‘ಪಾರು’ ಕಥೆಗೆ ಟ್ವಿಸ್ಟ್​ ನೀಡಲು ಮತ್ತೆ ಬಂದ ಎಸ್​. ನಾರಾಯಣ್​; ರೋಚಕತೆ ಮೂಡಿಸಿದ ಎಪಿಸೋಡ್​

‘ಪಾರು’ ಸೀರಿಯಲ್​ ಕಥೆಯಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಆ ಮೂಲಕ ಪ್ರೇಕ್ಷಕರಿಗೆ ಈ ಧಾರಾವಾಹಿ ಇನ್ನಷ್ಟು ಹತ್ತಿರವಾಗಿದೆ.

‘ಪಾರು’ ಕಥೆಗೆ ಟ್ವಿಸ್ಟ್​ ನೀಡಲು ಮತ್ತೆ ಬಂದ ಎಸ್​. ನಾರಾಯಣ್​; ರೋಚಕತೆ ಮೂಡಿಸಿದ ಎಪಿಸೋಡ್​
ಮೋಕ್ಷಿತಾ ಪೈ, ಎಸ್​. ನಾರಾಯಣ್​, ವಿನಯಾ ಪ್ರಸಾದ್​
Follow us
| Updated By: ಮದನ್​ ಕುಮಾರ್​

Updated on: Feb 18, 2022 | 7:54 AM

ಧಾರಾವಾಹಿಗಳ ನಡುವೆ ಈಗ ಭಾರಿ ಪೈಪೋಟಿ ಇದೆ. ಕನ್ನಡ ಕಿರುತೆರೆಯ ಎಲ್ಲ ಸೀರಿಯಲ್​ಗಳು ಬಗೆಬಗೆಯ ಪ್ರಯತ್ನಗಳನ್ನು ಮಾಡುತ್ತಿವೆ. ಸಿನಿಮಾದ ಗುಣಮಟ್ಟದಲ್ಲೇ ಧಾರಾವಾಹಿಗಳು ಮೂಡಿಬರುತ್ತಿವೆ. ಜೀ ಕನ್ನಡ ವಾಹಿನಿಯ ‘ಪಾರು’ ಸೀರಿಯಲ್​ (Paaru Kannada Serial) ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿ ಆಗುತ್ತಿದೆ. ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿ ಭರ್ಜರಿ ಪೈಪೋಟಿ ನೀಡುತ್ತಿದೆ. ಸಿನಿಮಾದಲ್ಲಿ ಫೇಮಸ್​ ಆದ ವಿನಯಾ ಪ್ರಸಾದ್​, ಎಸ್​. ನಾರಾಯಣ್​ ಮುಂತಾದ ಪ್ರತಿಭಾವಂತ, ಹಿರಿಯ ಕಲಾವಿದರ ನಟನೆಯಿಂದಾಗಿ ‘ಪಾರು’ ಧಾರಾವಾಹಿಯ ಹಿರಿಮೆ ಹೆಚ್ಚಿದೆ. ನಟ ಎಸ್​. ನಾರಾಯಣ್​ (S. Narayan) ಅವರು ಈ ಸೀರಿಯಲ್​ನಲ್ಲಿ ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಆದರೆ ಎಲ್ಲ ಎಪಿಸೋಡ್​ನಲ್ಲಿಯೂ ಅವರು ಕಾಣಿಸಿಕೊಂಡಿಲ್ಲ. ಕಿರುತೆರೆ ಪ್ರೇಕ್ಷಕರು ಆ ಪಾತ್ರವನ್ನು ಹಲವು ವಾರಗಳ ಕಾಲ ಮಿಸ್​ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ಎಪಿಸೋಡ್​ಗಳಲ್ಲಿ ಎಸ್​. ನಾರಾಯಣ್​ ಮತ್ತೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಅವರ ಆಗಮನದಿಂದ ಕಥೆಗೆ ಟ್ವಿಸ್ಟ್​ (Paaru Serial Update) ಸಿಗುತ್ತಿದೆ. ಇದರಿಂದ ‘ಪಾರು’ ಸೀರಿಯಲ್​ ಕೌತುಕದ ಘಟ್ಟ ತಲುಪಿದೆ.

ವೀಕ್ಷಕರ ವಲಯದಲ್ಲಿ ‘ಪಾರು’ ಧಾರಾವಾಹಿ ಹೆಚ್ಚು ಫೇಮಸ್​ ಆಗಿದೆ. ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ಈ ಸೀರಿಯಲ್​ ಈಗಾಗಲೇ 800 ಎಪಿಸೋಡ್​ಗಳನ್ನು ಪೂರೈಸಿದೆ. 800 ಕಂತುಗಳನ್ನು ಪೂರೈಸಿದ ಖುಷಿಗೆ ಇತ್ತೀಚೆಗೆ ಇಡೀ ತಂಡ ಸಂಭ್ರಮಿಸಿತ್ತು. ಶೂಟಿಂಗ್​ ಸೆಟ್​ನಲ್ಲಿ ಕೇಕ್​ ಕತ್ತರಿಸುವ ಮೂಲಕ ಖಷಿಯ ಕ್ಷಣವನ್ನು ಸೆಲೆಬ್ರೇಟ್​ ಮಾಡಿದ್ದರು ‘ಪಾರು’ ತಂಡದವರು. ಈಗ ಕಥೆಯಲ್ಲಿ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರಿಗೆ ಈ ಸೀರಿಯಲ್​ ಇನ್ನಷ್ಟು ಹತ್ತಿರವಾಗಿದೆ.

ವೀರಯ್ಯ ದೇವ ಎಂಬ ಪಾತ್ರವನ್ನು ಮಾಡಿರುವ ಎಸ್​. ನಾರಾಯಣ್​ ಅವರು ಆದಿತ್ಯ ಮತ್ತು ಪಾರುಗೆ ಸಹಾಯ ಮಾಡಲು ಎಂಟ್ರಿ ನೀಡಿದ್ದಾರೆ. ವೀರಯ್ಯ ದೇವನ ಎಂಟ್ರಿಯಿಂದಾಗಿ ಅಖಿಲಾಂಡೇಶ್ವರಿಗೆ ಆತಂಕ ಹೆಚ್ಚಾಗಿದೆ. ಆದಿ ಮತ್ತು ಯಾಮಿನಿ ಮದುವೆಗೆ ಸಕಲ ಸಿದ್ಧತೆ ನಡೆದಿತ್ತು. ಆದರೆ ಅದನ್ನು ತಡೆಯಲು ವೀರಯ್ಯ ದೇವ ಪಣ ತೊಟ್ಟಿದ್ದಾರೆ. ಅವರ ವಿರುದ್ಧ ಸೂಕ್ತ ಸಂಚು ರೂಪಿಸಲು ಅಖಿಲಾಂಡೇಶ್ವರಿ ಕೂಡ ತಯಾರಾಗುತ್ತಿದ್ದಾಳೆ. ಆದರೆ ಅಸಲಿ ಟ್ವಿಸ್ಟ್​ ಬೇರೆಯೇ ಇದೆ.

ಆದಿಯನ್ನು ಮದುವೆ ಆಗಲು ಹೊರಟಿರುವ ಯಾಮಿನಿ ಹಿಂದೆ ಕೆಟ್ಟ ಉದ್ದೇಶ ಇದೆ ಎಂಬುದು ಅಖಿಲಾಂಡೇಶ್ವರಿಗೆ ಈಗ ಗೊತ್ತಾಗಿದೆ. ಅರಸನಕೋಟೆ ವಂಶಕ್ಕೆ ಆಪತ್ತು ಇದೆ ಎಂಬುದರ ಸೂಚನೆ ಸಹ ಸಿಕ್ಕಿದೆ. ಹಾಗಾದರೆ ಅಖಿಲಾಂಡೇಶ್ವರಿ ಈಗೇನು ಮಾಡುತ್ತಾಳೆ ಎಂಬ ಕೌತುಕದೊಂದಿದೆ ‘ಪಾರು’ ಧಾರಾವಾಹಿ ಸಾಗುತ್ತಿದೆ.

ಇದನ್ನೂ ಓದಿ:

ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ರಂಜನಿ ರಾಘವನ್; ಅಭಿಮಾನಿಗಳಿಂದ ಮೆಚ್ಚುಗೆ

ಬೆಳ್ಳಿತೆರೆ ಮೇಲೆ ಬರಲಿದೆ ‘ಶಕ್ತಿಮಾನ್​’ ಧಾರಾವಾಹಿ; ಹೀರೋ ಬಗ್ಗೆ ಗುಟ್ಟು ಕಾಯ್ದುಕೊಂಡ ಸೋನಿ ಪಿಕ್ಚರ್ಸ್​

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ