ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹಾರರ್​ ಧಾರಾವಾಹಿ ‘ನೂರು ಜನ್ಮಕು’

‘ಗೀತಾ’ ಧಾರಾವಾಹಿ ಬಳಿಕ ಧನುಷ್ ಗೌಡ ಅವರು ವಿವಾಹ ಆದರು. ಒಂದು ಬ್ರೇಕ್ ಪಡೆದ ಅವರು ಈಗ ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಕಲರ್ಸ್ ಕನ್ನಡದ ‘ನೂರು ಜನ್ಮಕು’ ಧಾರಾವಾಹಿಯಲ್ಲಿ ಹೀರೋ ಆಗಿ ಅವರು ನಟಿಸುತ್ತಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹಾರರ್​ ಧಾರಾವಾಹಿ ‘ನೂರು ಜನ್ಮಕು’
ನೂರು ಜನ್ಮಕು
Follow us
|

Updated on: Oct 23, 2024 | 2:52 PM

ಇತ್ತೀಚೆಗೆ ಧಾರಾವಾಹಿಗಳ ಮಧ್ಯೆ ಸಾಕಷ್ಟು ಕಾಂಪಿಟೇಷನ್ ನಡೆಯುತ್ತಿದೆ. ಬಹುತೇಕ ಧಾರಾವಾಹಿಗಳಲ್ಲಿ ಅತ್ತೆ-ಸೊಸೆಯ ಕಥೆಗಳೇ ಇವೆ. ಹೀರೋ ಶ್ರೀಮಂತ ಆದರೆ, ಹೀರೋಯಿನ್ ಬಡವೆ. ಇಬ್ಬರ ಮಧ್ಯೆ ಪ್ರೀತಿ ಮೂಡುತ್ತದೆ. ಇದಕ್ಕೊಬ್ಬ ವಿಲನ್. ಹೀಗಿರುವಾಗ ಈಗ ಹಾರರ್ ಧಾರಾವಾಹಿಯನ್ನು ವೀಕ್ಷಕರ ಮುಂದೆ ತರಲು ಕಲರ್ಸ್ ಕನ್ನಡ ಮುಂದಾಗಿದೆ. ಈ ಧಾರಾವಾಹಿಗೆ ‘ನೂರು ಜನ್ಮಕು’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಧಾರಾವಾಹಿಯಲ್ಲಿ ‘ಗೀತಾ’ ಖ್ಯಾತಿಯ ಧನುಷ್ ಗೌಡ ಅವರು ನಟಿಸುತ್ತಿದ್ದಾರೆ.

‘ಗೀತಾ’ ಧಾರಾವಾಹಿ ಬಳಿಕ ಧನುಷ್ ಗೌಡ ಅವರು ವಿವಾಹ ಆದರು. ಒಂದು ಬ್ರೇಕ್ ಪಡೆದ ಅವರು ಈಗ ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಕಲರ್ಸ್ ಕನ್ನಡದ ‘ನೂರು ಜನ್ಮಕು’ ಧಾರಾವಾಹಿಯಲ್ಲಿ ಹೀರೋ ಆಗಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಪಕ್ಕಾ ಹಾರರ್​ ಶೈಲಿಯ ಕಥೆ ಎಂಬುದು ಟೀಸರ್ ನೋಡಿದವರಿಗೆ ಅನಿಸುತ್ತಿದೆ.

‘ಪ್ರೀತ್ಸೋ ಜೀವಗಳ ಜೊತೆ ಇಡೀ ಪ್ರಪಂಚಾನೇ ನಿಂತಿದ್ರೆ, ಅದೇ ಪ್ರೀತಿನಾ ದ್ವಂಸ ಮಾಡೋಕೆ ಒಂದು ಆತ್ಮ ಕಾಯ್ತಿದೆ’ ಎಂಬ ಧ್ವನಿ ಪ್ರೋಮೋದಲ್ಲಿ ಬರುತ್ತದೆ. ಪ್ರೋಮೋದಲ್ಲಿ ದೆವ್ವವನ್ನು ಕೂಡ ತೋರಿಸಲಾಗಿದೆ. ಹೀಗಾಗಿ ಇದು ಆತ್ಮಕ್ಕೆ ಸಂಬಂಧಿಸಿದ ಕಥೆ ಎಂಬುದು ಪಕ್ಕಾ ಆಗಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಸದ್ಯ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಸೀಸನ್ ಪೂರ್ಣಗೊಳ್ಳಲು ಇನ್ನೂ ಮೂರು ತಿಂಗಳು ಬೇಕು. ಈ ಸೀಸನ್ ಪೂರ್ಣಗೊಂಡ ಬಳಿಕ ಧಾರಾವಾಹಿ ಪ್ರಸಾರ ಕಾಣುತ್ತದೆಯೇ ಅಥವಾ ಅದಕ್ಕೂ ಮೊದಲೇ ‘ನೂರು ಜನ್ಮಕು’ ಧಾರಾವಾಹಿ ಪ್ರಸಾರ ಕಾಣುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:  ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

ಧನುಷ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ‘ಗೀತಾ’ ಧಾರಾವಾಹಿ. ಈ ಧಾರಾವಾಹಿಯ ಮೊದಲ ಎಪಿಸೋಡ್ ಪ್ರಸಾರ ಕಂಡಿದ್ದು 2020ರ ಜನವರಿ 6ರಂದು. ಧನುಷ್ ಗೌಡ ಹಾಗೂ ಭವ್ಯಾ ಗೌಡ ನಟಿಸಿದ್ದರು. ಈ ಧಾರಾವಾಹಿ 1107 ಎಪಿಸೋಡ್​ಗಳು ಪ್ರಸಾರ ಕಂಡಿವೆ. ಈ ವರ್ಷ ಮಾರ್ಚ್​ 9ರಂದು ಧಾರಾವಾಹಿ ಪೂರ್ಣಗೊಂಡಿದೆ. ಈ ಧಾರಾವಾಹಿಯ ನಟಿ ಭವ್ಯಾ ಗೌಡ ಅವರು ಸದ್ಯ ಬಿಗ್ ಬಾಸ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್