AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?

ಕಳೆದ ನವರಾತ್ರಿ ಸಂದರ್ಭದಲ್ಲಿ ಬಿಗ್ ಬಾಸ್ ಯಾವುದೇ ಎಲಿಮಿನೇಷನ್ ಮಾಡಿರಲಿಲ್ಲ. ಎಲಿಮಿನೇಷನ್ ಪ್ರಕ್ರಿಯೆ ನಡೆಸಿದ್ದರೂ ಕೊನೆಯಲ್ಲಿ ಡ್ರಾಮಾ ಮಾಡಿ ಸ್ಪರ್ಧಿಗಳನ್ನು ಹಿಂದಕ್ಕೆ ಕರೆಯಲಾಯಿತು. ಈ ಬಾರಿಯೂ ಅದೇ ರೀತಿಯಲ್ಲಿ ನಡೆಯಬಹುದು ಎಂದು ಊಹಿಸಿಲಾಗಿದೆ.

ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 12, 2024 | 7:10 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರಾಂತ್ಯಕ್ಕೆ ಸ್ಪರ್ಧಿಗಳು ರೆಡಿ ಆಗಿದ್ದಾರೆ. ಈಗಾಗಲೇ ಸ್ಪರ್ಧಿಗಳ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಮೂಡಿದ್ದು, 16 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಈ ವಾರ ಬಹುತೇಕರು ನಾಮಿನೇಟ್ ಆಗಿದ್ದು, ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಬಾರಿ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಈ ವಾರ ನಿಯಮ ಬ್ರೇಕ್ ಮಾಡಿ ಬಿಗ್ ಬಾಸ್​ನಲ್ಲಿ ಎಲ್ಲರೂ ನಾಮಿನೇಟ್ ಆದರು. ನಂತರ ಬಿಗ್ ಬಾಸ್ ನಾಮಿನೇಷನ್​ನಿಂದ ಬಚಾವ್ ಆಗಲು ಕೆಲವು ಚಾನ್ಸ್ ಕೊಟ್ಟರು. ಅಂತಿಮವಾಗಿ ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್​, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ.

ಹಾಗಾದರೆ ಇವರ ಪೈಕಿ ಹೊರ ಹೋಗುವವರು ಯಾರು? ಈ ಪ್ರಶ್ನೆಗೆ ಉತ್ತರ ಸಿಗಬೇಕು ಎಂದರೆ ಭಾನುವಾರ (ಅಕ್ಟೋಬರ್ 13) ರಾತ್ರಿವರೆಗೆ ಕಾಯಲೇಬೇಕು. ಈ ವಾರ ನಾಮಿನೇಷನ್ ಇಲ್ಲದೆಯೂ ಇರಬಹುದು ಎಂದು ಕೆಲವರು ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಏಕೆಂದರೆ ಜಿಯೋ ಸಿನಿಮಾದಲ್ಲಿ ಈವರೆಗೆ ಯಾವುದೇ ವೋಟಿಂಗ್ ಲೈನ್ ಬಿಟ್ಟಿಲ್ಲ.

ಕಳೆದ ನವರಾತ್ರಿ ಸಂದರ್ಭದಲ್ಲಿ ಬಿಗ್ ಬಾಸ್ ಯಾವುದೇ ಎಲಿಮಿನೇಷನ್ ಮಾಡಿರಲಿಲ್ಲ. ಎಲಿಮಿನೇಷನ್ ಪ್ರಕ್ರಿಯೆ ನಡೆಸಿದ್ದರೂ ಕೊನೆಯಲ್ಲಿ ಡ್ರಾಮಾ ಮಾಡಿ ಸ್ಪರ್ಧಿಗಳನ್ನು ಹಿಂದಕ್ಕೆ ಕರೆಯಲಾಯಿತು. ಈ ಬಾರಿಯೂ ಅದೇ ರೀತಿಯಲ್ಲಿ ನಡೆಯಬಹುದು ಎಂದು ಊಹಿಸಿಲಾಗಿದೆ. ಇಂದು (ಅಕ್ಟೋಬರ್ 12) ಸುದೀಪ್ ಈ ಬಗ್ಗೆ ಅನೌನ್ಸ್ ಕೂಡ ಮಾಡಬಹುದು.

ಇದನ್ನೂ ಓದಿ: ರಾತ್ರೋರಾತ್ರಿ ಬಿಗ್ ಬಾಸ್​ ಮನೆ ಅಸ್ತವ್ಯಸ್ತ; ಮಾಸ್ಕ್ ಧರಿಸಿದ ವ್ಯಕ್ತಿಗಳಿಂದ ವಸ್ತುಗಳಿಗೆ ಹಾನಿ

ಸದ್ಯ ಇರುವ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. ಯಾರೇ ಎಲಿಮಿನೇಟ್ ಆದರೂ ಅದು ಮನೆಗೆ ನಷ್ಟವೇ. ಈ ಕಾರಣಕ್ಕೆ ಈ ಬಾರಿ ಯಾವುದೇ ಎಲಿಮಿನೇಷನ್ ನಡೆಸದೇ ಇರಲು ನಿರ್ಧರಿಸಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ