AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?

ಕಳೆದ ನವರಾತ್ರಿ ಸಂದರ್ಭದಲ್ಲಿ ಬಿಗ್ ಬಾಸ್ ಯಾವುದೇ ಎಲಿಮಿನೇಷನ್ ಮಾಡಿರಲಿಲ್ಲ. ಎಲಿಮಿನೇಷನ್ ಪ್ರಕ್ರಿಯೆ ನಡೆಸಿದ್ದರೂ ಕೊನೆಯಲ್ಲಿ ಡ್ರಾಮಾ ಮಾಡಿ ಸ್ಪರ್ಧಿಗಳನ್ನು ಹಿಂದಕ್ಕೆ ಕರೆಯಲಾಯಿತು. ಈ ಬಾರಿಯೂ ಅದೇ ರೀತಿಯಲ್ಲಿ ನಡೆಯಬಹುದು ಎಂದು ಊಹಿಸಿಲಾಗಿದೆ.

ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 12, 2024 | 7:10 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರಾಂತ್ಯಕ್ಕೆ ಸ್ಪರ್ಧಿಗಳು ರೆಡಿ ಆಗಿದ್ದಾರೆ. ಈಗಾಗಲೇ ಸ್ಪರ್ಧಿಗಳ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಮೂಡಿದ್ದು, 16 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಈ ವಾರ ಬಹುತೇಕರು ನಾಮಿನೇಟ್ ಆಗಿದ್ದು, ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಬಾರಿ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಈ ವಾರ ನಿಯಮ ಬ್ರೇಕ್ ಮಾಡಿ ಬಿಗ್ ಬಾಸ್​ನಲ್ಲಿ ಎಲ್ಲರೂ ನಾಮಿನೇಟ್ ಆದರು. ನಂತರ ಬಿಗ್ ಬಾಸ್ ನಾಮಿನೇಷನ್​ನಿಂದ ಬಚಾವ್ ಆಗಲು ಕೆಲವು ಚಾನ್ಸ್ ಕೊಟ್ಟರು. ಅಂತಿಮವಾಗಿ ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್​, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ.

ಹಾಗಾದರೆ ಇವರ ಪೈಕಿ ಹೊರ ಹೋಗುವವರು ಯಾರು? ಈ ಪ್ರಶ್ನೆಗೆ ಉತ್ತರ ಸಿಗಬೇಕು ಎಂದರೆ ಭಾನುವಾರ (ಅಕ್ಟೋಬರ್ 13) ರಾತ್ರಿವರೆಗೆ ಕಾಯಲೇಬೇಕು. ಈ ವಾರ ನಾಮಿನೇಷನ್ ಇಲ್ಲದೆಯೂ ಇರಬಹುದು ಎಂದು ಕೆಲವರು ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಏಕೆಂದರೆ ಜಿಯೋ ಸಿನಿಮಾದಲ್ಲಿ ಈವರೆಗೆ ಯಾವುದೇ ವೋಟಿಂಗ್ ಲೈನ್ ಬಿಟ್ಟಿಲ್ಲ.

ಕಳೆದ ನವರಾತ್ರಿ ಸಂದರ್ಭದಲ್ಲಿ ಬಿಗ್ ಬಾಸ್ ಯಾವುದೇ ಎಲಿಮಿನೇಷನ್ ಮಾಡಿರಲಿಲ್ಲ. ಎಲಿಮಿನೇಷನ್ ಪ್ರಕ್ರಿಯೆ ನಡೆಸಿದ್ದರೂ ಕೊನೆಯಲ್ಲಿ ಡ್ರಾಮಾ ಮಾಡಿ ಸ್ಪರ್ಧಿಗಳನ್ನು ಹಿಂದಕ್ಕೆ ಕರೆಯಲಾಯಿತು. ಈ ಬಾರಿಯೂ ಅದೇ ರೀತಿಯಲ್ಲಿ ನಡೆಯಬಹುದು ಎಂದು ಊಹಿಸಿಲಾಗಿದೆ. ಇಂದು (ಅಕ್ಟೋಬರ್ 12) ಸುದೀಪ್ ಈ ಬಗ್ಗೆ ಅನೌನ್ಸ್ ಕೂಡ ಮಾಡಬಹುದು.

ಇದನ್ನೂ ಓದಿ: ರಾತ್ರೋರಾತ್ರಿ ಬಿಗ್ ಬಾಸ್​ ಮನೆ ಅಸ್ತವ್ಯಸ್ತ; ಮಾಸ್ಕ್ ಧರಿಸಿದ ವ್ಯಕ್ತಿಗಳಿಂದ ವಸ್ತುಗಳಿಗೆ ಹಾನಿ

ಸದ್ಯ ಇರುವ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. ಯಾರೇ ಎಲಿಮಿನೇಟ್ ಆದರೂ ಅದು ಮನೆಗೆ ನಷ್ಟವೇ. ಈ ಕಾರಣಕ್ಕೆ ಈ ಬಾರಿ ಯಾವುದೇ ಎಲಿಮಿನೇಷನ್ ನಡೆಸದೇ ಇರಲು ನಿರ್ಧರಿಸಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ