AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾಷ್ಟಮಿ ಪ್ರಯುಕ್ತ ಮಹಾ ಸಂಚಿಕೆಗಳೊಂದಿಗೆ ಬಂದ ಜೀ ಕನ್ನಡ ವಾಹಿನಿ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜೀ ಕನ್ನಡ ವಾಹಿನಿ ಧಾರಾವಾಹಿಗಳ ಮಹಾ ಸಂಚಿಕೆ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಈ ವಿಚಾರ ವೀಕ್ಷಕರ ಖುಷಿಗೆ ಕಾರಣ ಆಗಿದೆ. ಯಾವ ಯಾವ ಧಾರಾವಾಹಿಗಳ ಮಹಾ ಸಂಚಿಕೆ ಪ್ರಸಾರ ಕಾಣಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಕೃಷ್ಣಾಷ್ಟಮಿ ಪ್ರಯುಕ್ತ ಮಹಾ ಸಂಚಿಕೆಗಳೊಂದಿಗೆ ಬಂದ ಜೀ ಕನ್ನಡ ವಾಹಿನಿ
ಕೃಷ್ಣಾಷ್ಟಮಿ ಪ್ರಯುಕ್ತ ಮಹಾ ಸಂಚಿಕೆಗಳೊಂದಿಗೆ ಬಂದ ಜೀ ಕನ್ನಡ ವಾಹಿನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 05, 2023 | 11:08 AM

Share

ಕಿರುತೆರೆ ಲೋಕದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಈ ಮೊದಲು ಮಾಡಲಾದ ಪ್ರಯೋಗಗಳು ಯಶಸ್ವಿ ಆದರೆ ಅದನ್ನು ಪಾಲಿಸಿಕೊಂಡು ಹೋಗಲಾಗುತ್ತದೆ. ಆ ಪೈಕಿ ‘ಮಹಾ ಸಂಚಿಕೆ’ ಪ್ರಯೋಗವೂ ಒಂದು. ಹಬ್ಬದ ಸಂದರ್ಭದಲ್ಲಿ ಮಹಾ ಸಂಚಿಕೆ, ಅಂದರೆ ಒಂದು ಗಂಟೆಗಳ ಕಾಲ ಧಾರಾವಾಹಿ ಪ್ರಸಾರ ಮಾಡಲಾಗುತ್ತದೆ. ಈಗ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜೀ ಕನ್ನಡ (Zee Kannada) ವಾಹಿನಿ ಧಾರಾವಾಹಿಗಳ ಮಹಾ ಸಂಚಿಕೆ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಈ ವಿಚಾರ ವೀಕ್ಷಕರ ಖುಷಿಗೆ ಕಾರಣ ಆಗಿದೆ.

ಸೆಪ್ಟೆಂಬರ್ 7 ಕೃಷ್ಣ ಜನ್ಮಾಷ್ಟಮಿ ಇದೆ. ಇದು ಹಿಂದೂಗಳ ಪಾಲಿಗೆ ವಿಶೇಷ ಹಬ್ಬ. ಈ ಕಾರಣದಿಂದ ಜೀ ಕನ್ನಡ ವಾಹಿನಿ ವೀಕ್ಷಕರಿಗೆ ವಿಶೇಷ ಉಡುಗೊರೆ ನೀಡುತ್ತಿದೆ. ಸೋಮವಾರದಿಂದ (ಸೆಪ್ಟೆಂಬರ್ 4) ಶುಕ್ರವಾರದವರೆಗೆ (ಸೆಪ್ಟೆಂಬರ್ 8) ಕೆಲವು ಧಾರಾವಾಹಿಗಳ ಮಹಾ ಸಂಚಿಕೆ ಪ್ರಸಾರ ಕಾಣಲಿದೆ. ಈ ಕುರಿತು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ.

ಸೋಮವಾರ

ಸೆಪ್ಟೆಂಬರ್ 4ರಂದು ‘ಅಮೃತಧಾರೆ’ ಧಾರಾವಾಹಿಯ ಮಹಾ ಸಂಚಿಕೆ ಪ್ರಸಾರ ಕಂಡಿದೆ. ಈಗಾಗಲೇ ಮಹಿಮಾ ಹಾಗೂ ಜೀವಾ ಮದುವೆ ನೆರವೇರಿದೆ. ಈಗ ಭೂಮಿಕಾ ಹಾಗೂ ಗೌತಮ ಮದುವೆ ನಡೆಯುತ್ತಿದೆ. ಈ ವಿಶೇಷ ಸಂದರ್ಭದಲ್ಲೇ ಮಹಾ ಸಂಚಿಕೆ ಪ್ರಸಾರ ಕಂಡಿರೋದು ಅಭಿಮಾನಿಗಳಿಗೆ ಖುಷಿ ನೀಡಿದೆ. ಸಂಜೆ 6:30-7:30ರವರೆಗೆ ಮಹಾ ಸಂಚಿಕೆ ಪ್ರಸಾರಗೊಂಡಿದೆ.

ಮಂಗಳವಾರ

ಇಂದು (ಸೆಪ್ಟೆಂಬರ್ 5) ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಮಹಾ ಸಂಚಿಕೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಒಂದೇ ದಿನ ಎರಡು ಎಪಿಸೋಡ್​ಗಳನ್ನು ವೀಕ್ಷಕರು ಕಣ್ತುಂಬಿಕೊಳ್ಳಬಹುದು. ಪ್ರಸಾರ ಸಮಯ: 7:30ರಿಂದ 8:30.

View this post on Instagram

A post shared by Zee Kannada (@zeekannada)

ಬುಧವಾರ

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿ ದಿನ ಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಈ ಧಾರಾವಾಹಿಯ ಮಹಾ ಸಂಚಿಕೆ ಬುಧವಾರ (ಸೆಪ್ಟೆಂಬರ್ 6) ಪ್ರಸಾರ ಕಾಣುತ್ತಿದೆ ಅನ್ನೋದು ವಿಶೇಷ. ಪ್ರಸಾರ ಸಮಯ 8:30ರಿಂದ 9:30.

ಇದನ್ನೂ ಓದಿ: ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿ (ನಗರ ಭಾಗ) ಇದೆ. ಈ ಧಾರಾವಾಹಿಯಲ್ಲಿ ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಅಶೋಕ್ ಮೊದಲಾದವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಬಗ್ಗೆ ದಿನ ಕಳೆದಂತೆ ಕುತೂಹಲ ಹೆಚ್ಚುತ್ತಿದೆ. ಕೃಷ್ಣಾಷ್ಟಮಿ ದಿನ ಈ ಧಾರಾವಾಹಿಯ ಮಹಾ ಸಂಚಿಕೆ ಪ್ರಸಾರ ಕಾಣಲಿದೆ. ಪ್ರಸಾರ ಸಮಯ 9:30ರಿಂದ 10:30.

ಭೂಮಿಗೆ ಬಂದ ಭಗವಂತ

‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಸಾಕಷ್ಟು ಮೆಚ್ಚುಗೆ ಪಡೆದಿದೆ. ಮಧ್ಯಮ ವರ್ಗದ ಜನರ ಜಂಜಾಟದ ಕಥೆಯನ್ನು ಈ ಧಾರಾವಾಹಿಯಲ್ಲಿ ಹೇಳಲಾಗುತ್ತಿದೆ. ನವೀನ್​ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್ ಮೊದಲಾದವರು ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ಧಾರಾವಾಹಿಯ ಮಹಾ ಸಂಚಿಕೆ ಶುಕ್ರವಾರ ಪ್ರಸಾರ ಕಾಣಲಿದೆ. ಪ್ರಸಾರ ಸಮಯ 10:30ರಿಂದ 11:30.

ಎರಡು ಧಾರಾವಾಹಿಗಿಲ್ಲ ಮಹಾ ಸಂಚಿಕೆ

ಟಿಆರ್​ಪಿ ರೇಸ್​ನಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಹಾಗೂ ‘ಸತ್ಯ’ ಧಾರಾವಾಹಿ ಇದೆ. ಆದರೆ, ಇವುಗಳಿಗೆ ಮಹಾ ಸಂಚಿಕೆ ಇಲ್ಲ. ಇದು ಈ ಧಾರಾವಾಹಿ ವೀಕ್ಷಕರ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ