ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 05, 2021 | 3:36 PM

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ತಾಜಾ ಸುದ್ದಿ
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
Daily Devotional: ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಹಾಗೂ ಮಹತ್ವ ತಿಳಿಯಿರಿ
Daily Devotional: ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಹಾಗೂ ಮಹತ್ವ ತಿಳಿಯಿರಿ
Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಔಟಾದ ಹತಾಶೆಯಲ್ಲಿ ಹೆಲ್ಮೆಟ್ ಮೇಲೆ ಕೋಪ ತೋರಿದ ಕಾರ್ಲೋಸ್ ಬ್ರಾಥ್​ವೈಟ್
ಔಟಾದ ಹತಾಶೆಯಲ್ಲಿ ಹೆಲ್ಮೆಟ್ ಮೇಲೆ ಕೋಪ ತೋರಿದ ಕಾರ್ಲೋಸ್ ಬ್ರಾಥ್​ವೈಟ್
ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ:ರೇಣುಕಾಸ್ವಾಮಿ ತಂದೆ
ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ:ರೇಣುಕಾಸ್ವಾಮಿ ತಂದೆ
ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟ ರೇಣುಕಾ ಅಪ್ಪ
ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟ ರೇಣುಕಾ ಅಪ್ಪ
ಜೈಲಿನಲ್ಲಿ ಬೀಡಿ, ಸಿಗರೇಟ್​ಗೆ ಅವಕಾಶ ಇರುತ್ತಾ? ನಿವೃತ್ತ ಪೊಲೀಸ್ ಉತ್ತರ..
ಜೈಲಿನಲ್ಲಿ ಬೀಡಿ, ಸಿಗರೇಟ್​ಗೆ ಅವಕಾಶ ಇರುತ್ತಾ? ನಿವೃತ್ತ ಪೊಲೀಸ್ ಉತ್ತರ..
ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿದ ಶಾಸಕನ​ ಮುಂದೆಯೇ ACP ಆಕ್ರೋಶ
ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿದ ಶಾಸಕನ​ ಮುಂದೆಯೇ ACP ಆಕ್ರೋಶ
ಆಭರಣದಂಗಡಿಗೆ ನುಗ್ಗಿ ಗುಂಡಿ ಹಾರಿಸಿದ ಖದೀಮರು; ಮಾಲೀಕ ಸಾವು, ಐವರಿಗೆ ಗಾಯ
ಆಭರಣದಂಗಡಿಗೆ ನುಗ್ಗಿ ಗುಂಡಿ ಹಾರಿಸಿದ ಖದೀಮರು; ಮಾಲೀಕ ಸಾವು, ಐವರಿಗೆ ಗಾಯ