AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Master Anand Daughter Vanshika: ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​.

ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ
ನನ್ನಮ್ಮ ಸೂಪರ್ ಸ್ಟಾರ್ ವಿಶೇಷ ಸಂಚಿಕೆ
TV9 Web
| Edited By: |

Updated on: Dec 23, 2021 | 9:26 AM

Share

ಈ ವಾರಾಂತ್ಯದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ಸಿಗಲಿದೆ. ‘ಕಲರ್ಸ್​ ಕನ್ನಡ’ (Colors Kannada) ವಾಹಿನಿ ಒಂದು ವಿಶೇಷ ಸಂಚಿಕೆಯನ್ನು ಸಿದ್ಧಪಡಿಸಿದೆ. ಈಗಾಗಲೇ ಸೂಪರ್​ ಹಿಟ್​ ಆಗಿರುವ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ಕಿರುತೆರೆ ಸೆಲೆಬ್ರಿಟಿಗಳ ‘ರಾಜಾ ರಾಣಿ’ ಕಾರ್ಯಕ್ರಮಗಳ ಸಂಗಮ ಆಗುತ್ತಿದೆ. ಈ ಎರಡೂ ಕಾರ್ಯಕ್ರಮದ ಸ್ಪರ್ಧಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಪ್ರೋಮೋ ಈಗ ಗಮನ ಸೆಳೆಯುತ್ತಿದೆ. ‘ರಾಜಾ ರಾಣಿ’ ಕಾರ್ಯಕ್ರಮದ ನಿವೇದಿತಾ ಗೌಡ (Niveditha Gowda) ಮತ್ತು ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Superstar) ಶೋನ ವಂಶಿಕಾ (Vanshika) ನಡುವೆ ನಡೆದ ಮಸ್ತ್​ ಮಾತುಕತೆಗೆ ಈ ವೇದಿಕೆ ಸಾಕ್ಷಿ ಆಗಿದೆ. ಶನಿವಾರ (ಡಿ.25) ಮತ್ತು ಭಾನುವಾರ (ಡಿ.26) ಈ ಎಪಿಸೋಡ್​ ಪ್ರಸಾರ ಆಗಲಿದೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮ ಪ್ರಸಾರ ಆರಂಭ ಆದಾಗಿನಿಂದ ನಟ-ನಿರೂಪಕ ಮಾಸ್ಟರ್​ ಆನಂದ್​ ಅವರ ಪುತ್ರಿ ವಂಶಿಕಾ ಸಿಕ್ಕಾಪಟ್ಟೆ ಮಿಂಚುತ್ತಿದ್ದಾಳೆ. ಈ ಪುಟಾಣಿಯ ಮಾತುಗಳನ್ನು ಕೇಳಿ ಬೆರಗಾಗದವರೇ ಇಲ್ಲ. ಈಗ ‘ನನ್ನಮ್ಮ ಸೂಪರ್​ ಸ್ಟಾರ್​’ ಮತ್ತು ‘ರಾಜಾ ರಾಣಿ’ ಶೋಗಳ ಸಂಗಮದಲ್ಲಿ ನಿವೇದಿತಾ ಗೌಡ ಮತ್ತು ವಂಶಿಕಾ ಮಾತಿನ ಚಕಮಕಿ ನಡೆಸಿದ್ದಾರೆ. ಅದರ ಒಂದು ಸಣ್ಣ ಝಲಕ್​ ಈ ಪ್ರೋಮೋದಲ್ಲಿ ಇದೆ.

ಚಿಟಪಟನೆ ಮಾತನಾಡುವ ವಂಶಿಕಾಳನ್ನು ಕಂಡರೆ ಎಲ್ಲರಿಗೂ ಇಷ್ಟ. ಆಕೆಯ ಮಾತುಗಳಿಗೆ ಈಗಾಗಲೇ ಎಲ್ಲರೂ ಮರುಳಾಗಿದ್ದಾರೆ. ನಟನೆಯಲ್ಲೂ ವಂಶಿಕಾ ಸೂಪರ್​. ಅನೇಕರು ಆಕೆಯ ಪ್ರತಿಭೆಗೆ ಫಿದಾ ಆಗಿದ್ದಾರೆ. ವಂಶಿಕಾಗೆ ಅಭಿಮಾನಿ ಬಳಗವೂ ಹೆಚ್ಚುತ್ತಿದೆ. ಈ ವಾರಾಂತ್ಯದ ಎಪಿಸೋಡ್​ನಲ್ಲಿ ವಂಶಿಕಾ ವರ್ಸಸ್​ ವಿವೇದಿತಾ ಗೌಡ ಅವರ ಮುಖಾಮುಖಿ ನೋಡಲು ವೀಕ್ಷಕರು ಕಾದಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮಕ್ಕೆ ವೀಕ್ಷಕರು ಮನ ಸೋತಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಖ್ಯಾತ ನಿರೂಪಕ ಸೃಜನ್​ ಲೋಕೇಶ್​, ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಪುಟಾಣಿಗಳ ಕಲರವದಿಂದ ವೀಕ್ಷಕರಿಗೆ ಮಸ್ತ್​ ಮನರಂಜನೆ ಸಿಗುತ್ತಿದೆ. ಅನುಪಮಾ ಗೌಡ ಅವರು ನಿರೂಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

ನಿವೇದಿತಾ ಗೌಡ ಫೋಟೋಗಳಿಗೆ ಫ್ಯಾನ್ಸ್​ ಫಿದಾ

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!