AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Master Anand Daughter Vanshika: ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ
ನನ್ನಮ್ಮ ಸೂಪರ್ ಸ್ಟಾರ್ ವಿಶೇಷ ಸಂಚಿಕೆ
TV9 Web
| Edited By: |

Updated on: Dec 23, 2021 | 9:26 AM

Share

ಈ ವಾರಾಂತ್ಯದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ಸಿಗಲಿದೆ. ‘ಕಲರ್ಸ್​ ಕನ್ನಡ’ (Colors Kannada) ವಾಹಿನಿ ಒಂದು ವಿಶೇಷ ಸಂಚಿಕೆಯನ್ನು ಸಿದ್ಧಪಡಿಸಿದೆ. ಈಗಾಗಲೇ ಸೂಪರ್​ ಹಿಟ್​ ಆಗಿರುವ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ಕಿರುತೆರೆ ಸೆಲೆಬ್ರಿಟಿಗಳ ‘ರಾಜಾ ರಾಣಿ’ ಕಾರ್ಯಕ್ರಮಗಳ ಸಂಗಮ ಆಗುತ್ತಿದೆ. ಈ ಎರಡೂ ಕಾರ್ಯಕ್ರಮದ ಸ್ಪರ್ಧಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಪ್ರೋಮೋ ಈಗ ಗಮನ ಸೆಳೆಯುತ್ತಿದೆ. ‘ರಾಜಾ ರಾಣಿ’ ಕಾರ್ಯಕ್ರಮದ ನಿವೇದಿತಾ ಗೌಡ (Niveditha Gowda) ಮತ್ತು ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Superstar) ಶೋನ ವಂಶಿಕಾ (Vanshika) ನಡುವೆ ನಡೆದ ಮಸ್ತ್​ ಮಾತುಕತೆಗೆ ಈ ವೇದಿಕೆ ಸಾಕ್ಷಿ ಆಗಿದೆ. ಶನಿವಾರ (ಡಿ.25) ಮತ್ತು ಭಾನುವಾರ (ಡಿ.26) ಈ ಎಪಿಸೋಡ್​ ಪ್ರಸಾರ ಆಗಲಿದೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮ ಪ್ರಸಾರ ಆರಂಭ ಆದಾಗಿನಿಂದ ನಟ-ನಿರೂಪಕ ಮಾಸ್ಟರ್​ ಆನಂದ್​ ಅವರ ಪುತ್ರಿ ವಂಶಿಕಾ ಸಿಕ್ಕಾಪಟ್ಟೆ ಮಿಂಚುತ್ತಿದ್ದಾಳೆ. ಈ ಪುಟಾಣಿಯ ಮಾತುಗಳನ್ನು ಕೇಳಿ ಬೆರಗಾಗದವರೇ ಇಲ್ಲ. ಈಗ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ‘ರಾಜಾ ರಾಣಿ’ ಶೋಗಳ ಸಂಗಮದಲ್ಲಿ ನಿವೇದಿತಾ ಗೌಡ ಮತ್ತು ವಂಶಿಕಾ ಮಾತಿನ ಚಕಮಕಿ ನಡೆಸಿದ್ದಾರೆ. ಅದರ ಒಂದು ಸಣ್ಣ ಝಲಕ್​ ಈ ಪ್ರೋಮೋದಲ್ಲಿ ಇದೆ.

ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​. ಅನೇಕರು ಆಕೆಯ ಪ್ರತಿಭೆಗೆ ಫಿದಾ ಆಗಿದ್ದಾರೆ. ವಂಶಿಕಾಗೆ ಅಭಿಮಾನಿ ಬಳಗವೂ ಹೆಚ್ಚುತ್ತಿದೆ. ಈ ವಾರಾಂತ್ಯದ ಎಪಿಸೋಡ್​ನಲ್ಲಿ ವಂಶಿಕಾ ವರ್ಸಸ್​ ವಿವೇದಿತಾ ಗೌಡ ಅವರ ಮುಖಾಮುಖಿ ನೋಡಲು ವೀಕ್ಷಕರು ಕಾದಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮಕ್ಕೆ ವೀಕ್ಷಕರು ಮನ ಸೋತಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಖ್ಯಾತ ನಿರೂಪಕ ಸೃಜನ್​ ಲೋಕೇಶ್​, ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಪುಟಾಣಿಗಳ ಕಲರವದಿಂದ ವೀಕ್ಷಕರಿಗೆ ಮಸ್ತ್​ ಮನರಂಜನೆ ಸಿಗುತ್ತಿದೆ. ಅನುಪಮಾ ಗೌಡ ಅವರು ನಿರೂಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

ನಿವೇದಿತಾ ಗೌಡ ಫೋಟೋಗಳಿಗೆ ಫ್ಯಾನ್ಸ್​ ಫಿದಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?