AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು

ಬಿಗ್ ಬಾಸ್ ಮನೆಯಿಂದ ಹೊರಬಂದ ಬೆನ್ನಲ್ಲೇ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ತೀವ್ರ ಒತ್ತಡದಿಂದಾಗಿ ಅನಾರೋಗ್ಯಕ್ಕೀಡಾಗಿರುವ ಅವರನ್ನು ಆರಾಧ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ವೈದ್ಯರ ಪರಿಶೀಲನೆ ನಂತರ ಹೆಚ್ಚಿನ ಚಿಕಿತ್ಸೆಗೆ ರೆಗ್ಯೂಲರ್ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆಯಿದೆ.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು
ಓಂ ಪ್ರಕಾಶ್ ರಾವ್
ಮಾಲತೇಶ ಜಗ್ಗೀನ್
| Edited By: |

Updated on:Sep 14, 2026 | 8:22 PM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಿಂದ ಬಂದ ಬೆನ್ನಲ್ಲೇ ಅಸ್ವಸ್ಥರಾದ ನಿರ್ದೇಶಕ
  • ತೀವ್ರ ಒತ್ತಡವೇ ಆರೋಗ್ಯ ಏರುಪೇರಿಗೆ ಕಾರಣವೇ?
  • ಆರಾಧ್ಯ ಆಸ್ಪತ್ರೆಗೆ ದಾಖಲು: ರೆಗ್ಯೂಲರ್ ಆಸ್ಪತ್ರೆಗೆ ಸ್ಥಳಾಂತರ ಸಾಧ್ಯತೆ

ಖ್ಯಾತ ನಿರ್ದೇಶಕ ಹಾಗೂ ಬಿಗ್ ಬಾಸ್ ಸ್ಪರ್ಧಿ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ತೀವ್ರ ಮಾನಸಿಕ ಒತ್ತಡದ ಕಾರಣದಿಂದಾಗಿ ಅವರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ಬಂದಿರುವ ಅವರು ಈಗ ಅವರು ದೊಡ್ಮನೆಗೆ ಮರಳುತ್ತಾರಾ ಎಂಬುದು ಸದ್ಯದ ಪ್ರಶ್ನೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಓಂ ಪ್ರಕಾಶ್ ರಾವ್ ಸ್ಪರ್ಧಿ ಆಗಿದ್ದರು. ದೊಡ್ಮನೆಯಿಂದ ಮರಳಿದ ಓಂ ಪ್ರಕಾಶ್ ರಾವ್ ಸದ್ಯ ಕಾಡುಮನೆ ಎಸ್ಟೇಟ್ ಬಳಿ ಇರುವ ಆರಾಧ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಬಿಗ್ ಬಾಸ್ ಮನೆಯಲ್ಲಿ ಕುಟುಂತ್ತಾ ಓಡಾಡುತ್ತಿದ್ದರು. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟೂ ದಿನ ವಿಮಾನದಲ್ಲೇ ಸಮಯ ಕಳೆಯುವ ಪರಿಸ್ಥಿತಿ ಬಂದಿತ್ತು.

ಆರೋಗ್ಯ ವ್ಯತ್ಯಾಸವಾಗುತ್ತಿದ್ದಂತೆ ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಸ್ತುತ ಒಂದು ಗಂಟೆಯ ಹಿಂದೆಯಷ್ಟೇ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಅವರ ಕುಟುಂಬದ ವೈದ್ಯರು ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲಿಸುವ ಸಾಧ್ಯತೆ ಇದೆ. ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ತಪಾಸಣೆಗಾಗಿ ಓಂ ಪ್ರಕಾಶ್ ರಾವ್ ಅವರನ್ನು ಅವರ ರೆಗ್ಯೂಲರ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಏರಡನೇ ಬಾರಿ ಬಿಗ್​​ಬಾಸ್​​ಗೆ ಎಂಟ್ರಿ ಕೊಟ್ಟ ನಿರ್ದೇಶಕ ಓಂ ಪ್ರಕಾಶ್ ರಾವ್

ಬಿಗ್ ಬಾಸ್ ಮನೆಯ ಒಳಗಿನ ಕಠಿಣ ವಾತಾವರಣ ಹಾಗೂ ಅಲ್ಲಿನ ಆಟದ ಒತ್ತಡವೇ ಅವರ ಈ ಸ್ಥಿತಿಗೆ ಕಾರಣವಿರಬಹುದು ಎಂದು ಊಹಿಸಲಾಗಿದೆ. ಓಂ ಪ್ರಕಾಶ್ ರಾವ್ ಅವರು ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಪ್ರಾರ್ಥಿಸುತ್ತಿದ್ದಾರೆ. ವೈದ್ಯರ ಅಧಿಕೃತ ಹೇಳಿಕೆಗಾಗಿ ಕಾಯಲಾಗುತ್ತಿದೆ. ಈ ಮೊದಲು ಬಿಗ್ ಬಾಸ್​ ಮನೆಗೆ ಹೋದಾಗ ಅವರು ಅನಾರೋಗ್ಯದ ಕಾರಣದಿಂದಲೇ ಹೊರ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:15 pm, Mon, 14 September 26

Follow Us
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ