AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್ ಮನೆಗೆ ಬರಲ್ಲ ಓಂ ಪ್ರಕಾಶ್ ರಾವ್; ಕಠಿಣ ನಿರ್ಧಾರ ಮಾಡಿದ ನಿರ್ದೇಶಕ

ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಲೈಟ್ ಜರ್ನಿ ಟಾಸ್ಕ್‌ನ ಒತ್ತಡ ತಾಳಲಾರದೆ ಅಸ್ವಸ್ಥಗೊಂಡಿರುವ ಅವರು, ತಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೊಡ್ಮನೆಗೆ ಮತ್ತೆ ಮರಳದಿರುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮತ್ತೆ ಬಿಗ್ ಬಾಸ್ ಮನೆಗೆ ಬರಲ್ಲ ಓಂ ಪ್ರಕಾಶ್ ರಾವ್; ಕಠಿಣ ನಿರ್ಧಾರ ಮಾಡಿದ ನಿರ್ದೇಶಕ
ಓಂ ಪ್ರಕಾಶ್ ರಾವ್ Image Credit source: Colors Kannada
ರಾಜೇಶ್ ದುಗ್ಗುಮನೆ
|

Updated on:Sep 14, 2026 | 10:43 PM

Share

ಮುಖ್ಯಾಂಶಗಳು

  • ಒತ್ತಡದ ಟಾಸ್ಕ್‌ನಿಂದಾಗಿ ಅಸ್ವಸ್ಥಗೊಂಡ ಹಿರಿಯ ನಿರ್ದೇಶಕ
  • ಬಿಗ್ ಬಾಸ್‌ಗೆ ಮತ್ತೆ ಮರಳದಿರಲು ಓಂ ಪ್ರಕಾಶ್ ರಾವ್ ನಿರ್ಧಾರ
  • ದೊಡ್ಮನೆಯಲ್ಲಿ ಹಿರಿಯ ಮಾರ್ಗದರ್ಶಕನ ನಿರ್ಗಮನಕ್ಕೆ ವೀಕ್ಷಕರು ಬೇಸರ

ಓಂ ಪ್ರಕಾಶ್ ರಾವ್ ಅವರಿಗೆ ಎರಡನೇ ಬಾರಿಗೆ ಬಿಗ್ ಬಾಸ್​ ಮನೆಗೆ ಹೋಗುವ ಅವಕಾಶ ಸಿಕ್ಕಿತ್ತು. ಆದರೆ, ಅವರು ಅನಾರೋಗ್ಯದ ಕಾರಣದಿಂದ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಇಂದಿನ (ಸೆಪ್ಟೆಂಬರ್ 14) ಎಪಿಸೋಡ್​​ನಲ್ಲಿ ಅವರು ಮುಂಜಾನೆ ಮಾತ್ರ ಕಾಣಿಸಿಕೊಂಡಿದ್ದರು. ಆ ಬಳಿಕ ಅವರು ದೊಡ್ಮನೆಯಲ್ಲಿ ಎಲ್ಲಿಯೂ ಕಾಣಿಸಿಲ್ಲ. ಅವರು ಬಿಗ್ ಬಾಸ್ ಮನೆಗೆ ಮರಳದಿರುವ ಕಠಿಣ ನಿರ್ಧಾರ ಮಾಡಿದ್ದಾರೆ.

ಓಂ ಪ್ರಕಾಶ್ ರಾವ್​ ಅವರಿಗೆ ಸಾಕಷ್ಟು ವಯಸ್ಸಾಗಿದೆ. ಅವರಿಗೆ ಸಾಕಷ್ಟು ಅನಾರೋಗ್ಯ ಕಾಡುತ್ತಿದೆ. ಇದರ ನಡುವೆಯೂ ಅವರು ಕಳೆದ ಒಂದು ವಾರದಿಂದ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಆದರೆ, ಒಂದು ತೊಂದರೆ ಅವರನ್ನು ಬಲವಾಗಿ ಕಾಡಿತ್ತು.ಅದುವೇ ಫ್ಲೈಟ್ ಜರ್ನಿ.

ಅರ್ಧ ಜನ ಬಿಗ್ ಬಾಸ್ ಮನೆ ಒಳಗೆ, ಇನ್ನರ್ಧ ಜನ ಬಿಗ್ ಬಾಸ್ ಮನೆಯ ಗಾರ್ಡನ್ ಏರಿಯಾದಲ್ಲಿ ಹಾಕಿದ ಫ್ಲೈಟ್​​ನಲ್ಲಿ ಇದ್ದರು. ಅಲ್ಲಿದ್ದವರಿಗೆ ಸಾಕಷ್ಟು ಒತ್ತಡದ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಪರಿಸ್ಥಿತಿಯನ್ನು ಎದುರಿಸಲು ಓಂ ಪ್ರಕಾಶ್ ರಾವ್ ಅವರಿಗೆ ಸಾಧ್ಯವಾಗಲೇ ಇಲ್ಲ. ಇದರಿಂದ ಅವರು ಹೊರ ಬರಬೇಕಾದ ಪರಿಸ್ಥಿತಿ ಇದೆ.

ಈ ಮೊದಲು ಕೂಡ ಅನಾರೋಗ್ಯದಿಂದ ಅನೇಕರು ಬಿಗ್ ಬಾಸ್ ಮನೆಯಿಂದ ಹೊರ ಹೋದ ಉದಾಹರಣೆ ಇದೆ. ಆದರೆ, ಅವರು ಬಿಗ್ ಬಾಸ್​​ ಮೇಲ್ವಿಚಾರಣೆಯಲ್ಲೇ ಅವರು ಟ್ರೀಟ್​ಮೆಂಟ್ ತೆಗೆದುಕೊಂಡು ದೊಡ್ಮನೆಗೆ ಮರಳುತ್ತಿದ್ದರು. ಆದರೆ, ಓಂ ಪ್ರಕಾಶ್ ರಾವ್ ಅವರು ಬಿಗ್ ಬಾಸ್ ಮನೆಗೆ ಮರಳುವ ಆಲೋಚನೆಯಲ್ಲಿ ಇಲ್ಲ. ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅವರು ಮರಳುತ್ತಿಲ್ಲ.

ಇದನ್ನೂ ಓದಿ: ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು

ಓಂ ಪ್ರಕಾಶ್ ರಾವ್ ಈ ಬಾರಿ ಹೆಚ್ಚು ಕಾಣಿಸಿಕೊಂಡಿಲ್ಲ. ಅವರು ಕಿರಿಯ ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಿದ್ದರು. ಈಗ ದೊಡ್ಮನೆಯಲ್ಲಿ ಅವರಿಲ್ಲದಿರುವುದು ಮನೆಯವರಿಗೆ ಹಾಗೂ ವೀಕ್ಷಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:42 pm, Mon, 14 September 26

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ