AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 05, 2021 | 3:36 PM

Share

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ