್