AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ.

ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ
ರಿಯಾಲಿಟಿ ಶೋ ವೇದಿಕೆ ಮೇಲೆ ಸಪ್ತಪದಿ ತುಳಿದ ಕಿರುತೆರೆ ‘ಗೊಂಬೆ’ ನೇಹಾ ಗೌಡ
TV9 Web
| Updated By: ಮದನ್​ ಕುಮಾರ್​|

Updated on: Aug 31, 2021 | 7:27 AM

Share

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈ ಮಧ್ಯೆ, ಅವರು ಕಲರ್ಸ್​ ಕನ್ನಡದ ‘ರಾಜಾ-ರಾಣಿ’ ವೇದಿಕೆ ಮೇಲೆ ಗಂಡನ ಜತೆ ಮತ್ತೆ ಸಪ್ತಪದಿ ತುಳಿದಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಅವರು ಸಪ್ತಪದಿ ತುಳಿಯೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಚಂದನ್​ ಜತೆ ನೇಹಾ ಗೌಡ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಈ ವೇಳೆ ಶೋನ ನಿರೂಪಕಿ ಅನುಪಮಾ ಗೌಡ ಅವರು ನೇಹಾಗೆ ಪ್ರಶ್ನೆ ಒಂದನ್ನು ಕೇಳಿದರು. ‘ಮದುವೆ ಸಮಯದಲ್ಲಿ ಯಾವುದಾದರೂ ಶಾಸ್ತ್ರ ಮಿಸ್​ ಆಗಿತ್ತೇ? ಆ ಬಗ್ಗೆ ನಿಮಗೇನಾದರೂ ಬೇಸರವಿದೆಯೇ?’ ಎಂದು ಕೇಳಿದರು ಅನುಪಮಾ. ಇದಕ್ಕೆ ಉತ್ತರಿಸಿದ ನೇಹಾ ‘ಮದುವೆ ತುಂಬಾ ಚೆನ್ನಾಗಿ ನಡೆದಿತ್ತು. ಆದರೆ, ಸಪ್ತಪದಿ ತುಳಿಸುವುದನ್ನೇ ಮರೆತು ಬಿಟ್ಟಿದ್ದರು. ಏಕೆ ಹಾಗೆ ಎಂದು ನಾನು ಪ್ರಶ್ನೆ ಮಾಡಿದೆ. ನಮ್ಮ ಸಂಪ್ರದಾಯದಲ್ಲಿ ಆ ರೀತಿ ಇಲ್ಲ ಎನ್ನುವ ಉತ್ತರ ಅವರ ಕಡೆಯಿಂದ ಬಂತು. ಆದರೆ, ನಿಜಕ್ಕೂ ಅವರಿಗೆ ಸಪ್ತಪದಿ ತುಳಿಸೋದು ಮರೆತೇ ಹೋಗಿತ್ತು’ ಎಂದಿದ್ದಾರೆ.

‘ಗೊಂಬೆ ಅವರು ಮದುವೆಯಲ್ಲಿ ಮಿಸ್​ ಮಾಡಿಕೊಂಡ ಸಪ್ತಪದಿಯನ್ನು ಈ ವೇದಿಕೆ ಮೇಲೆ ಮಾಡಿಸುತ್ತಿದ್ದೇವೆ’ ಎಂದು ಅನುಪಮಾ ಗೌಡ ಘೋಷಿಸಿದರು. ಅಂತೆಯೇ, ವೇದಿಕೆ ಮೇಲೆ ಪತಿ ಚಂದನ್​ ಜತೆ ನೇಹಾ ಗೌಡ ಸಪ್ತಪದಿ ತುಳಿದರು. ಮದುವೆಯಲ್ಲಿ ಏಳು ಹೆಜ್ಜೆ ನಡೆಯುವ ಸಂಪ್ರದಾಯ ಹಿಂದುಗಳಲ್ಲಿದೆ. ಪ್ರತಿ ಹೆಜ್ಜೆಗೂ ಒಂದೊಂದು ಅರ್ಥವಿದೆ. ಈ ಶಾಸ್ತ್ರ ‘ರಾಜಾ ರಾಣಿ’ ವೇದಿಕೆ ಮೇಲೆ ನೆರವೇರಿದೆ. ಇದನ್ನು ನೋಡಿದ ಜಡ್ಜ್​ಗಳು ಹಾಗೂ ವೀಕ್ಷಕರು ಖುಷಿಪಟ್ಟಿದ್ದಾರೆ. ಸಪ್ತಪದಿ ತುಳಿಯುವಾಗ ಹಿನ್ನೆಲೆಯಲ್ಲಿ ‘ಸಪ್ತಪದಿ..’ ಹಾಡನ್ನು ಪ್ರಸಾರ ಮಾಡಲಾಗಿತ್ತು. ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಕೆಲವರು ಮದುವೆ ಆಯ್ತು ಊಟ ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು.

ಇದನ್ನೂ ಓದಿ: ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು

‘ಕನ್ನಡತಿ’ ರಮೋಲಾ ಕೊಟ್ಟ ಖಡಕ್​ ಕೌಂಟರ್​ಗೆ ಸೈಲೆಂಟ್​ ಆದ ನಿರಂಜನ್​

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!