AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲಿಮಿನೇಟ್​ ಆದವರೆಲ್ಲ ನಮ್ಮ ಗುಂಪಿ​ನವರೇ’; ನಮ್ರತಾಗೆ ಕೊನೆಗೂ ಆಯ್ತು ಜ್ಞಾನೋದಯ

Bigg Boss Kannada: ವಿನಯ್​ ಟೀಂನಲ್ಲಿದ್ದವರ ಪೈಕಿ ರಕ್ಷಕ್, ಸ್ನೇಹಿತ್​, ನೀತು ಮೊದಲಾದವರು ಎಲಿಮಿನೇಟ್ ಆಗಿದ್ದಾರೆ. ಈಗ ಅವರ ಟೀಂನಲ್ಲಿ ಉಳಿದಿರೋದು ವಿನಯ್, ನಮ್ರತಾ ಹಾಗೂ ಮೈಕಲ್ ಮಾತ್ರ. ಈ ಬಗ್ಗೆ ಚರ್ಚೆ ನಡೆದಿದೆ.

‘ಎಲಿಮಿನೇಟ್​ ಆದವರೆಲ್ಲ ನಮ್ಮ ಗುಂಪಿ​ನವರೇ’; ನಮ್ರತಾಗೆ ಕೊನೆಗೂ ಆಯ್ತು ಜ್ಞಾನೋದಯ
ಬಿಗ್ ಬಾಸ್ ಮನೆ
ರಾಜೇಶ್ ದುಗ್ಗುಮನೆ
|

Updated on: Dec 15, 2023 | 7:31 AM

Share

ಬಿಗ್ ಬಾಸ್’ ಮನೆಯಲ್ಲಿ ಈ ಸೀಸನ್​ನಲ್ಲಿ ಗ್ರೂಪಿಸಂ ಜೋರಾಗಿಯೇ ಇದೆ. ಅದು ಎಲ್ಲರಿಗೂ ಎದ್ದು ಕಾಣಿಸಿದೆ. ವಿನಯ್ ಅವರು ಗುಂಪುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ಮಾಡುತ್ತಿದ್ದಾರೆ. ವಿನಯ್ (Vinay)​ ಅವರು ಇದರ ರುವಾರಿ. ಕೆಲವರಂತೂ ಅವರನ್ನೇ ಗೆಲ್ಲಿಸಬೇಕು ಎಂದೇ ಆಡುತ್ತಿದ್ದಾರೆ. ಇದು ಹೊರ ಜಗತ್ತಿಗೆ ಎದ್ದು ಕಾಣುತ್ತಿದೆ. ಈ ಕಾರಣದಿಂದಲೇ ಅವರ ಟೀಂನವರೇ ಕಡಿಮೆ ವೋಟ್ ಪಡೆದು ಎಲಿಮಿನೇಟ್ ಆಗುತ್ತಿದ್ದಾರೆ. ಈ ವಿಚಾರದಲ್ಲಿ ನಮ್ರತಾಗೆ ಜ್ಞಾನೋದಯ ಆಗಿದೆ. ಈ ಕುರಿತು ಅವರು ಚರ್ಚೆ ಮಾಡಿದ್ದಾರೆ.

ಟಾಸ್ಕ್ ಆಡುವ ಸಂದರ್ಭದಲ್ಲಿ ಒಂದು ಗ್ರೂಪ್ ನಿರ್ಮಾಣ ಆಗಿತ್ತು. ವಿನಯ್ ಅವರು ಇದರ ಲೀಡರ್ ಆಗಿದ್ದರು. ‘ಫಿನಾಲೆವರೆಗೆ ಈ ಟೀಂನಲ್ಲೇ ಆಡೋಣ’ ಎಂದಿದ್ದರು ವಿನಯ್. ಈ ಟೀಂನಲ್ಲಿದ್ದವರ ಪೈಕಿ ರಕ್ಷಕ್, ಸ್ನೇಹಿತ್​, ನೀತು ಮೊದಲಾದವರು ಎಲಿಮಿನೇಟ್ ಆಗಿದ್ದಾರೆ. ಈಗ ಅವರ ಟೀಂನಲ್ಲಿ ಉಳಿದಿರೋದು ವಿನಯ್, ನಮ್ರತಾ ಹಾಗೂ ಮೈಕಲ್ ಮಾತ್ರ. ಈ ಬಗ್ಗೆ ಚರ್ಚೆ ನಡೆದಿದೆ.

‘ಈ ವಾರ ಯಾರು ಹೋಗ್ತಾರೆ’ ಎಂದು ನಮ್ರತಾಗೆ ತುಕಾಲಿ ಸಂತೋಷ್ ಪ್ರಶ್ನೆ ಮಾಡಿದರು. ‘ಸಿರಿ ಮ್ಯಾಮ್, ಮೈಕಲ್ ಅಥವಾ ಪವಿ ಔಟ್ ಆಗಬಹುದು’ ಎಂದರು ನಮ್ರತಾ. ‘ಮತ್ತೆ ನಿಮ್ಮ ಟೀಂಗೆ ಬಂತಲ್ಲ. ಹಾಗಿದ್ರೆ ಮತ್ತೊಂದು ಎಲಿಮಿನೇಷನ್​ ನಿಮ್ಮ ಟೀಂನಿಂದಲೇ’ ಎಂದರು ಸಂತು. ಪವಿ, ಮೈಕಲ್ ಹಾಗೂ ಸಿರಿ ವಿನಯ್ ಟೀಂನಲ್ಲೇ ಹೆಚ್ಚು ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಸಂತೋಷ್ ಈ ಮಾತನ್ನು ಹೇಳಿದ್ದಾರೆ.

‘ಹೌದು ನಮ್ಮ ಟೀಂನಿಂದ ಎಲ್ಲ ಹೋಗಿ ಬಿಡ್ತಾರೇನೋ ಅನಿಸುತ್ತಿದೆ. ಹೋದವರೆಲ್ಲ ನಮ್ಮ ಟೀಂನವರೇ’ ಎಂದು ನಮ್ರತಾ ಬೇಸರ ಮಾಡಿಕೊಂಡರು. ‘ನಿಮ್ಮ ಗುಂಪಿಗೆ ಯಾರೋ ಮಾಟ ಮಾಡಿಸಿದಾರೆ’ ಎಂದರು ಸಂತೋಷ್. ಈ ವಾರ ಪ್ರಮುಖರೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ‘ಐ ಡೋಂಟ್ ಗಿವ್ ಎ ಡ್ಯಾಮ್’: ಬಿಗ್​ಬಾಸ್ ಮನೆಯಲ್ಲೀಗ ಇಬ್ಬರು ವಿನಯ್?

ಮೈಕಲ್ ಈ ವಾರ ತುಂಬಾನೇ ಅಗ್ರೆಸ್ಸಿವ್​ ಆಗಿ ನಡೆದುಕೊಳ್ಳುತ್ತಿದ್ದಾರೆ. ವಿನಯ್ ಜೊತೆ ಸೇರಿ ಅವರು ಕೂಡ ಆಟವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಆಟವನ್ನು ಅವರು ಪ್ರದರ್ಶನ ಮಾಡುತ್ತಿಲ್ಲ. ಈ ವಾರ ಅವರೇ ಎಲಿಮಿನೇಟ್ ಆದರೂ ಅಚ್ಚರಿ ಏನಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ