AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರು’ ಕಥೆಗೆ ಟ್ವಿಸ್ಟ್​ ನೀಡಲು ಮತ್ತೆ ಬಂದ ಎಸ್​. ನಾರಾಯಣ್​; ರೋಚಕತೆ ಮೂಡಿಸಿದ ಎಪಿಸೋಡ್​

‘ಪಾರು’ ಸೀರಿಯಲ್​ ಕಥೆಯಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಆ ಮೂಲಕ ಪ್ರೇಕ್ಷಕರಿಗೆ ಈ ಧಾರಾವಾಹಿ ಇನ್ನಷ್ಟು ಹತ್ತಿರವಾಗಿದೆ.

‘ಪಾರು’ ಕಥೆಗೆ ಟ್ವಿಸ್ಟ್​ ನೀಡಲು ಮತ್ತೆ ಬಂದ ಎಸ್​. ನಾರಾಯಣ್​; ರೋಚಕತೆ ಮೂಡಿಸಿದ ಎಪಿಸೋಡ್​
ಮೋಕ್ಷಿತಾ ಪೈ, ಎಸ್​. ನಾರಾಯಣ್​, ವಿನಯಾ ಪ್ರಸಾದ್​
Follow us
TV9 Web
| Updated By: ಮದನ್​ ಕುಮಾರ್​

Updated on: Feb 18, 2022 | 7:54 AM

ಧಾರಾವಾಹಿಗಳ ನಡುವೆ ಈಗ ಭಾರಿ ಪೈಪೋಟಿ ಇದೆ. ಕನ್ನಡ ಕಿರುತೆರೆಯ ಎಲ್ಲ ಸೀರಿಯಲ್​ಗಳು ಬಗೆಬಗೆಯ ಪ್ರಯತ್ನಗಳನ್ನು ಮಾಡುತ್ತಿವೆ. ಸಿನಿಮಾದ ಗುಣಮಟ್ಟದಲ್ಲೇ ಧಾರಾವಾಹಿಗಳು ಮೂಡಿಬರುತ್ತಿವೆ. ಜೀ ಕನ್ನಡ ವಾಹಿನಿಯ ‘ಪಾರು’ ಸೀರಿಯಲ್​ (Paaru Kannada Serial) ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿ ಆಗುತ್ತಿದೆ. ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿ ಭರ್ಜರಿ ಪೈಪೋಟಿ ನೀಡುತ್ತಿದೆ. ಸಿನಿಮಾದಲ್ಲಿ ಫೇಮಸ್​ ಆದ ವಿನಯಾ ಪ್ರಸಾದ್​, ಎಸ್​. ನಾರಾಯಣ್​ ಮುಂತಾದ ಪ್ರತಿಭಾವಂತ, ಹಿರಿಯ ಕಲಾವಿದರ ನಟನೆಯಿಂದಾಗಿ ‘ಪಾರು’ ಧಾರಾವಾಹಿಯ ಹಿರಿಮೆ ಹೆಚ್ಚಿದೆ. ನಟ ಎಸ್​. ನಾರಾಯಣ್​ (S. Narayan) ಅವರು ಈ ಸೀರಿಯಲ್​ನಲ್ಲಿ ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಆದರೆ ಎಲ್ಲ ಎಪಿಸೋಡ್​ನಲ್ಲಿಯೂ ಅವರು ಕಾಣಿಸಿಕೊಂಡಿಲ್ಲ. ಕಿರುತೆರೆ ಪ್ರೇಕ್ಷಕರು ಆ ಪಾತ್ರವನ್ನು ಹಲವು ವಾರಗಳ ಕಾಲ ಮಿಸ್​ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ಎಪಿಸೋಡ್​ಗಳಲ್ಲಿ ಎಸ್​. ನಾರಾಯಣ್​ ಮತ್ತೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಅವರ ಆಗಮನದಿಂದ ಕಥೆಗೆ ಟ್ವಿಸ್ಟ್​ (Paaru Serial Update) ಸಿಗುತ್ತಿದೆ. ಇದರಿಂದ ‘ಪಾರು’ ಸೀರಿಯಲ್​ ಕೌತುಕದ ಘಟ್ಟ ತಲುಪಿದೆ.

ವೀಕ್ಷಕರ ವಲಯದಲ್ಲಿ ‘ಪಾರು’ ಧಾರಾವಾಹಿ ಹೆಚ್ಚು ಫೇಮಸ್​ ಆಗಿದೆ. ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ಈ ಸೀರಿಯಲ್​ ಈಗಾಗಲೇ 800 ಎಪಿಸೋಡ್​ಗಳನ್ನು ಪೂರೈಸಿದೆ. 800 ಕಂತುಗಳನ್ನು ಪೂರೈಸಿದ ಖುಷಿಗೆ ಇತ್ತೀಚೆಗೆ ಇಡೀ ತಂಡ ಸಂಭ್ರಮಿಸಿತ್ತು. ಶೂಟಿಂಗ್​ ಸೆಟ್​ನಲ್ಲಿ ಕೇಕ್​ ಕತ್ತರಿಸುವ ಮೂಲಕ ಖಷಿಯ ಕ್ಷಣವನ್ನು ಸೆಲೆಬ್ರೇಟ್​ ಮಾಡಿದ್ದರು ‘ಪಾರು’ ತಂಡದವರು. ಈಗ ಕಥೆಯಲ್ಲಿ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರಿಗೆ ಈ ಸೀರಿಯಲ್​ ಇನ್ನಷ್ಟು ಹತ್ತಿರವಾಗಿದೆ.

ವೀರಯ್ಯ ದೇವ ಎಂಬ ಪಾತ್ರವನ್ನು ಮಾಡಿರುವ ಎಸ್​. ನಾರಾಯಣ್​ ಅವರು ಆದಿತ್ಯ ಮತ್ತು ಪಾರುಗೆ ಸಹಾಯ ಮಾಡಲು ಎಂಟ್ರಿ ನೀಡಿದ್ದಾರೆ. ವೀರಯ್ಯ ದೇವನ ಎಂಟ್ರಿಯಿಂದಾಗಿ ಅಖಿಲಾಂಡೇಶ್ವರಿಗೆ ಆತಂಕ ಹೆಚ್ಚಾಗಿದೆ. ಆದಿ ಮತ್ತು ಯಾಮಿನಿ ಮದುವೆಗೆ ಸಕಲ ಸಿದ್ಧತೆ ನಡೆದಿತ್ತು. ಆದರೆ ಅದನ್ನು ತಡೆಯಲು ವೀರಯ್ಯ ದೇವ ಪಣ ತೊಟ್ಟಿದ್ದಾರೆ. ಅವರ ವಿರುದ್ಧ ಸೂಕ್ತ ಸಂಚು ರೂಪಿಸಲು ಅಖಿಲಾಂಡೇಶ್ವರಿ ಕೂಡ ತಯಾರಾಗುತ್ತಿದ್ದಾಳೆ. ಆದರೆ ಅಸಲಿ ಟ್ವಿಸ್ಟ್​ ಬೇರೆಯೇ ಇದೆ.

ಆದಿಯನ್ನು ಮದುವೆ ಆಗಲು ಹೊರಟಿರುವ ಯಾಮಿನಿ ಹಿಂದೆ ಕೆಟ್ಟ ಉದ್ದೇಶ ಇದೆ ಎಂಬುದು ಅಖಿಲಾಂಡೇಶ್ವರಿಗೆ ಈಗ ಗೊತ್ತಾಗಿದೆ. ಅರಸನಕೋಟೆ ವಂಶಕ್ಕೆ ಆಪತ್ತು ಇದೆ ಎಂಬುದರ ಸೂಚನೆ ಸಹ ಸಿಕ್ಕಿದೆ. ಹಾಗಾದರೆ ಅಖಿಲಾಂಡೇಶ್ವರಿ ಈಗೇನು ಮಾಡುತ್ತಾಳೆ ಎಂಬ ಕೌತುಕದೊಂದಿದೆ ‘ಪಾರು’ ಧಾರಾವಾಹಿ ಸಾಗುತ್ತಿದೆ.

ಇದನ್ನೂ ಓದಿ:

ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ರಂಜನಿ ರಾಘವನ್; ಅಭಿಮಾನಿಗಳಿಂದ ಮೆಚ್ಚುಗೆ

ಬೆಳ್ಳಿತೆರೆ ಮೇಲೆ ಬರಲಿದೆ ‘ಶಕ್ತಿಮಾನ್​’ ಧಾರಾವಾಹಿ; ಹೀರೋ ಬಗ್ಗೆ ಗುಟ್ಟು ಕಾಯ್ದುಕೊಂಡ ಸೋನಿ ಪಿಕ್ಚರ್ಸ್​

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ