AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ’ ಪ್ರಸಾರ ಕಂಡ ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭ ಆಗಿದೆ. ಸೆಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಹಲವು ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್​ನಲ್ಲಿ ಮೂಡಿ ಬಂದಿದೆ. ಆದರೆ, ಈ ಬಾರಿ ಒಂದು ಬ್ಯಾಡ್​ ನ್ಯೂಸ್ ಕೂಡ ಇದೆ.

‘ಬಿಗ್ ಬಾಸ್ ಕನ್ನಡ’ ಪ್ರಸಾರ ಕಂಡ ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 30, 2024 | 7:05 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ದೊಡ್ಡ ಮಟ್ಟದ ಓಪನಿಂಗ್ ಸಿಕ್ಕಿದೆ. ಈ ಬಾರಿ ಒಟ್ಟೂ 17 ಮಂದಿ ದೊಡ್ಮನೆ ಸೇರಿದ್ದಾರೆ. ಈ ಬಾರಿ ನರಕ-ಸ್ವರ್ಗ ಕಾನ್ಸೆಪ್ಟ್​ನಲ್ಲಿ ಬಿಗ್ ಬಾಸ್ ಮೂಡಿ ಬಂದಿದೆ. ಈಗ ಬಿಗ್ ಬಾಸ್ ವೀಕ್ಷಕರಿಗೆ ಮೊದಲ ದಿನವೇ ಬ್ಯಾಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಏನು ಆ ಬ್ಯಾಡ್ ನ್ಯೂಸ್ ಎಂಬ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ’ ಈ ಬಾರಿ ಕಲರ್ಸ್​ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಈ ಹಿಂದಿನ ಕೆಲವು ವರ್ಷ ‘ಬಿಗ್ ಬಾಸ್’ಗೆ 24 ಗಂಟೆ ಲೈವ್ ನೀಡಲಾಗುತ್ತಿತ್ತು. ಈ ಬಾರಿ ಅದನ್ನು ತೆಗೆಯಲಾಗಿದೆ. ಎಪಿಸೋಡ್​ಗಿಂತ ಮೊದಲೇ ಬಿಗ್ ಬಾಸ್ ನೋಡಬಹುದು ಎಂದು ಪ್ಲ್ಯಾನ್ ಮಾಡಿದ್ದವರಿಗೆ ಬೇಸರ ಆಗಿದೆ.

ಕಳೆದ ವರ್ಷ ‘ಬಿಗ್ ಬಾಸ್’ ಲೈವ್ ನೀಡಿದಾಗ ಕೆಲವು ತೊಂದರೆಗಳು ಕೂಡ ಎದುರಾಗಿದ್ದವು. ವೀಕ್ಷಕರಿಗೆ ಎಲ್ಲವೂ ತಿಳಿಯಬಾರದು ಎನ್ನುವ ಕಾರಣಕ್ಕೆ ಪ್ರಮುಖ ಸಂಭಾಷಣೆಗಳನ್ನು ಮ್ಯೂಟ್ ಮಾಡಾಗುತ್ತಿತ್ತು. ಅಲ್ಲದೆ, ಯಾವುದೇ ಟಾಸ್ಕ್​ಗಳನ್ನು ಇಲ್ಲಿ ತೋರಿಸುವ ಕೆಲಸ ಆಗುತ್ತಿರಲಿಲ್ಲ. ಇದು ಅನೇಕರಿಗೆ ಬೇಸರ ಮೂಡಿಸಿತ್ತು. ಅನೇಕರು ಇದರ ಬಗ್ಗೆ ಅಪಸ್ವರ ತೆಗೆದಿದ್ದರು. ಈ ಬಾರಿ ಲೈವ್​ ಇರುವುದಿಲ್ಲ. ಹೀಗಾಗಿ, ರಾತ್ರಿ ಒಂದೂವರೆ ಗಂಟೆ ತೋರಿಸುವ ಎಪಿಸೋಡ್​ನೇ ಎಲ್ಲರೂ ನೋಡಬೇಕು.

ಇದನ್ನೂ ಓದಿ: BBK11: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು, ವಿವರ, ಫೋಟೋ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ಬಾರಿ ಸ್ವರ್ಗ ನರಕ ಕಾನ್ಸೆಪ್ಟ್​ನಲ್ಲಿ ಇದೆ. 10 ಜನ ಸ್ವರ್ಗ ಹಾಗೂ 7 ಜನ ನರಕದಲ್ಲಿ ಇದ್ದಾರೆ. ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್ ಸುರೇಶ್, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ್, ಉಗ್ರಂ ಮಂಜು, ಮೋಕ್ಷಿತಾ ಪೈ, ರಂಜಿತ್ ಕುಮಾರ್ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ