AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exclusive: ಈ ಬಾರಿ ಕನ್ನಡ ಬಿಗ್ ಬಾಸ್ ಒಟಿಟಿ ಸೀಸನ್ ಇರುತ್ತಾ, ಇರಲ್ವಾ? ಇಲ್ಲಿದೆ ಪಕ್ಕಾ ಮಾಹಿತಿ

ಕಳೆದ ವರ್ಷ ಬಿಗ್ ಬಾಸ್ ಒಟಿಟಿ ಆರಂಭ ಆಗಿತ್ತು. ಟಿವಿ ಸೀಸನ್ ಆರಂಭ ಆಗುವುದಕ್ಕೂ ಮೊದಲು ಈ ಸೀಸನ್ ಪ್ರದರ್ಶನ ಕಂಡಿತ್ತು. ಕೇವಲ ವೂಟ್ ಆ್ಯಪ್​ನಲ್ಲಿ ಮಾತ್ರ ಇದನ್ನು ನೋಡಲು ಅವಕಾಶ ಇತ್ತು. ಒಟಿಟಿ ಸೀಸನ್ ಪೂರ್ಣಗೊಂಡ ಒಂದು ವಾರ ಗ್ಯಾಪ್ ಬಳಿಕ ಟಿವಿ ಸೀಸನ್ ಆರಂಭಗೊಂಡಿತು.

Exclusive: ಈ ಬಾರಿ ಕನ್ನಡ ಬಿಗ್ ಬಾಸ್ ಒಟಿಟಿ ಸೀಸನ್ ಇರುತ್ತಾ, ಇರಲ್ವಾ? ಇಲ್ಲಿದೆ ಪಕ್ಕಾ ಮಾಹಿತಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 23, 2023 | 10:45 AM

Share

‘ಬಿಗ್​ ಬಾಸ್’ (Bigg Boss) ರಿಯಾಲಿಟಿ ಶೋಗೆ ದೊಡ್ಡ ವೀಕ್ಷಕರ ವರ್ಗ ಇದೆ. ಭಾರತದಲ್ಲಿ ವಿವಿಧ ಭಾಷೆಗಳಲ್ಲಿ ಈ ರಿಯಾಲಿಟಿ ಶೋ ನಡೆಸಲಾಗುತ್ತಿದೆ. ಕನ್ನಡದಲ್ಲಿ ಯಶಸ್ವಿಯಾಗಿ 9 ಸೀಸನ್ ಪೂರ್ಣಗೊಂಡಿದೆ. 10ನೇ ಸೀಸನ್​ಗೆ ಸಿದ್ಧತೆ ನಡೆದಿದೆ. ಕಳೆದ ವರ್ಷ ಒಟಿಟಿ ಸೀಸನ್ (Bigg Boss OTT Season) ಇತ್ತು. 45 ದಿನಗಳ ಕಾಲ ಈ ಸೀಸನ್ ಪ್ರಸಾರ ಕಂಡಿತ್ತು. ಈ ಬಾರಿ ಒಟಿಟಿ ಸೀಸನ್ ಇರುತ್ತದೆಯೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಆ ಬಗ್ಗೆ ಪಕ್ಕಾ ಮಾಹಿತಿ ಇಲ್ಲಿದೆ.

ಕಳೆದ ವರ್ಷ ಬಿಗ್ ಬಾಸ್ ಒಟಿಟಿ ಆರಂಭ ಆಗಿತ್ತು. ಟಿವಿ ಸೀಸನ್ ಆರಂಭ ಆಗುವುದಕ್ಕೂ ಮೊದಲು ಈ ಸೀಸನ್ ಪ್ರದರ್ಶನ ಕಂಡಿತ್ತು. ಕೇವಲ ವೂಟ್ ಆ್ಯಪ್​ನಲ್ಲಿ ಮಾತ್ರ ಇದನ್ನು ನೋಡಲು ಅವಕಾಶ ಇತ್ತು. ಒಟಿಟಿ ಸೀಸನ್ ಪೂರ್ಣಗೊಂಡ ಒಂದು ವಾರ ಗ್ಯಾಪ್ ಬಳಿಕ ಟಿವಿ ಸೀಸನ್ ಆರಂಭಗೊಂಡಿತು. ಆದರೆ, ಈ ಬಾರಿ ಒಟಿಟಿ ಸೀಸನ್ ಇರುವುದಿಲ್ಲ! ಈ ವಿಚಾರವನ್ನು ಮೂಲಗಳು ಖಚಿತಪಡಿಸಿವೆ.

10ನೇ ಸೀಸನ್ ಎಂದಾಗ ಒಂದು ವಿಶೇಷ ಭಾವನೆ ಇರುತ್ತದೆ. ಈ ಕಾರಣದಿಂದಲೇ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸಖತ್ ವಿಶೇಷ ಎನಿಸಿಕೊಂಡಿದೆ. ಹೀಗಾಗಿ ಸಖತ್ ಅದ್ದೂರಿಯಾಗಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಬರಲಿದೆ. ಅಕ್ಟೋಬರ್ ತಿಂಗಳಲ್ಲಿ ಬಿಗ್ ಬಾಸ್ ಆರಂಭ  ಆಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಹೊಸ ಸೀಸನ್​ನಲ್ಲಿ ಇರಲಿದೆ ಹಲವು ಸರ್​ಪ್ರೈಸ್; ಉಲ್ಟಾ-ಪಲ್ಟಾ ಆಗಿದೆ ಪ್ರೋಮೋ

ಬಿಗ್ ಬಾಸ್ ಎಂದಾಕ್ಷಣ ನೆನಪಾಗೋದು ಕಿಚ್ಚ ಸುದೀಪ್. ಅವರ ಉಡುಗೆ, ಅವರ ಸ್ಟೈಲ್, ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಳ್ಳೋ ರೀತಿ, ಅವರನ್ನು ನಗಿಸುವ ವಿಧಾನ, ಸ್ಪರ್ಧಿಗಳನ್ನು ಮನೆಯವರೆಂದು ಟ್ರೀಟ್ ಮಾಡುವ ರೀತಿ, ಅವರಿಗೋಸ್ಕರ ಅಡುಗೆ ಮಾಡಿ ಕೊಡೋದೂ.. ಹೀಗೆ ಎಲ್ಲವೂ ಇಷ್ಟವಾಗುತ್ತದೆ. ಕಳೆದ ಒಂಭತ್ತು ಸೀಸನ್​ಗಳನ್ನು ಅವರು ಮುನ್ನಡೆಸಿಕೊಟ್ಟಿದ್ದಾರೆ. 10ನೇ ಸೀಸನ್ ಕೂಡ ಅವರ ಸಾರಥ್ಯದಲ್ಲೇ ಸಾಗಲಿದೆ. ಸುದೀಪ್​ಗೋಸ್ಕರ ಈ ರಿಯಾಲಿಟಿ ಶೋ ವೀಕ್ಷಿಸುವ ಅನೇಕರಿದ್ದಾರೆ. ಈ ವಿಚಾರ ಕೇಳಿ ಕಿಚ್ಚನ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶೀಘ್ರದಲ್ಲೇ ಇದರ ಪ್ರೋಮೋ ಶೂಟ್ ನಡೆಯೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ