AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Master Anand Daughter Vanshika: ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ
ನನ್ನಮ್ಮ ಸೂಪರ್ ಸ್ಟಾರ್ ವಿಶೇಷ ಸಂಚಿಕೆ
TV9 Web
| Edited By: |

Updated on: Dec 23, 2021 | 9:26 AM

Share

ಈ ವಾರಾಂತ್ಯದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ಸಿಗಲಿದೆ. ‘ಕಲರ್ಸ್​ ಕನ್ನಡ’ (Colors Kannada) ವಾಹಿನಿ ಒಂದು ವಿಶೇಷ ಸಂಚಿಕೆಯನ್ನು ಸಿದ್ಧಪಡಿಸಿದೆ. ಈಗಾಗಲೇ ಸೂಪರ್​ ಹಿಟ್​ ಆಗಿರುವ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ಕಿರುತೆರೆ ಸೆಲೆಬ್ರಿಟಿಗಳ ‘ರಾಜಾ ರಾಣಿ’ ಕಾರ್ಯಕ್ರಮಗಳ ಸಂಗಮ ಆಗುತ್ತಿದೆ. ಈ ಎರಡೂ ಕಾರ್ಯಕ್ರಮದ ಸ್ಪರ್ಧಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಪ್ರೋಮೋ ಈಗ ಗಮನ ಸೆಳೆಯುತ್ತಿದೆ. ‘ರಾಜಾ ರಾಣಿ’ ಕಾರ್ಯಕ್ರಮದ ನಿವೇದಿತಾ ಗೌಡ (Niveditha Gowda) ಮತ್ತು ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Superstar) ಶೋನ ವಂಶಿಕಾ (Vanshika) ನಡುವೆ ನಡೆದ ಮಸ್ತ್​ ಮಾತುಕತೆಗೆ ಈ ವೇದಿಕೆ ಸಾಕ್ಷಿ ಆಗಿದೆ. ಶನಿವಾರ (ಡಿ.25) ಮತ್ತು ಭಾನುವಾರ (ಡಿ.26) ಈ ಎಪಿಸೋಡ್​ ಪ್ರಸಾರ ಆಗಲಿದೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮ ಪ್ರಸಾರ ಆರಂಭ ಆದಾಗಿನಿಂದ ನಟ-ನಿರೂಪಕ ಮಾಸ್ಟರ್​ ಆನಂದ್​ ಅವರ ಪುತ್ರಿ ವಂಶಿಕಾ ಸಿಕ್ಕಾಪಟ್ಟೆ ಮಿಂಚುತ್ತಿದ್ದಾಳೆ. ಈ ಪುಟಾಣಿಯ ಮಾತುಗಳನ್ನು ಕೇಳಿ ಬೆರಗಾಗದವರೇ ಇಲ್ಲ. ಈಗ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ‘ರಾಜಾ ರಾಣಿ’ ಶೋಗಳ ಸಂಗಮದಲ್ಲಿ ನಿವೇದಿತಾ ಗೌಡ ಮತ್ತು ವಂಶಿಕಾ ಮಾತಿನ ಚಕಮಕಿ ನಡೆಸಿದ್ದಾರೆ. ಅದರ ಒಂದು ಸಣ್ಣ ಝಲಕ್​ ಈ ಪ್ರೋಮೋದಲ್ಲಿ ಇದೆ.

ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​. ಅನೇಕರು ಆಕೆಯ ಪ್ರತಿಭೆಗೆ ಫಿದಾ ಆಗಿದ್ದಾರೆ. ವಂಶಿಕಾಗೆ ಅಭಿಮಾನಿ ಬಳಗವೂ ಹೆಚ್ಚುತ್ತಿದೆ. ಈ ವಾರಾಂತ್ಯದ ಎಪಿಸೋಡ್​ನಲ್ಲಿ ವಂಶಿಕಾ ವರ್ಸಸ್​ ವಿವೇದಿತಾ ಗೌಡ ಅವರ ಮುಖಾಮುಖಿ ನೋಡಲು ವೀಕ್ಷಕರು ಕಾದಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮಕ್ಕೆ ವೀಕ್ಷಕರು ಮನ ಸೋತಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಖ್ಯಾತ ನಿರೂಪಕ ಸೃಜನ್​ ಲೋಕೇಶ್​, ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಪುಟಾಣಿಗಳ ಕಲರವದಿಂದ ವೀಕ್ಷಕರಿಗೆ ಮಸ್ತ್​ ಮನರಂಜನೆ ಸಿಗುತ್ತಿದೆ. ಅನುಪಮಾ ಗೌಡ ಅವರು ನಿರೂಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

ನಿವೇದಿತಾ ಗೌಡ ಫೋಟೋಗಳಿಗೆ ಫ್ಯಾನ್ಸ್​ ಫಿದಾ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ