ಉದಯ ಟಿವಿಯಲ್ಲಿ ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ, ನಗದು ಬಹುಮಾನ ಗೆಲ್ಲಿ

ಹೊಸ ಕಲಾವಿದರು, ಹೊಸ ತಂತ್ರಜ್ಞಾನ ಹಾಗೂ ಹೊಸ ಮೆರುಗಿನೊಂದಿಗೆ ರಾಮಾಯಣ ಕಥೆ ಈಗ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದೆ. ಉದಯ ವಾಹಿನಿಯು ‘ಶ್ರೀಮದ್​ ರಾಮಾಯಣ’ ಸೀರಿಯಲ್​ ಪ್ರಸಾರಕ್ಕೆ ಸಜ್ಜಾಗಿದೆ. ಪೌರಾಣಿಕ ಕಥೆಯನ್ನು ನೋಡಲು ಕಾದಿರುವ ವೀಕ್ಷಕರಿಗೆ ಇದು ಹೊಸ ಅನುಭವ ನೀಡಲಿದೆ. ಮೇ 20ರಿಂದ ಸೋಮವಾರದಿಂದ ಶನಿವಾರದ ತನಕ ಸಂಜೆ 6 ಗಂಟೆಗೆ ಈ ಸೀರಿಯಲ್​ ಪ್ರಸಾರ ಆಗಲಿದೆ.

ಉದಯ ಟಿವಿಯಲ್ಲಿ ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ, ನಗದು ಬಹುಮಾನ ಗೆಲ್ಲಿ
ಶ್ರೀಮದ್​ ರಾಮಾಯಣ
Follow us
|

Updated on: May 15, 2024 | 10:09 PM

ಈಗಾಗಲೇ ಅನೇಕ ಧಾರಾವಾಹಿಗಳು (Kannada Serial) ಕನ್ನಡ ಕಿರುತೆರೆಯಲ್ಲಿ ಪ್ರಸಾರ ಕಾಣುತ್ತಿವೆ. ಆದರೆ ಪೌರಾಣಿಕ ಕಥಾಹಂದರ ಸೀರಿಯಲ್​ಗಳ ಸಂಖ್ಯೆ ಕಡಿಮೆ. ಆ ಕೊರತೆ ನೀಗಿಸುವ ರೀತಿಯಲ್ಲಿ ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ಉದಯ ಟಿವಿ (Udaya TV) ತನ್ನ ಪ್ರೇಕ್ಷಕರಿಗೆ ‘ಗಂಗೆ ಗೌರಿ’, ‘ಅಣ್ಣ ತಂಗಿ’, ‘ಶಾಂಭವಿ’, ‘ಸೇವಂತಿ’, ‘ಸೂರ್ಯವಂಶ’, ‘ರಾಧಿಕಾ’, ‘ಜನನಿ’, ‘ಗೌರಿಪುರದ ಗಯ್ಯಾಳಿಗಳು’, ‘ಮೈನಾ’ ಮುಂತಾದ ಧಾರಾವಾಹಿಗಳನ್ನು ನೀಡುತ್ತಿದೆ. ಅದರ ಜೊತೆಗೆ ಈಗ ‘ಶ್ರೀಮದ್ ರಾಮಾಯಣʼ (Shrimad Ramayana) ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ 20ರಿಂದ ಸಂಜೆ 6 ಗಂಟೆಗೆ ಸೋಮವಾರದಿಂದ ಶನಿವಾರದವರೆಗೆ ಈ ಧಾರಾವಾಹಿ ಪ್ರಸಾರ ಆಗಲಿದ್ದು, ಇದರ ವೀಕ್ಷಕರಿಗೆ ನಗದು ಬಹುಮಾನ ಗೆಲ್ಲುವ ಅವಕಾಶ ನೀಡಲಾಗುತ್ತಿದೆ.

‘ಶ್ರೀಮದ್ ರಾಮಾಯಣ’ ಸೀರಿಯಲ್ ಪ್ರತಿ ಸಂಚಿಕೆಯಲ್ಲಿ 250 ವೀಕ್ಷಕರಿಗೆ ಒಟ್ಟೂ 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ‘ಉದಯ ಟಿವಿ’ ನೀಡುತ್ತಿದೆ. ಈ ಧಾರಾವಾಹಿಯನ್ನು ನೋಡಿ, ಸಂಚಿಕೆಯ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ಪ್ರತಿ ಎಪಿಸೋಡ್​ನಲ್ಲಿ ಅದೃಷ್ಟಶಾಲಿ 250 ವೀಕ್ಷಕರಿಗೆ ತಲಾ ಒಂದು ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಉದಯ ವಾಹಿನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಇಂದಿಗೂ ಪ್ರಸ್ತುತ ಆಗುವಂತಹ ಕಥೆ ರಾಮಾಯಣದ್ದು. ಭಾರತೀಯ ಪರಂಪರೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥೆ ಅದು. ರಾಮನ ಜೀವನದಿಂದ ನಾವು ಕಲಿಯಬಹುದಾದ ಅನೇಕ ನೀತಿಪಾಠ ಇದೆ. ರಾಮ ಹಾಗೂ ಸೀತೆಯ ಪವಿತ್ರ ಪ್ರೇಮಕಥೆ ಕೂಡ ಇದರಲ್ಲಿದೆ. ವೈಭವದಿಂದ ಕೂಡಿರುವ ರಾಮಾಯಣವನ್ನು ಪ್ರೇಕ್ಷಕರಿಗೆ ಅಷ್ಟೇ ವೈಭವದಿಂದ ತೋರಿಸಲು ಉದಯ ವಾಹಿನಿ ಸಜ್ಜಾಗಿದೆ.

ಇದನ್ನೂ ಓದಿ: ‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ಕೂಡ ಈಗಾಗಲೇ ರಾಮಾಯಣ ಧಾರಾವಾಹಿ ಬಂದು ಹೋಗಿದೆ. ಈಗ ಮತ್ತೆ ಆ ಕಥೆಯನ್ನು ಹೊಸ ಕಲಾವಿದರ ಮೂಲಕ ಹೊಸ ತಂತ್ರಜ್ಞಾನ ಹಾಗೂ ದೃಶ್ಯ ವೈಭವದೊಂದಿಗೆ ಪ್ರೇಕ್ಷಕರಿಗೆ ತೋರಿಸಲಿದೆ ಉದಯ ಟಿವಿ. ಈ ಧಾರಾವಾಹಿಯು ವೀಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂಬ ಭರವಸೆ ಉದಯ ವಾಹಿನಿಯದ್ದು. ಪೌರಾಣಿಕ ಕಥೆಗಳನ್ನು ಇಷ್ಟಪಡುವ ವೀಕ್ಷಕರು ‘ಶ್ರೀಮದ್ ರಾಮಾಯಣ’ ಸೀರಿಯಲ್ ನೋಡಲು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್