AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’

ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಎಲ್ಲರನ್ನೂ ಅಳೆದು ತೂಗಿದ್ದರು. ಯಾರು ಯಾವ ತಪ್ಪನ್ನು ಮಾಡುತ್ತಿದ್ದಾರೆ ಮತ್ತು ಅದರಿಂದ ಆಗುವ ಪರಿಣಾಮಗಳೇನು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿದ್ದರು.

‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’
‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’
TV9 Web
| Edited By: |

Updated on: Aug 01, 2021 | 3:25 PM

Share

ಕನ್ನಡ ಬಿಗ್​ ಬಾಸ್ ಸೀಸನ್​ 8 ವಿಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎನ್ನುವ ಕುತೂಹಲ ವೀಕ್ಷಕರಲ್ಲಿ ಮನೆ ಮಾಡಿದೆ. ಇದಕ್ಕೆ ಉತ್ತರ ಸಿಗಬೇಕು ಎಂದರೆ ಇನ್ನೂ ಒಂದು ವಾರ ಕಾಯೋದು ಅನಿವಾರ್ಯ. ಆದರೆ, ಅನೇಕರು ಸೀಸನ್​ 8 ಕಿರೀಟವನ್ನು ಯಾರು ಧರಿಸಬಹುದು ಎನ್ನುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ವಾರದ ಆರಂಭದಲ್ಲಿ ಎಲಿಮಿನೇಟ್​ ಆದ ಚಕ್ರವರ್ತಿ ಕೂಡ ತಮ್ಮ ಲೆಕ್ಕಾಚಾರವನ್ನು ಹೇಳಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಎಲ್ಲರನ್ನೂ ಅಳೆದು ತೂಗಿದ್ದರು. ಯಾರು ಯಾವ ತಪ್ಪನ್ನು ಮಾಡುತ್ತಿದ್ದಾರೆ ಮತ್ತು ಅದರಿಂದ ಆಗುವ ಪರಿಣಾಮಗಳೇನು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿದ್ದರು. ಆದರೆ, ಅವರು ಮಾಡಿದ ಒಂದು ತಪ್ಪಿನಿಂದ ಬಿಗ್​ ಬಾಸ್​ನಲ್ಲಿ ಕಡಿಮೆ ವೋಟ್​ ಪಡೆದು ಹೊರ ಬರುವಂತಾಯಿತು.

ಬಿಗ್​ ಬಾಸ್​ ಮನೆಯಲ್ಲಿ ವೀಕೆಂಡ್​ನಲ್ಲಿ ಎಲಿಮಿನೇಷನ್​ ನಡೆಯುತ್ತದೆ. ಆದರೆ, ಈ ಬಾರಿ ಮಿಡ್​ವೀಕ್​ ಎಲಿಮಿನೇಷನ್​ ನಡೆದಿತ್ತು. ಈ ಕಾರಣಕ್ಕೆ ಸುದೀಪ್​ ಅವರನ್ನು ಬಿಗ್​ ಬಾಸ್​ ವೇದಿಕೆ ಮೇಲೆ ಮೀಟ್​ ಮಾಡೋಕೆ ಚಕ್ರವರ್ತಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಶನಿವಾರ (ಜುಲೈ 31) ಚಕ್ರವರ್ತಿ ಬಿಗ್​ ಬಾಸ್​ ವೇದಿಕೆ ಏರಿದ್ದರು. ಈ ವೇಳೆ ಅವರಿಗೆ ಕೆಲ ಪ್ರಶ್ನೆಗಳನ್ನು ಕೇಳಲಾಯಿತು.

ಬಿಗ್​ ಬಾಸ್ ಗೆಲ್ಲೋಕೆ ಸಾಧ್ಯವಿಲ್ಲ ಎನ್ನುವ ಸ್ಪರ್ಧಿ ಯಾರು ಎಂದು ಸುದೀಪ್​ ಕೇಳಿದರು. ಇದಕ್ಕೆ ದಿವ್ಯಾ ಸುರೇಶ್​-ಪ್ರಶಾಂತ್​ ಸಂಬರಗಿ ಹೆಸರನ್ನು ಎತ್ತಿಕೊಂಡರು ಚಕ್ರವರ್ತಿ. ‘ಪ್ರಶಾಂತ್​ ಮೊದಲ ಇನ್ನಿಂಗ್ಸ್​ನಂತೆ ಇಲ್ಲ. ಅವರು ಒಂದು ವರ್ಗದ ಜನತೆಗೆ ಮಾತ್ರ ಇಷ್ಟವಾಗುತ್ತಿದಾರೆ. ದಿವ್ಯಾ ಸುರೇಶ್​ ಅಮಾಯಕಿ. ಅವಳಲ್ಲಿ ಬದಲಾವಣೆ ಬಂದಿದೆ. ಆದರೆ, ತುಂಬ ತಡವಾಗಿದೆ’ ಎಂದರು ಅವರು.

ಬಿಗ್​ ಬಾಸ್​ ಯಾರು ಗೆಲ್ಲಬಹುದು ಎಂದು ನಿಮಗನ್ನಿಸುತ್ತದೆ ಎಂದು ಸುದೀಪ್​ ಕೇಳಿದರು. ‘ನಾನು ಮೊದಲ ಇನ್ನಿಂಗ್ಸ್​​ನಿಂದ ಹೊರ ಬಂದಾಗ ಅರವಿಂದ್ ಗೆಲ್ತಾರೆ ಅಂದುಕೊಂಡಿದ್ದೆ. ಆದರೆ, ಈ ಇನ್ನಿಂಗ್ಸ್​ನಲ್ಲಿ ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ. ನನ್ನ ಪ್ರಕಾರ ಮಂಜು ಗೆಲ್ತಾರೆ’ ಎಂದರು ಚಕ್ರವರ್ತಿ.

ಇದನ್ನೂ ಓದಿ: ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್​ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್​

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?