AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾ ಮದುವೆ ಆಗೋ ಹುಡುಗ ಮಂಟಪದಿಂದ ಜೂಟ್; ಪೆಟ್ರೋಲ್ ಸುರಿದುಕೊಂಡ ಶಾಂತಿ  

ನಿತ್ಯಾಳ ಮದುವೆಯ ಸಂಭ್ರಮದಲ್ಲಿ ತೇಜಸ್ ಕೊನೆಯ ಕ್ಷಣದಲ್ಲಿ ಮಂಟಪದಿಂದ ಓಡಿಹೋಗಿದ್ದಾನೆ. ಕರ್ಣನ ತಂದೆ ರಮೇಶ್‌ನ ಪಿತೂರಿಯಿಂದಾಗಿ ಈ ಘಟನೆ ನಡೆದಿದೆ. ಈಗ ನಿತ್ಯಾ ಮತ್ತು ಕರ್ಣನ ವಿವಾಹಕ್ಕೆ ಸಿದ್ಧತೆ ನಡೆದಿದೆ. ತೇಜಸ್‌ನ ಪ್ರೀತಿಸಿದ ನಿತ್ಯಾ, ಮತ್ತು ಕರ್ಣನನ್ನು ಇಷ್ಟಪಟ್ಟ ನಿಧಿ ಇಬ್ಬರ ಕನಸುಗಳನ್ನೂ ರಮೇಶ್ ನುಚ್ಚು ನೂರು ಮಾಡಿದ್ದಾನೆ.

ನಿತ್ಯಾ ಮದುವೆ ಆಗೋ ಹುಡುಗ ಮಂಟಪದಿಂದ ಜೂಟ್; ಪೆಟ್ರೋಲ್ ಸುರಿದುಕೊಂಡ ಶಾಂತಿ  
ನಮ್ರತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 14, 2025 | 11:15 AM

Share

ನಿತ್ಯಾ ಮದುವೆ ಸಂಭ್ರಮದಿಂದ ನಡೆಯುತ್ತಿದೆ. ನಿತ್ಯಾ ಹಾಗೂ ತೇಜಸ್ ವಿವಾಹ ಆಗುವುದರಲ್ಲಿದ್ದರು. ಅರಿಶಿಣ ಶಾಸ್ತ್ರ ಕೂಡ ನಡೆದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಹುಡುಗ ಹಾಗೂ ಆತನ ಕುಟುಂಬದವರು ಮದುವೆ ಮಂಟಪದಿಂದ ಓಡಿ ಹೋಗಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು, ಕರ್ಣನ (Karna) ತಂದೆ ರಮೇಶ್. ಮುಂದೆ ಕರ್ಣ ಹಾಗೂ ನಿತ್ಯಾ ವಿವಾಹ ನಡೆಯಲಿದೆ. ಅದಕ್ಕೆ ಈಗ ಪೀಠಿಕೆ ಆರಂಭ ಆಗಿದೆ.

ನಿತ್ಯಾ ಮದುವೆ ಬಗ್ಗೆ ಸಾಕಷ್ಟು ಕನಸು ಕಂಡಿದ್ದಳು. ಆದರೆ, ಅವಳ ಕನಸು ಈಡೇರುತ್ತಿಲ್ಲ. ಈ ಬಗ್ಗೆ ಆಕೆಗೆ ಬೇಸರ ಇದೆ. ಆದರೂ ಮದುವೆ ಆಗಬೇಕಲ್ಲ ಎಂದು ಆಗುತ್ತಿದ್ದಾಳೆ. ಆದರೆ, ಈಗ ಮದುವೆ ಮಂಟಪದಿಂದ ತೇಜಸ್ ಓಡಿ ಹೋಗಿದ್ದಾನೆ. ಇದು ಆಕೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಆಕೆ ಇನ್ನೂ ಶಾಕ್​ನಲ್ಲಿ ಇದ್ದಾಳೆ.

ನಿತ್ಯಾ ಹಲವು ವರ್ಷಗಳಿಂದ ತೇಜಸ್​ನ ಪ್ರೀತಿಸುತ್ತಿದ್ದಳು. ಆತನನ್ನು ತುಂಬಾನೇ ನಂಬಿದ್ದಳು. ಆದರೆ, ಕೊನೆಯ ಕ್ಷಣದಲ್ಲಿ ಆತ ಓಡಿ ಹೋಗಿದ್ದು, ನಿತ್ಯಾ ಅಜ್ಜಿ ಶಾಂತಿಗೆ ಸಾಕಷ್ಟು ಬೇಸರ ಮೂಡಿಸಿದೆ. ಆಕೆಯೂ ಶಾಕ್​ಗೆ ಒಳಗಾಗಿದ್ದಾಳೆ. ಹೀಗಾಗಿ, ಪ್ರತಿಯೊಬ್ಬರ ಬಳಿ ತೆರಳಿ ಮದುವೆ ಆಗುವಂತೆ ಕೋರಿದ್ದಾಳೆ. ಆದರೆ, ಯಾರೊಬ್ಬರೂ ಮದುವೆ ಆಗಲು ಒಪ್ಪಿಲ್ಲ. ಕೊನೆಗೆ ಬೇರೆ ದಾರಿ ಕಾಣದೆ ನಿತ್ಯಾಳಿಗೂ ಪೆಟ್ರೋಲ್ ಸುರಿದು, ತಾನೂ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ನಿತ್ಯಾ ನಿರ್ಧರಿಸಿದ್ದಾಳೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

ರಮೇಶ್ ಕಿತಾಪತಿ

ಈ ಕೆಲಸದ ಹಿಂದೆ ಇರೋದು ರಮೇಶ್ ಕಿತಾಪತಿ. ಕರ್ಣನ ತಂದೆ ರಮೇಶ್ ಮೊದಲಿನಿಂದಲೂ ಕರ್ಣನ ಬಗ್ಗೆ ದ್ವೇಷ ಸಾಧಿಸುತ್ತಲೇ ಬರುತ್ತಿದ್ದಾನೆ. ಆತ ನಿಧಿಯನ್ನು ಪ್ರೀತಿಸುತ್ತಿರೋ ವಿಚಾರ ರಮೇಶ್​ಗೆ ತಿಳಿದಿದೆ. ಹೇಗಾದರೂ ಮಾಡಿ ನಿಧಿಯಿಂದ ಆತನನ್ನು ದೂರ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾನೆ. ಈ ಕಾರಣಕ್ಕೆ ಕರ್ಣ ಹಾಗೂ ನಿತ್ಯಾ ಮದುವೆ ಮಾಡಲು ಆತ ಮುಂದಾಗಿದ್ದಾನೆ. ಮುಂದೇನಾಗುತ್ತದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮದುವೆಗೂ ಮೊದಲೇ ಸಪ್ತಪದಿ ತುಳಿದ ಕರ್ಣ-ನಿಧಿ; ಕಣ್ಣೀರೇ ಬಂತು

ನಿತ್ಯಾ-ನಿಧಿ ಕನಸು ನುಚ್ಚು ನೂರು

ತೇಜಸ್​ನ ವಿವಾಹ ಆಗಬೇಕು ಎಂಬುದು ನಿತ್ಯಾಳ ಕನಸಾಗಿತ್ತು. ಆದರೆ, ಈ ಕನಸು ಈಡೇರಿಲ್ಲ. ಅತ್ತ ಕರ್ಣನ ಮದುವೆ ಆಗಬೇಕು ಎಂಬುದು ನಿಧಿ ಆಸೆ ಆಗಿತ್ತು. ಅದು ಕೂಡ ನೆರವೇರುತ್ತಿಲ್ಲ. ಹೀಗಾಗಿ, ಒಂದೇ ಕಲ್ಲಲ್ಲಿ ಇಬ್ಬರ ಕನಸನ್ನು ರಮೇಶ್ ನುಚ್ಚುನೂರು ಮಾಡಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?