AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 05, 2021 | 3:36 PM

Share

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು