AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೂ ಮೊದಲು ಈ ಸಂಪ್ರದಾಯ ಕೈ ಬಿಟ್ಟ ವಾಹಿನಿ

ಬಿಗ್ ಬಾಸ್ ಕನ್ನಡ ಸೀಸನ್ 12 ಸೆಪ್ಟೆಂಬರ್ 28 ರಂದು ಆರಂಭವಾಗಲಿದೆ. ಈ ಬಾರಿ ಸಾಂಪ್ರದಾಯಿಕ ಪತ್ರಿಕಾಗೋಷ್ಠಿ ಇರುವುದಿಲ್ಲ. ಜಿಯೋ ಹಾಟ್‌ಸ್ಟಾರ್‌ನಲ್ಲಿ 24/7 ಲೈವ್ ಸ್ಟ್ರೀಮಿಂಗ್ ಇರಲಿದೆ ಎನ್ನಲಾಗಿದೆ. ಬಿಡದಿಯಲ್ಲಿರುವ ಹೊಸ ಮನೆ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಸತ್ಯನಾರಾಯಣ ಪೂಜೆ ನೆರವೇರಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೂ ಮೊದಲು ಈ ಸಂಪ್ರದಾಯ ಕೈ ಬಿಟ್ಟ ವಾಹಿನಿ
Kichcha Sudeep
ರಾಜೇಶ್ ದುಗ್ಗುಮನೆ
|

Updated on: Sep 24, 2025 | 3:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಆರಂಭಕ್ಕೆ ಇನ್ನು ಬಾಕಿ ಉಳಿದಿರೋದು ಬೆರಳೆಣಿಕೆ ದಿನಗಳು ಮಾತ್ರ. ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 28ರಂದು ಶೋಗೆ ಅದ್ದೂರಿಯಾಗಿ ಚಾಲನೆ ನೀಡಲಿದ್ದಾರೆ. ಈ ವರ್ಷ ಹಲವು ವಿಶೇಷತೆಗಳೊಂದಿಗೆ ಶೋ ಆರಂಭ ಆಗಲಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಒಂದು ಮಹತ್ವದ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿದೆ ಎಂದು ವರದಿ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆ ಸಂಪೂರ್ಣ ಸಿದ್ಧವಾಗಿದೆಯಂತೆ. ಬೆಂಗಳೂರು ಹೊರವಲಯದ ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ‘ಬಿಗ್ ಬಾಸ್ 12’ ಮನೆ ರೆಡಿ ಆಗಿದೆ. ಇತ್ತೀಚೆಗೆ ಈ ಮನೆಯಲ್ಲಿ ಸತ್ಯ ನಾರಾಯಣ ಪೂಜೆ ನೆರವೇರಿದ. ದೊಡ್ಮನೆ ಆಟಕ್ಕೆ ಯಾವುದೇ ವಿಘ್ನ ಬರದೆ ಇರಲಿ ಎಂಬ ಕಾರಣಕ್ಕೆ ಈ ಪೂಜೆ ಮಾಡಿಸಲಾಗಿದೆ.

ಪ್ರತಿ ವರ್ಷ ಬಿಗ್ ಬಾಸ್ ಆರಂಭಕ್ಕೂ ಕೆಲವೇ ದಿನ ಮೊದಲು ಸುದ್ದಿಗೋಷ್ಠಿ ನಡೆಸಲಾಗುತ್ತದೆ. ಈ ಮೂಲಕ ಶೋ ಬಗ್ಗೆ, ಶೋ ಪ್ರಸಾರದ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಮೊದಲೇ ಶೋ ಬಗ್ಗೆ ಹಬ್ಬಿದ ವದಂತಿ ಬಗ್ಗೆ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು. ಅದರಲ್ಲಿ ಸುದೀಪ್ ಕೂಡ ಇದ್ದರು. ಹೀಗಾಗಿ, ಈಗ ಯಾವುದೇ ಹೊಸ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗುತ್ತಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ ಯಾವಾಗಲೂ ಸರಳ ಉಡುಗೆ ಧರಿಸುತ್ತಿದ್ದಿದ್ದೇಕೆ?
Image
ಸಾಯಿ ಪಲ್ಲವಿ ಪಡಿಯಚ್ಚು ಪೂಜಾ ಕಣ್ಣನ್;  ಕನ್​ಫ್ಯೂಸ್ ಆಗೋದು ಗ್ಯಾರಂಟಿ
Image
‘ಓಜಿ’ ಟ್ರೇಲರ್ ಈವೆಂಟ್​ನಲ್ಲಿ ಮಳೆಯಲ್ಲಿ ನೆನೆದು ಹಾಸಿಗೆ ಹಿಡಿದ ಪವನ್
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

ಇದನ್ನೂ ಓದಿ: ಬಿಗ್ ಬಾಸ್ 50 ಲಕ್ಷ ರೂ. ಬಹುಮಾನದಲ್ಲಿ ಕಾರ್ತಿಕ್ ಮಹೇಶ್ ಕೈಸೇರಿದ್ದು ಎಷ್ಟು?

ಜಿಯೋ ಹಾಟ್​ ಸ್ಟಾರ್​​ನಲ್ಲಿ ‘ಬಿಗ್ ಬಾಸ್’ ಹೊಸ ಸೀಸನ್​ನ 24 ಗಂಟೆ ಲೈವ್ ಇಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಈ ಮೂಲಕ ರಾತ್ರಿ 9.30ಕ್ಕೆ ಎಪಿಸೋಡ್​ಗೂ ಮೊದಲೇ ಕೆಲವು ವಿಚಾರಗಳನ್ನು ಲೈವ್ ಮೂಲಕ ತಿಳಿದುಕೊಳ್ಳಬಹುದಾಗಿದೆ. ಈ ಬಾರಿ ಬಿಗ್ ಬಾಸ್​ಗೆ ಯಾರೆಲ್ಲ ಬರುತ್ತಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸಿನಿಮಾ, ಧಾರಾವಾಹಿ ಹಾಗೂ ಯೂಟ್ಯೂಬರ್​ಗಳು ಶೋನ ಭಾಗ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು