AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’: ಡಿ.23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಹೊಸ ಧಾರಾವಾಹಿ ಆರಂಭ ಆಗುತ್ತಿದೆ. ‘ನೂರು ಜನ್ಮಕೂ’ ಶೀರ್ಷಿಕೆಯ ಈ ಸೀರಿಯಲ್​ಗೆ ಶ್ರವಂತ್ ರಾಧಿಕಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಾ ಶೆಣೈ ಅವರು ನಿರ್ಮಾಣ ಮಾಡುತ್ತಿದ್ದು, ಡಿ.23ರಿಂದ ಸೀರಿಯಲ್ ಶುರು ಆಗಲಿದೆ. ಧನುಷ್ ಗೌಡ, ಗಿರಿಜಾ ಲೋಕೇಶ್, ಬಿ.ಎಂ. ವೆಂಕಟೇಶ್, ಭಾಗ್ಯಶ್ರೀ, ಅರ್ಚನಾ ಉಡುಪ ಮುಂತಾದವರು ನಟಿಸುತ್ತಿದ್ದಾರೆ.

ಅತಿಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’: ಡಿ.23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ
Nooru Janmaku
ಮದನ್​ ಕುಮಾರ್​
|

Updated on: Dec 17, 2024 | 6:02 PM

Share

ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8.30ಕ್ಕೆ ಪ್ರಸಾರ ಆಗಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.

ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರ ಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ.

ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ. ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿ ಆಗಿಸುತ್ತದೆ.

ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ. ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟ-ನಟಿಯರ ದಂಡೇ ಇದೆ. ‘ಗೀತಾ’ ಧಾರಾವಾಹಿಯಿಂದ ಹೆಸರಾದ ಧನುಷ್ ಗೌಡ, ಹಿರಿಯ ನಟಿ ಗಿರಿಜಾ ಲೋಕೇಶ್, ಭಾಗ್ಯಶ್ರೀ, ಬಿ.ಎಂ. ವೆಂಕಟೇಶ್ ಹಾಗೂ ಗಾಯಕಿ ಅರ್ಚನಾ ಉಡುಪ ಅವರು ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗಿಂತ ಹೆಚ್ಚು ಟಿಆರ್​ಪಿ ಪಡೆದ ‘ಲಕ್ಷ್ಮೀ ಬಾರಮ್ಮ’ ನಂಬರ್ 1 ಧಾರಾವಾಹಿ

ಜೊತೆಗೆ ‘ಮಜಾ ಟಾಕೀಸ್’ ಖ್ಯಾತಿಯ ರೆಮೋ ಕೂಡ ಈ ಧಾರಾವಾಹಿಯಲ್ಲಿ ಇದ್ದಾರೆ. ಚಿತ್ರಾ ಶೆಣೈ ತಮ್ಮ ಗುಡ್ ಕಂಪನಿ ಸಂಸ್ಥೆಯಿಂದ ‘ನೂರು ಜನ್ಮಕೂ’ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ಟಿವಿ ಧಾರಾವಾಹಿಗಳ ಪ್ರೇಮಕತೆಗಳ ಸ್ವರೂಪವನ್ನೇ ಬದಲಾಯಿಸಲು ಸಜ್ಜಾಗಿರುವ ‘ನೂರು ಜನ್ಮಕೂ’ ಸೀರಿಯಲ್​ನ ಮೊದಲ ಸಂಚಿಕೆಯನ್ನು ತಪ್ಪಿಸಿಕೊಳ್ಳಬೇಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ