AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 19ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ‘ಮೈನಾ’ ಪ್ರಸಾರ

ಮಹಿಳೆಯರ ಆತ್ಮಬಲದ ಪ್ರತೀಕವಾಗಿ ʻಮೈನಾʼ ಸೀರಿಯಲ್​ ಮೂಡಿಬರಲಿದ್ದು, ವೀಕ್ಷಕರಿಗೆ ಇಷ್ಟ ಆಗಲಿದೆ ಎಂದು ‘ಉದಯ ಟಿವಿ’ ಭರವಸೆ ವ್ಯಕ್ತಪಡಿಸಿದೆ. ವಿಜಯಲಕ್ಷ್ಮಿ ಮುಖ್ಯ ಭೂಮಿಕೆ ನಿಭಾಯಿಸಲಿರುವ ಈ ಸೀರಿಯಲ್​ ಫೆಬ್ರವರಿ 19ರಿಂದ ಪ್ರತಿ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿದೆ. ಈ ಹೊಸ ಸೀರಿಯಲ್​ನ ಕಥೆ ಮತ್ತು ಪಾತ್ರವರ್ಗದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಫೆಬ್ರವರಿ 19ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ‘ಮೈನಾ’ ಪ್ರಸಾರ
ಮೈನಾ ಸೀರಿಯಲ್​ ಪಾತ್ರವರ್ಗ
ಮದನ್​ ಕುಮಾರ್​
|

Updated on: Feb 13, 2024 | 1:50 PM

Share

ಈಗಾಗಲೇ ಅನೇಕ ಕನ್ನಡ ಸೀರಿಯಲ್​​ಗಳು (Kannada Serial) ಪ್ರಸಾರ ಕಾಣುತ್ತಿವೆ. ಅದರ ಜೊತೆಗೆ ಹೊಸ ಧಾರಾವಾಹಿಗಳು ಕೂಡ ಆರಂಭ ಆಗುತ್ತಿವೆ. ಉತ್ತಮವಾದ ಸೀರಿಯಲ್​ಗಳನ್ನು ಜನರಿಗೆ ನೀಡುವ ಬಗ್ಗೆ ವಾಹಿನಿಗಳ ನಡುವೆ ಪೈಪೋಟಿ ಇದೆ. ‘ಉದಯ ಟಿವಿ’ (Udaya TV) ಕೂಡ ವಿಭಿನ್ನ ಸೀರಿಯಲ್​ಗಳ ಮೂಲಕ ವೀಕ್ಷಕರಿಗೆ ಮನರಂಜನೆ ನೀಡುತ್ತಿದೆ. ಈಗಾಗಲೇ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಕನ್ಯಾದಾನ, ಅಣ್ಣತಂಗಿ, ಗಂಗೆಗೌರಿ, ಶಾಂಭವಿ, ರಾಧಿಕಾ, ಸೇವಂತಿ, ಗೌರಿಪುರದ ಗಯ್ಯಾಳಿಗಳು, ಜನನಿ ಮುಂತಾದ ಸಿರಿಯಲ್​ಗಳು ಪ್ರಸಾರ ಕಾಣುತ್ತಿವೆ. ಈಗ ಅವುಗಳ ಸಾಲಿಗೆ ಹೊಸ ಧಾರಾವಾಹಿ ‘ಮೈನಾ’ ಕೂಡ ಸೇರ್ಪಡೆ ಆಗಲಿದೆ. ವಿಜಯಲಕ್ಷ್ಮಿ ಅವರು ಮೈನಾ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಮೈನಾ’ ಸೀರಿಯಲ್​ (Mynaa Serial) ಬಗ್ಗೆ ಇಲ್ಲಿದೆ ಮಾಹಿತಿ.

‘ಮೈನಾʼ ಧಾರಾವಾಹಿ ಫೆಬ್ರವರಿ 19ರಿಂದ ಪ್ರತಿ ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ. ಈ ಸೀರಿಯಲ್​ ಕಥೆಯ ಎಳೆ ಹೀಗಿದೆ… ಮೈಲಾರಕೋಟೆ ಮೈನಾ ಮನೆಗೆ ಕಿರಿಮಗಳು. ಊರಲ್ಲಿ ಅಲೆಮಾರಿ, ಪರರಿಗೆ ಉಪಕಾರಿ ಆಕೆ. ಚಿಕ್ಕ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿರುವ ಅಪ್ಪ ಮುತ್ತಣ್ಣ. ಅವರಿವರ ಹೊಲದಲ್ಲಿ ಕೆಲಸ ಮಾಡಿ ಸಂಸಾರದ ನೊಗಕ್ಕೆ ಹೆಗಲು ಕೊಟ್ಟಿರುವ ಅಮ್ಮ. ಸೀತೆಯಂತಿರುವ ಅಕ್ಕ ರಾಧೆ. ಕಾಲೇಜಿಗೆ ಹೋಗುತ್ತಿರುವ ಅಣ್ಣ. ಇವು ಮೈನಾಳ ಲೋಕದ ಪ್ರಮುಖ ಪಾತ್ರಗಳು. ಮೈನಾಳ ಪುಟ್ಟ ಗೂಡಿನಲ್ಲಿ ದುಡ್ಡಿಗೆ ಕೊರತೆ ಇದ್ದರೂ ಪ್ರೀತಿ-ವಾತ್ಸಲ್ಯಕ್ಕೆ ಕೊರತೆ ಇಲ್ಲ.

ಅಕ್ಕ ರಾಧೆಗೆ ಮದುವೆಯ ವಯಸ್ಸು ಮೀರುತ್ತಿದೆ ಎಂಬ ಚಿಂತೆ. ಆಕೆಗೆ ಸಂಬಂಧ ಕೂಡಿ ಬರುತ್ತಿಲ್ಲ ಎಂಬುದು ಬೇಸರದ ಸಂಗತಿ. ಒಂದಲ್ಲಾ ಒಂದು ಕಾರಣಕ್ಕೆ ಮದುವೆ ಮುರಿದು ಹೋಗುತ್ತಿದೆ. ಕೆಲವು ಸಂಬಂಧಗಳು ಮುರಿಯಲು ಮೈನಾ ನೆಪ ಆಗುತ್ತಾಳೆ! ಕೊನೆಯದಾಗಿ ಜವಾಬ್ದಾರಿ ಹೊರಬೇಕಾದ ಅಣ್ಣ ಕೈಕೊಟ್ಟು ಹೋಗುತ್ತಾನೆ. ಆಗ ಕಿರಿಯ ಮಗಳಾದ ಮೈನಾನೇ ಅಕ್ಕನ ಮದುವೆಯ ಹಿರಿಯ ಜವಾಬ್ದಾರಿ ಹೊರಬೇಕಾಗುತ್ತದೆ. ಅದಕ್ಕಾಗಿ ಆಕೆ ನಗರಕ್ಕೆ ಬರುತ್ತಾಳೆ. ಅಲ್ಲಿಂದ ಆಕೆಯ ಪ್ರಯಾಣದಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗುತ್ತವೆ.

ಇದನ್ನೂ ಓದಿ: ʻಗಂಗೆ ಗೌರಿʼ ಧಾರಾವಾಹಿಯಲ್ಲಿ ಮಲೆನಾಡಿನ ಸಹೋದರಿಯರ ಕಥೆ

ಮೈನಾ ಪಾತ್ರಧಾರಿ ವಿಜಯಲಕ್ಷ್ಮಿ ಜೊತೆ ನಾಗಾಭರಣ, ಮಾನಸಿ ಜೋಶಿ, ಅಪೂರ್ವ, ಅಂಜಲಿ, ಸಿದ್ದಾರ್ಥ್, ಸಚಿನ್, ಪ್ರಭಂಜನ, ಹರ್ಷಾರ್ಜುನ್, ಸಾಗರ್, ಯಶಸ್ವಿನಿ, ಅನುಷಾ, ಆಶಾ, ಕುಮಾರಿ ತಿಶ್ಯ, ಮಾಸ್ಟರ್​ ಅರುಣ್, ಮಾಸ್ಟರ್​ ರಣವೀರ್ ಸೇರಿದಂತೆ ಅನೇಕರು ‘ಮೈನಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಟಿ ಭವ್ಯ ಅವರು ಅಪರೂಪದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: ಸೀರಿಯಲ್​ಗೆ ಬಂದ ‘ಗಾಳಿಪಟ’ ನಟಿ ನೀತು; ‘ಕನ್ಯಾದಾನ’ ಧಾರಾವಾಹಿಯಲ್ಲಿ ವಿಶೇಷ ಪಾತ್ರ

ಸಂತೋಷ್ ಗೌಡ ಹಾಸನ ಅವರು ‘ಮೈನಾ’ ಧಾರಾವಾಹಿಗೆ ನಿರ್ದೇಶನ ಮಾಡುತ್ತಿದ್ದಾರೆ. ಜಗದೀಶ್ ವಾಲಿ ಹಾಗೂ ದಯಾಕರ್ ಅವರು ಛಾಯಾಗ್ರಹಣದ ಜಬಾಬ್ದಾರಿ ಹೊತ್ತಿದ್ದಾರೆ. ಮಣಿಕಾಂತ್​ ಕದ್ರಿ ಅವರ ಸಂಗೀತ ನಿರ್ದೇಶನ, ಕೆ. ಕಲ್ಯಾಣ್ ಅವರ ಸಾಹಿತ್ಯ, ಪ್ರಕಾಶ ಕಾರಿಂಜ ಅವರ ಸಂಕಲನ ಈ ಧಾರಾವಾಹಿಗೆ ಇದೆ. ‘ಆನಂದ್ ಆಡಿಯೋ’ ಕಂಪನಿಯ ಸಹಸಂಸ್ಥೆಯಾದ ʻಕೋಮಲ್ ಎಂಟರ್ಪ್ರೈಸಸ್ʼ ಬ್ಯಾನರ್ ಮೂಲಕ ಈ ಧಾರಾವಾಹಿ ನಿರ್ಮಾಣ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು