AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ
TV9 Web
| Edited By: |

Updated on: Sep 05, 2021 | 3:36 PM

Share

ಗಾಯಕ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ಅವರು ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪರಿಚಯಗೊಂಡು, ನಂತರ ಆ ಪರಿಚಯ ಪ್ರೀತಿಗೆ ತಿರುಗಿ, ಕೊನೆಗೆ ಇಬ್ಬರೂ ಮದುವೆ ಆದರು. ನಿವೇದಿತಾ ಅವರಿಗೆ ದಸರಾ ವೇದಿಕೆ ಮೇಲೆ ಚಂದನ್​ ಪ್ರಪೋಸ್​ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೊಂದು ಅದ್ಭುತ ಕ್ಷಣವಾಗಬೇಕಿತ್ತಾದರೂ, ಕಾಂಟ್ರವರ್ಸಿಯಿಂದಾಗಿ ನಿವೇದಿತಾ ನೊಂದುಕೊಂಡರು. ಈಗ ನಿವೇದಿತಾಗೋಸ್ಕರ ಚಂದನ್​ ಗಿಫ್ಟ್​ ಒಂದನ್ನು ನೀಡಿದ್ದಾರೆ. ಇದನ್ನು ನೋಡಿದ ಅವರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ.

‘ರಾಜಾ-ರಾಣಿ’ ಶೋ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸೆಲೆಬ್ರಿಟಿ ಜೋಡಿಗಳನ್ನು ವೇದಿಕೆ ಮೇಲೆ ಕರೆಸಿ ಅವರಿಗೆ ನಾನಾ ಟಾಸ್ಕ್​ ನೀಡೋದು, ಅವರ ಜೀವನದಲ್ಲಿ ಮರೆಯಲಾರದ ಘಟನೆ ಮೆಲುಕು ಹಾಕುವುದು ಮತ್ತಿತ್ಯಾದಿ ವಿಚಾರಗಳನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಮಾಡಿಸಲಾಗುತ್ತಿದೆ. ಅನೇಕ ಭಾವುಕ ಸನ್ನಿವೇಶಗಳಿಗೂ ಈ ವೇದಿಕೆ ಸಾಕ್ಷಿಯಾಗುತ್ತಿದೆ. ಈಗ ಚಂದನ್​ ಶೆಟ್ಟಿ ಅವರು ಪತ್ನಿ ನಿವೇದಿತಾಗೆ ವಿಶೇಷ ಗಿಫ್ಟ್​ ಒಂದನ್ನು ನೀಡಿದ್ದಾರೆ.

ಚಂದನ್​ ಶೆಟ್ಟಿ ಗಾಯಕ. ಜತೆಗೆ ಅನೇಕ ಹಾಡುಗಳನ್ನು ಅವರು ಬರೆದಿದ್ದಾರೆ. ಈಗ ನಿವೇದಿತಾಗೋಸ್ಕರ ಚಂದನ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಅದನ್ನು ‘ರಾಜಾ-ರಾಣಿ’ ವೇದಿಕೆ ಮೇಲೆ ಹಾಡಿದ್ದಾರೆ. ‘ಮದುವೆ ಆದ ಮೇಲೆ ನೀನು ನನ್ನ ಪ್ರಪಂಚ ಆಗಿದ್ದೀಯಾ. ಪ್ರತಿ ಸಾಲುಗಳೂ ನಿನಗೋಸ್ಕರ ಬರೆದಿದ್ದು’ ಎಂದರು ಚಂದನ್​ ಶೆಟ್ಟಿ. ಅವರು ಹಾಡು ಹೇಳುತ್ತಿದ್ದಂತೆಯೇ ಅತ್ತರು ನಿವೇದಿತಾ. ‘ಇಷ್ಟು ವರ್ಷ ಒಟ್ಟಿಗೆ ಇದ್ರೂ ಖುಷಿಯ ಕಣ್ಣೀರು ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ನಾನು ಖುಷಿಯಿಂದ ಅಳುತ್ತಿದ್ದೇನೆ’ ಎಂದರು ನಿವೇದಿತಾ.

‘ಬಾಳ ಸಂಗಾತಿಯ ನಗುವಿಗಾಗಿ ಚಂದನ್ ಶೆಟ್ರ ಮ್ಯಾಜಿಕಲ್ ಹಾಡು’ ಎಂದು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಶೋ ಪ್ರಸಾರವಾಗಲಿದೆ. ಚಂದನ್​ ಶೆಟ್ಟಿ ಬರೆದ ಹಾಡು ಹೇಗಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ