AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜನಂದಿನಿ ನಿವಾಸಕ್ಕೆ ಮರಳಿದ ಹೊಸ ಆರ್ಯವರ್ಧನ್; ನಿಜವಾಯ್ತು ಅನು ಊಹೆ

ಆರ್ಯವರ್ಧನ್ ಮೃತಪಟ್ಟ ನಂತರದಲ್ಲಿ ಅನು ತೀವ್ರವಾಗಿ ಕುಸಿದು ಹೋಗುತ್ತಾಳೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಆಕೆ ಧೈರ್ಯ ತೆಗೆದುಕೊಂಡಿದ್ದಾಳೆ.

ರಾಜನಂದಿನಿ ನಿವಾಸಕ್ಕೆ ಮರಳಿದ ಹೊಸ ಆರ್ಯವರ್ಧನ್; ನಿಜವಾಯ್ತು ಅನು ಊಹೆ
ಆರ್ಯವರ್ಧನ್-ಅನು
TV9 Web
| Edited By: |

Updated on: Sep 23, 2022 | 7:00 AM

Share

‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial) ಹೊಸಹೊಸ ಟ್ವಿಸ್ಟ್​ಗಳನ್ನು ತೆಗೆದುಕೊಂಡು ಸಾಗುತ್ತಿದೆ. ಈ ತಿರುವುಗಳನ್ನು ಪ್ರೇಕ್ಷಕರಿಗೆ ಅರಗಿಸಿಕೊಳ್ಳೋಕೆ ಕೊಂಚ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವರ್ಗದ ಜನರು ಅಸಮಾಧಾನ ಹೊರಹಾಕುತ್ತಿದ್ದಾರೆ. ಅನಿರುದ್ಧ್ ಜತ್ಕರ್ (Aniruddha Jatkar) ಅವರು ಧಾರಾವಾಹಿಯಿಂದ ಹೊರ ನಡೆಯಬೇಕಾದ ಪರಿಸ್ಥಿತಿ ಬಂದೊದಗಿದ ಹಿನ್ನೆಲೆಯಲ್ಲಿ ಧಾರಾವಾಹಿಗೆ ಟ್ವಿಸ್ಟ್ ನೀಡಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆರ್ಯವರ್ಧನ್​ಗೆ ಅಪಘಾತವಾದಂತೆ ತೋರಿಸಲಾಗಿದೆ. ಆರ್ಯವರ್ಧನ್ ಮೃತಪಟ್ಟಿದ್ದಾನೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಆತ ಬದುಕಿದ್ದಾನೆ. ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ನಡೆದಿರುವುದರಿಂದ ಹೊಸ ಆರ್ಯವರ್ಧನ್​ (ಹರೀಶ್ ರಾಜ್​) ಎಂಟ್ರಿ ಆಗಿದೆ.

ಆರ್ಯವರ್ಧನ್ ಸತ್ತಿದ್ದಾನೆ ಎಂದು ಎಲ್ಲರೂ ಭಾವಿಸಿದ್ದಾರೆ. ಆತನ ಅಂತ್ಯಸಂಸ್ಕಾರ ಕೂಡ ಮಾಡಲಾಗಿದೆ. ಈ ಕಾರಣದಿಂದ ರಾಜನಂದಿನಿ ವಿಲಾಸದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಆರ್ಯವರ್ಧನ್ ಮೃತಪಟ್ಟಿದ್ದಾನೆ ಎಂಬುದನ್ನು ಅನು ಬಳಿ ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮನೆಯಲ್ಲಿ ಆರ್ಯವರ್ಧನ್ ಫೋಟೋಗೆ ಹಾಕಿದ್ದ ಹಾರವನ್ನು ಅನು ತೆಗೆದಿದ್ದಾಳೆ. ದೇವರಿಗೆ ದೀಪ ಹಚ್ಚಿದ್ದಾಳೆ.

ಆರ್ಯವರ್ಧನ್ ಮೃತಪಟ್ಟ ನಂತರದಲ್ಲಿ ಅನು ತೀವ್ರವಾಗಿ ಕುಸಿದು ಹೋಗುತ್ತಾಳೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಆಕೆ ಧೈರ್ಯ ತೆಗೆದುಕೊಂಡಿದ್ದಾಳೆ. ಹುಟ್ಟುತ್ತಿರುವ ಮಗುವಿಗೋಸ್ಕರ ಆಕೆ ಎಲ್ಲವನ್ನೂ ಎದುರಿಸಲು ರೆಡಿ ಆಗಿದ್ದಾಳೆ. ‘ರಾಜನಂದಿನಿ ಇಲ್ಲದೆ ಆರ್ಯ ಸರ್ 20 ವರ್ಷ ಇದ್ದರು. ಬಹುಶಃ ನಾನು ಆ ರೀತಿಯೇ ಬದುಕಬೇಕು ಎಂದು ದೇವರು ಬಯಸಿದಂತಿದೆ. ನಾನು ಬದುಕಿ ತೋರಿಸುತ್ತೇನೆ. ಆರ್ಯ ಸರ್ ಹೇಗೆ ಬದುಕಬೇಕು ಎಂಬುದು ಹೇಳಿಕೊಟ್ಟು ಹೋಗಿದ್ದಾರೆ. ನಾನು ಹುಟ್ಟುವ ಮಗುವಿಗೋಸ್ಕರ ಬದುಕುತ್ತೇನೆ’ ಎಂದಿದ್ದಾಳೆ ಅನು. ಅನು ಧೈರ್ಯವನ್ನು ಕಂಡು ಮನೆ ಮಂದಿಗೂ ಖುಷಿ ಆಗಿದೆ. ಈ ಮಧ್ಯೆ ಕಥೆಗೆ ದೊಡ್ಡ ಟ್ವಿಸ್ಟ್ ಸಿಗುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ಮೌನಕ್ಕೆ ಶರಣಾದ ಅನು ಸಿರಿಮನೆ; ಮನದಲ್ಲಿ ಹುಟ್ಟಿದೆ ದ್ವೇಷದ ಬೆಂಕಿ?
Image
‘ಅವರನ್ನು ಸುಮ್ಮನೆ ಬಿಡಲ್ಲ’; ಶಪಥ ಮಾಡಿ ಮನೆ ಒಳಗೆ ಬಂದ ಅನು ಸಿರಿಮನೆ
Image
Megha Shetty: ಕಲರ್ಸ್​ ಕನ್ನಡದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾದ ನಟಿ ಮೇಘಾ ಶೆಟ್ಟಿ
Image
ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

ಆರ್ಯವರ್ಧನ್​ಗೆ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಆತನ ಮುಖ ಬದಲಾಗಿದೆ. ಹೊಸ ಆರ್ಯವರ್ಧನ್​ಗೆ ಜ್ಞಾನ ಬಂದಿದೆ. ಆದರೆ, ನೆನಪು ಆತನಲ್ಲಿ ಉಳಿದಿಲ್ಲ. ಈಗ ರಾಜನಂದಿನಿ ನಿವಾಸಕ್ಕೆ ಹೊಸ ಆರ್ಯವರ್ಧನ್​​ನನ್ನು ಕರೆದು ತರಲಾಗುತ್ತಿದೆ. ಆತನ ಬಳಿ ಯಾವುದೇ ನೆನಪು ಉಳಿದುಕೊಂಡಿಲ್ಲ. ಮುಖ ಕೂಡ ಬದಲಾಗಿದೆ. ಹೀಗಾಗಿ ಈತನೇ ಆರ್ಯವರ್ಧನ್ ಎಂದು ಹೇಳಿದರೆ ಇದನ್ನು ನಂಬೋದು ಅಷ್ಟು ಸುಲಭವಲ್ಲ.

ಇದನ್ನೂ ಓದಿ: ‘ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ’; ಫ್ಯಾನ್ಸ್​ಗೋಸ್ಕರ ಅನಿರುದ್ಧ್​ ಭಾವನಾತ್ಮಕ ಪೋಸ್ಟ್

ಮಾನ್ಸಿ ಹಾಗೂ ಆರ್ಯವರ್ಧನ್ ಮ್ಯಾನೇಜರ್ ಮೀರಾ ಹೆಗಡೆಗೆ ಅನು ಮೇಲೆ ಅನುಮಾನ ಶುರುವಾಗಿದೆ. ಆರ್ಯವರ್ಧನ್​ನನ್ನು ಕೊಲ್ಲಿಸೋಕೆ ಅನು ಪ್ಲ್ಯಾನ್ ರೂಪಿಸಿದ್ದಾಳೆ ಎಂಬುದು ಮಾನ್ಸಿ ಅನುಮಾನ. ಈ ಸಂದರ್ಭದಲ್ಲಿ ಬೇರೆಯಾರೋ ಬಂದು ತಾನೇ ಆರ್ಯವರ್ಧನ್ ಎಂದು ಹೇಳಿದರೆ ಮನೆಯವರಿಗೆ ನಂಬೋಕೆ ಕಷ್ಟ ಆಗಬಹುದು. ಅನು ಮೇಲೆ ಮೂಡಿರುವ ಅನುಮಾನ ಮತ್ತಷ್ಟು ಹೆಚ್ಚಬಹುದು. ಆರ್ಯವರ್ಧನ್ ಬದುಕಿದ್ದಾನೆ ಎಂಬ ಸತ್ಯವನ್ನು ಮನೆ ಮಂದಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ