AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
TV9 Web
| Edited By: |

Updated on: Sep 05, 2021 | 3:36 PM

Share

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ