AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Master Anand Daughter Vanshika: ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ
ನನ್ನಮ್ಮ ಸೂಪರ್ ಸ್ಟಾರ್ ವಿಶೇಷ ಸಂಚಿಕೆ
TV9 Web
| Updated By: ಮದನ್​ ಕುಮಾರ್​|

Updated on: Dec 23, 2021 | 9:26 AM

Share

ಈ ವಾರಾಂತ್ಯದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ಸಿಗಲಿದೆ. ‘ಕಲರ್ಸ್​ ಕನ್ನಡ’ (Colors Kannada) ವಾಹಿನಿ ಒಂದು ವಿಶೇಷ ಸಂಚಿಕೆಯನ್ನು ಸಿದ್ಧಪಡಿಸಿದೆ. ಈಗಾಗಲೇ ಸೂಪರ್​ ಹಿಟ್​ ಆಗಿರುವ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ಕಿರುತೆರೆ ಸೆಲೆಬ್ರಿಟಿಗಳ ‘ರಾಜಾ ರಾಣಿ’ ಕಾರ್ಯಕ್ರಮಗಳ ಸಂಗಮ ಆಗುತ್ತಿದೆ. ಈ ಎರಡೂ ಕಾರ್ಯಕ್ರಮದ ಸ್ಪರ್ಧಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಪ್ರೋಮೋ ಈಗ ಗಮನ ಸೆಳೆಯುತ್ತಿದೆ. ‘ರಾಜಾ ರಾಣಿ’ ಕಾರ್ಯಕ್ರಮದ ನಿವೇದಿತಾ ಗೌಡ (Niveditha Gowda) ಮತ್ತು ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Superstar) ಶೋನ ವಂಶಿಕಾ (Vanshika) ನಡುವೆ ನಡೆದ ಮಸ್ತ್​ ಮಾತುಕತೆಗೆ ಈ ವೇದಿಕೆ ಸಾಕ್ಷಿ ಆಗಿದೆ. ಶನಿವಾರ (ಡಿ.25) ಮತ್ತು ಭಾನುವಾರ (ಡಿ.26) ಈ ಎಪಿಸೋಡ್​ ಪ್ರಸಾರ ಆಗಲಿದೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮ ಪ್ರಸಾರ ಆರಂಭ ಆದಾಗಿನಿಂದ ನಟ-ನಿರೂಪಕ ಮಾಸ್ಟರ್​ ಆನಂದ್​ ಅವರ ಪುತ್ರಿ ವಂಶಿಕಾ ಸಿಕ್ಕಾಪಟ್ಟೆ ಮಿಂಚುತ್ತಿದ್ದಾಳೆ. ಈ ಪುಟಾಣಿಯ ಮಾತುಗಳನ್ನು ಕೇಳಿ ಬೆರಗಾಗದವರೇ ಇಲ್ಲ. ಈಗ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ‘ರಾಜಾ ರಾಣಿ’ ಶೋಗಳ ಸಂಗಮದಲ್ಲಿ ನಿವೇದಿತಾ ಗೌಡ ಮತ್ತು ವಂಶಿಕಾ ಮಾತಿನ ಚಕಮಕಿ ನಡೆಸಿದ್ದಾರೆ. ಅದರ ಒಂದು ಸಣ್ಣ ಝಲಕ್​ ಈ ಪ್ರೋಮೋದಲ್ಲಿ ಇದೆ.

ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​. ಅನೇಕರು ಆಕೆಯ ಪ್ರತಿಭೆಗೆ ಫಿದಾ ಆಗಿದ್ದಾರೆ. ವಂಶಿಕಾಗೆ ಅಭಿಮಾನಿ ಬಳಗವೂ ಹೆಚ್ಚುತ್ತಿದೆ. ಈ ವಾರಾಂತ್ಯದ ಎಪಿಸೋಡ್​ನಲ್ಲಿ ವಂಶಿಕಾ ವರ್ಸಸ್​ ವಿವೇದಿತಾ ಗೌಡ ಅವರ ಮುಖಾಮುಖಿ ನೋಡಲು ವೀಕ್ಷಕರು ಕಾದಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮಕ್ಕೆ ವೀಕ್ಷಕರು ಮನ ಸೋತಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಖ್ಯಾತ ನಿರೂಪಕ ಸೃಜನ್​ ಲೋಕೇಶ್​, ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಪುಟಾಣಿಗಳ ಕಲರವದಿಂದ ವೀಕ್ಷಕರಿಗೆ ಮಸ್ತ್​ ಮನರಂಜನೆ ಸಿಗುತ್ತಿದೆ. ಅನುಪಮಾ ಗೌಡ ಅವರು ನಿರೂಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

ನಿವೇದಿತಾ ಗೌಡ ಫೋಟೋಗಳಿಗೆ ಫ್ಯಾನ್ಸ್​ ಫಿದಾ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ