AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರವೂ ಬಿಗ್ ಬಾಸ್ ಮನೆಯಲ್ಲಿ ಇಲ್ಲ ಎಲಿಮಿನೇಷನ್; ಮುಂದಿನ ವಾರ ಟ್ವಿಸ್ಟ್ ಪಕ್ಕಾ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಎಲಿಮಿನೇಷನ್ ಇಲ್ಲದ ವಾರಗಳ ಸಂಖ್ಯೆ ಹೆಚ್ಚಾಗಿದೆ. ಹಬ್ಬಗಳು, ಹೊಡೆದಾಟ ಮುಂತಾದ ಕಾರಣಗಳಿಂದ ಎಲಿಮಿನೇಷನ್ ನಡೆದಿಲ್ಲ. ಈ ವಾರ ಫ್ಯಾಮಿಲಿ ವೀಕ್ ಆಗಿದ್ದು, ಯಾವುದೇ ನಾಮಿನೇಷನ್ ನಡೆದಿಲ್ಲ. ಈ ಬಾರಿಯ ಬಿಗ್ ಬಾಸ್ ನಿರ್ವಹಣೆ ವಿವಾದಕ್ಕೆ ಒಳಗಾಗಿದೆ.

ಈ ವಾರವೂ ಬಿಗ್ ಬಾಸ್ ಮನೆಯಲ್ಲಿ ಇಲ್ಲ ಎಲಿಮಿನೇಷನ್; ಮುಂದಿನ ವಾರ ಟ್ವಿಸ್ಟ್ ಪಕ್ಕಾ
ಬಿಗ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jan 03, 2025 | 1:02 PM

ಈ ಬಾರಿಯ ಬಿಗ್ ಬಾಸ್​ನಲ್ಲಿ ಎಲಿಮಿನೇಷನ್ ಇಲ್ಲದೆ ನಡೆದ ವಾರಗಳ ಪಟ್ಟಿ ದೊಡ್ಡದಿದೆ. ಒಂದು ವಾರ ಹೊಡೆದಾಡಿಕೊಂಡು ಇಬ್ಬರು ಎಲಿಮಿನೇಷನ್ ಆದರು ಎಂಬ ಕಾರಣಕ್ಕೆ, ಮತ್ತೊಂದು ವಾರ ಹಬ್ಬದ ಕಾರಣಕ್ಕೆ, ಮತ್ತೊಂದು ವಾರ ಯಾವುದೇ ಕಾರಣ ಇಲ್ಲದೆ ಹೀಗೆ ಅನೇಕ ಬಾರಿ ‘ನೋ ಎಲಿಮಿನೇಷನ್ ವೀಕ್’ ಆಗಿದೆ. ಅದಕ್ಕೆ ಈ ವಾರ ಹೊಸ ಸೇರ್ಪಡೆ. ಹೀಗಾಗಿ, ಮುಂದಿನ ವಾರ ಡಬಲ್ ಎಲಿಮಿನೇಷನ್ ನಡೆಯಬಹುದು ಎಂದು ಊಹಿಸಲಾಗುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಒಳ್ಳೆಯ ಟಿಆರ್​ಪಿ ಪಡೆಯುತ್ತಿದೆ ನಿಜ. ಅದರ ಜೊತೆಗೆ ಡ್ರಾಮಾಗಳ ಸಂಖ್ಯೆಯೂ ಅಧಿಕವಾಗಿದೆ. ಸುಖಾಸುಮ್ಮನೆ ಎಲಿಮಿನೇಷನ್ ಮಾಡದೆ ಇರುವ ಕೆಲಸ ಆಗುತ್ತಿದೆ. ಈಗ ಈ ವಾರ ಫ್ಯಾಮಿಲಿ ವೀಕ್ ಆಗಿದ್ದು, ಯಾವುದೇ ನಾಮಿನೇಷನ್ ಪ್ರಕ್ರಿಯೆ ನಡೆದಿಲ್ಲ.

ಸದ್ಯ 9 ಮಂದಿ ಬಿಗ್ ಬಾಸ್​ನಲ್ಲಿ ಇದ್ದು, ಜನವರಿ ಅಂತ್ಯಕ್ಕೆ ಫಿನಾಲೆ ನಡೆಯುವ ಸಾಧ್ಯತೆ ಇದೆ. ದೊಡ್ಮನೆಯಲ್ಲಿ ಈಗ ಉಳಿದುಕೊಂಡಿರೋದು 9 ಮಂದಿ. ಹೀಗಾಗಿ, ಮುಂದಿನ ವಾರ ಡಬಲ್ ಎಲಿಮಿನೇಷನ್ ನಡೆಯುವ ಸಾಧ್ಯತೆ ದಟ್ಟವಾಗಿದೆ. ಆ ವಾರ ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಈಗ ಕ್ಯಾಪ್ಟನ್ ಆಗುವುದು ತುಂಬಾನೇ ಮುಖ್ಯವಾಗುತ್ತದೆ. ಈ ವಾರ ಕ್ಯಾಪ್ಟನ್ ಆದರೆ ಮುಂದಿನ ವಾರಕ್ಕೆ ಇಮ್ಯೂನಿಟಿ ಸಿಗಲಿದೆ. ಈ ವಾರವಂತೂ ಯಾವುದೇ ಎಲಿಮಿನೇಷನ್ ಇಲ್ಲದೆ ಅವರು ಸೇಫ್ ಆಗಲಿದ್ದಾರೆ. ಇದರ ಜೊತೆಗೆ ಮುಂದಿನ ವಾರ ಡಬಲ್ ಎಲಿಮಿನೇಷನ್ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಗ್ ಬಾಸ್​ನಿಂದ ಹೊರ ಬಂದಮೇಲೆ ಮೋಕ್ಷಿತಾ ಮದುವೆ 

ಈ ಬಾರಿಯ ಬಿಗ್ ಬಾಸ್ ನಿರ್ವಹಣೆ ಬಗ್ಗೆ ಅಪಸ್ವರ ಎದ್ದಿದೆ. ಸರಿಯಾದ ರೀತಿಯಲ್ಲಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗುತ್ತಿಲ್ಲ ಎನ್ನುವ ಆರೋಪವನ್ನು ಅನೇಕರು ಮಾಡಿದ್ದಾರೆ. ಈ ಮೊದಲ ಸೀಸನ್​ಗಳಲ್ಲಿ ಎಲಿಮಿನೇಷನ್ ಇಲ್ಲದ ವಾರಗಳನ್ನು ಹುಡುಕ ಬೇಕಿತ್ತು. ಆದರೆ, ಈಗ ಹಾಗಿಲ್ಲ. ಸದ್ಯ ದೊಡ್ಮನೆಯಲ್ಲಿ ಉಗ್ರಂ ಮಂಜು, ಮೋಕ್ಷಿತಾ, ಗೌತಮಿ, ರಜತ್, ಧನರಾಜ್, ಹನುಮಂತ, ಚೈತ್ರಾ, ತ್ರಿವಿಕ್ರಂ ಹಾಗೂ ಭವ್ಯಾ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್