AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
TV9 Web
| Edited By: |

Updated on: Sep 05, 2021 | 3:36 PM

Share

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!