AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಲ್ಲಿ ಜೀವನ ಸಾಗಿಸಿದವರು. ಈಗ ಅವರು ಬೇಡಿಕೆಯ ಕಲಾವಿದ ಆಗಿದ್ದಾರೆ. ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಅವರು ಇಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಶೋನಲ್ಲಿ ಅವರು ಮಾತುಗಳು ಮೆಚ್ಚುಗೆ ಪಡೆಯುತ್ತಿವೆ.

ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ
ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 17, 2025 | 7:49 AM

Share

ಗಿಲ್ಲಿ ನಟನ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ಇಂದು ಬಿಗ್ ಬಾಸ್​ಗೆ ತೆರಳಿ ಸ್ಟಾರ್ ಪರ್ಫಾರ್ಮರ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಹಳೆಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾ ಮೂಲಕ ವೈರಲ್ ಮಾಡಲಾಗುತ್ತಾ ಇದೆ. ಇದರಲ್ಲಿ ಒಂದು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ವಿಡಿಯೋದಲ್ಲಿ ಗಿಲ್ಲಿ ಅವರು ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದರು. ಅದು ಈಗ ನಿಜವಾಗಿದೆ.

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಲ್ಲಿ ಜೀವನ ಸಾಗಿಸಿದವರು. ಈಗ ಅವರು ಬೇಡಿಕೆಯ ಕಲಾವಿದ ಆಗಿದ್ದಾರೆ. ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಅವರು ಇಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಶೋನಲ್ಲಿ ಅವರು ಮಾತುಗಳು ಮೆಚ್ಚುಗೆ ಪಡೆಯುತ್ತಿವೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು ಗೊತ್ತಾ?

ಗಿಲ್ಲಿ ನಟ ಅವರ ಹಳೆಯ ವಿಡಿಯೋ ಭಿನ್ನವಾಗಿದೆ. ಇದು ಶಾರ್ಟ್​ಮೂವಿ ವಿಡಿಯೋ ರೀತಿ ಕಾಣಿಸುತ್ತದೆ. ಸಹ ಕಲಾವಿದ, ‘ಯಾಕೋ ಗಿಲ್ಲಿ ಇಡೀ ದಿನ ಮೊಬೈಲ್​ನಲ್ಲೇ ಇರ್ತೀಯಾ. ಯೂಟ್ಯೂಬ್ ಮಾಡಿಕೋ. ಅದರ ಮೂಲಕ ಜನಪ್ರಿಯತೆ ಗಳಿಸಬಹುದು’ ಎನ್ನುತ್ತಾರೆ. ಆಗ ಗಿಲ್ಲಿ ನಟ, ‘ನಾನು ಒಂದಲ್ಲಾ ಒಂದು ದಿನ ಸೆಲೆಬ್ರಿಟಿ ಆಗಿಯೇ ಆಗುತ್ತೇನೆ’ ಎನ್ನುತ್ತಾರೆ. ಈ ರೀತಿಯಲ್ಲಿ ವಿಡಿಯೋ ಮೂಡಿ ಬಂದಿದೆ.

ಈಗ ಗಿಲ್ಲಿ ನಟ ಅವರು ನಿಜಕ್ಕೂ ಸೆಲೆಬ್ರಿಟಿ ಆಗಿದ್ದಾರೆ. ‘ಡೆವಿಲ್’ ಸಿನಿಮಾದಲ್ಲಿ ಅವರ ದೃಶ್ಯ ಬಂದಾಗ ಎಲ್ಲರೂ ಸಿಳ್ಳೆ ಹೊಡೆಯುತ್ತಾರೆ. ಚಪ್ಪಾಳೆ ತಟ್ಟುತ್ತಾರೆ. ಅವರ ಹೆಸರಲ್ಲಿ ಸಾಕಷ್ಟು ಫ್ಯಾನ್​ ಪೇಜ್​ಗಳು ಸೃಷ್ಟಿ ಆಗಿವೆ. ಇದಕ್ಕಿಂತ ಖುಷಿಯ ವಿಷಯ ಮತ್ತೇನಿದೆ? ಗಿಲ್ಲಿ ಅವರು ಬಿಗ್ ಬಾಸ್ ಗೆಲ್ಲುತ್ತಾರೆ ಎಂದು ಅನೇಕರು ಹೇಳುತ್ತಿದ್ದಾರೆ. ಆದರೆ, ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ಒಬ್ಬರು ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​